Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

ಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯವಿದು ಎಂಬ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. “ದೀಪಿಕಾ ಪಡುಕೋಣೆ ಮುಂಬೈನಲ್ಲಿ ಮದ್ಯ ಖರೀದಿಸುತ್ತಿರುವುದು. ಡ್ರೈವರ್‌ ಇಲ್ಲ, ಕೆಲಸಗಾರರು ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉತ್ತಮ ಉದಾಹರಣೆ” ಎಂದು ವಿಕಾಸ್‌ ಭಾಟಿಯಾ ಎಂಬುವವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಇದೇ ರೀತಿಯ ನೂರಾರು ಸಂದೇಶಗಳು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿವೆ. ಮಾಸ್ಕ್‌ ಧರಿಸಿರುವ ಯುವತಿಯೊಬ್ಬಳು ಕೈಯಲ್ಲಿ ಕೆಲ ವಸ್ತುಗಳನ್ನು ಹಿಡಿದು ಅಂಗಡಿಯಿಂದ ಹೊರಬರುತ್ತಿರುವ ವಿಡಿಯೋವನ್ನು ಅದರ ಜೊತೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ.

Deepika Padukone buying liquor in Mumbai….. Best social distancing example…… No servants……… No drivers

Posted by Vikas Bhatia on Wednesday, May 6, 2020

ಫ್ಯಾಕ್ಟ್‌ಚೆಕ್‌

ಆ ವಿಡಿಯೋದಲ್ಲಿರುವವರು ನಟಿ ರಕುಲ್‌ ಪ್ರೀತ್‌ ಸಿಂಗ್‌ ಆಗಿದ್ದಾರೆ. ಜೊತಗೆ ಕೈಯಲ್ಲಿರುವು ಮದ್ಯ ಅಲ್ಲ ಬದಲಿಗೆ ಔಷಧಿಗಳಾಗಿವೆ. ಮುಂಬೈನ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಕೆಲವು ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ವಿಡಿಯೋವನ್ನೇ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವುದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಅಲ್ಲದೇ ಮೇ 04 ರಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದ ಅಲ್ಲಿನ ಸರ್ಕಾರ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದು ಮೇ 06ರಂದು ಮದ್ಯ ಮಾರಾಟವನ್ನು ಮತ್ತೆ ನಿಷೇಧಿಸಿದೆ.

ಬಾಲಿವುಡ್‌ನ ಛಾಯಾಗ್ರಾಹಕ ವೈರಲ್ ಭಯಾನಿ ಅವರ ತಂಡವು ಸೆರೆಹಿಡಿದ ವೀಡಿಯೊ ಅದಾಗಿದ್ದು, ನಟಿ ರಕುಲ್‌ ಪ್ರೀತ್‌ ಸಿಂಗ್ ಮೇ 05 ರ ಸಂಜೆ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ತೆಗೆದ ವಿಡಿಯೋ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೇ ಭಯಾನಿಯವರ ಟಿಕ್‌ಟಾಕ್‌ ಅಕೌಂಟ್‌ನಲ್ಲಿ ಆ ವಿಡಿಯೊವನ್ನು ಅಪ್‌ಲೋಡ್‌ ಮಾಡಲಾಗಿದೆ.

ಇನ್ನು ಕೆಆರ್‌ಕೆ ಅಫಿಷಿಯಲ್‌ ಎನ್ನುವ ಟ್ವಿಟ್ಟರ್‌ ಅಕೌಂಟ್‌ನಿಂದ “ರಕುಲ್‌ ಪ್ರೀತ್‌ ಸಿಂಗ್ ರವರು ಲಾಕ್‌ಡೌನ್‌ ಸಮಯದಲ್ಲಿ ಏನನ್ನು ಖರೀದಿಸುತ್ತಿದ್ದಾರೆ? ಆಲ್ಕೊಹಾಲ್‌ ಖರೀದಿಸಿದ್ದಾರೆಯೇ?” ಎಂದು ಪ್ರಶ್ನಿಸಿದೆ. ಇದಕ್ಕೆ ರೀಟ್ವೀಟ್‌ ಮೂಲಕ ಉತ್ತರಿಸಿರುವ ರಕುಲ್‌ ಪ್ರೀತ್‌ ಸಿಂಗ್ ” ವಾವ್‌! ಮೆಡಿಕಲ್‌ನಲ್ಲಿ ಮದ್ಯ ಮಾರುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು ಟಾಂಗ್‌ ಕೊಟ್ಟಿದ್ದಾರೆ.

ಮತ್ತೊಬ್ಬರು ಈ ವಿಷಯವಾಗಿ ಪ್ರತಿಕ್ರಿಯಿಸಿ ಅದು ರಕುಲ್‌ ಪ್ರೀತ್‌ ಸಿಂಗ್ ಇರಲಿ ಅಥವಾ ದೀಪಿಕಾ ಪಡುಕೋಣೆಯೇ ಆಗಿರಲಿ ಮದ್ಯ ಖರೀದಿಸಿದರೆ ನಿಮಗೇನು ತೊಂದರೆ? ಮದ್ಯ ಖರೀದಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎಂಜೆ ಎನ್ನುವವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬಾಂದ್ರಾ ಪಾಲಿ ಹಿಲ್‌ನಲ್ಲಿರುವ ಮಾಡ್ರನ್‌ ಮೆಡಿಕಲ್‌ ಶಾಪ್‌ ತನ್ನ ಅಂಗಡಿಯ ಚಿತ್ರಗಳನ್ನು ಗೂಗಲ್‌ನಲ್ಲಿ ಫೋಟೊಗಳನ್ನು ಅಪ್‌ಲೋಡ್‌ ಮಾಡಿದೆ. ಅವುಗಳನ್ನು ಮತ್ತು ವಿಡಿಯೋದಲ್ಲಿರುವ ಚಿತ್ರಗಳನ್ನು ಹೋಲಿಕೆ ಮಾಡಿದ್ದಲ್ಲಿ ಪೂರ್ಣ ಸಾಮ್ಯತೆ ಕಂಡುಬಂದಿದ್ದು ಅದು ಮದ್ಯದಂಗಡಿಯಲ್ಲ, ಮೆಡಿಕಲ್‌ ಎಂಬುದು ಸಾಬೀತಾಗಿದೆ. ಆದರೆ ಕೆಲವರು ದೀಪಿಕಾ ಮದ್ಯ ಖರೀದಿಸಿದ್ದು ಎಂದು ಸುಳ್ಳು ಸಂದೇಶವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...