Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

ಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯವಿದು ಎಂಬ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. “ದೀಪಿಕಾ ಪಡುಕೋಣೆ ಮುಂಬೈನಲ್ಲಿ ಮದ್ಯ ಖರೀದಿಸುತ್ತಿರುವುದು. ಡ್ರೈವರ್‌ ಇಲ್ಲ, ಕೆಲಸಗಾರರು ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉತ್ತಮ ಉದಾಹರಣೆ” ಎಂದು ವಿಕಾಸ್‌ ಭಾಟಿಯಾ ಎಂಬುವವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಇದೇ ರೀತಿಯ ನೂರಾರು ಸಂದೇಶಗಳು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿವೆ. ಮಾಸ್ಕ್‌ ಧರಿಸಿರುವ ಯುವತಿಯೊಬ್ಬಳು ಕೈಯಲ್ಲಿ ಕೆಲ ವಸ್ತುಗಳನ್ನು ಹಿಡಿದು ಅಂಗಡಿಯಿಂದ ಹೊರಬರುತ್ತಿರುವ ವಿಡಿಯೋವನ್ನು ಅದರ ಜೊತೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ.

Deepika Padukone buying liquor in Mumbai….. Best social distancing example…… No servants……… No drivers

Posted by Vikas Bhatia on Wednesday, May 6, 2020

ಫ್ಯಾಕ್ಟ್‌ಚೆಕ್‌

ಆ ವಿಡಿಯೋದಲ್ಲಿರುವವರು ನಟಿ ರಕುಲ್‌ ಪ್ರೀತ್‌ ಸಿಂಗ್‌ ಆಗಿದ್ದಾರೆ. ಜೊತಗೆ ಕೈಯಲ್ಲಿರುವು ಮದ್ಯ ಅಲ್ಲ ಬದಲಿಗೆ ಔಷಧಿಗಳಾಗಿವೆ. ಮುಂಬೈನ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಕೆಲವು ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ವಿಡಿಯೋವನ್ನೇ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವುದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಅಲ್ಲದೇ ಮೇ 04 ರಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದ ಅಲ್ಲಿನ ಸರ್ಕಾರ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದು ಮೇ 06ರಂದು ಮದ್ಯ ಮಾರಾಟವನ್ನು ಮತ್ತೆ ನಿಷೇಧಿಸಿದೆ.

ಬಾಲಿವುಡ್‌ನ ಛಾಯಾಗ್ರಾಹಕ ವೈರಲ್ ಭಯಾನಿ ಅವರ ತಂಡವು ಸೆರೆಹಿಡಿದ ವೀಡಿಯೊ ಅದಾಗಿದ್ದು, ನಟಿ ರಕುಲ್‌ ಪ್ರೀತ್‌ ಸಿಂಗ್ ಮೇ 05 ರ ಸಂಜೆ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ತೆಗೆದ ವಿಡಿಯೋ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೇ ಭಯಾನಿಯವರ ಟಿಕ್‌ಟಾಕ್‌ ಅಕೌಂಟ್‌ನಲ್ಲಿ ಆ ವಿಡಿಯೊವನ್ನು ಅಪ್‌ಲೋಡ್‌ ಮಾಡಲಾಗಿದೆ.

ಇನ್ನು ಕೆಆರ್‌ಕೆ ಅಫಿಷಿಯಲ್‌ ಎನ್ನುವ ಟ್ವಿಟ್ಟರ್‌ ಅಕೌಂಟ್‌ನಿಂದ “ರಕುಲ್‌ ಪ್ರೀತ್‌ ಸಿಂಗ್ ರವರು ಲಾಕ್‌ಡೌನ್‌ ಸಮಯದಲ್ಲಿ ಏನನ್ನು ಖರೀದಿಸುತ್ತಿದ್ದಾರೆ? ಆಲ್ಕೊಹಾಲ್‌ ಖರೀದಿಸಿದ್ದಾರೆಯೇ?” ಎಂದು ಪ್ರಶ್ನಿಸಿದೆ. ಇದಕ್ಕೆ ರೀಟ್ವೀಟ್‌ ಮೂಲಕ ಉತ್ತರಿಸಿರುವ ರಕುಲ್‌ ಪ್ರೀತ್‌ ಸಿಂಗ್ ” ವಾವ್‌! ಮೆಡಿಕಲ್‌ನಲ್ಲಿ ಮದ್ಯ ಮಾರುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು ಟಾಂಗ್‌ ಕೊಟ್ಟಿದ್ದಾರೆ.

ಮತ್ತೊಬ್ಬರು ಈ ವಿಷಯವಾಗಿ ಪ್ರತಿಕ್ರಿಯಿಸಿ ಅದು ರಕುಲ್‌ ಪ್ರೀತ್‌ ಸಿಂಗ್ ಇರಲಿ ಅಥವಾ ದೀಪಿಕಾ ಪಡುಕೋಣೆಯೇ ಆಗಿರಲಿ ಮದ್ಯ ಖರೀದಿಸಿದರೆ ನಿಮಗೇನು ತೊಂದರೆ? ಮದ್ಯ ಖರೀದಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎಂಜೆ ಎನ್ನುವವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬಾಂದ್ರಾ ಪಾಲಿ ಹಿಲ್‌ನಲ್ಲಿರುವ ಮಾಡ್ರನ್‌ ಮೆಡಿಕಲ್‌ ಶಾಪ್‌ ತನ್ನ ಅಂಗಡಿಯ ಚಿತ್ರಗಳನ್ನು ಗೂಗಲ್‌ನಲ್ಲಿ ಫೋಟೊಗಳನ್ನು ಅಪ್‌ಲೋಡ್‌ ಮಾಡಿದೆ. ಅವುಗಳನ್ನು ಮತ್ತು ವಿಡಿಯೋದಲ್ಲಿರುವ ಚಿತ್ರಗಳನ್ನು ಹೋಲಿಕೆ ಮಾಡಿದ್ದಲ್ಲಿ ಪೂರ್ಣ ಸಾಮ್ಯತೆ ಕಂಡುಬಂದಿದ್ದು ಅದು ಮದ್ಯದಂಗಡಿಯಲ್ಲ, ಮೆಡಿಕಲ್‌ ಎಂಬುದು ಸಾಬೀತಾಗಿದೆ. ಆದರೆ ಕೆಲವರು ದೀಪಿಕಾ ಮದ್ಯ ಖರೀದಿಸಿದ್ದು ಎಂದು ಸುಳ್ಳು ಸಂದೇಶವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...