Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

ಫ್ಯಾಕ್ಟ್‌ಚೆಕ್‌: ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ?

- Advertisement -
- Advertisement -

ಲಾಕ್‌ಡೌನ್‌ ಸಮಯದಲ್ಲಿ ಖ್ಯಾತ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವ ದೃಶ್ಯವಿದು ಎಂಬ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. “ದೀಪಿಕಾ ಪಡುಕೋಣೆ ಮುಂಬೈನಲ್ಲಿ ಮದ್ಯ ಖರೀದಿಸುತ್ತಿರುವುದು. ಡ್ರೈವರ್‌ ಇಲ್ಲ, ಕೆಲಸಗಾರರು ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉತ್ತಮ ಉದಾಹರಣೆ” ಎಂದು ವಿಕಾಸ್‌ ಭಾಟಿಯಾ ಎಂಬುವವರು ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಇದೇ ರೀತಿಯ ನೂರಾರು ಸಂದೇಶಗಳು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿವೆ. ಮಾಸ್ಕ್‌ ಧರಿಸಿರುವ ಯುವತಿಯೊಬ್ಬಳು ಕೈಯಲ್ಲಿ ಕೆಲ ವಸ್ತುಗಳನ್ನು ಹಿಡಿದು ಅಂಗಡಿಯಿಂದ ಹೊರಬರುತ್ತಿರುವ ವಿಡಿಯೋವನ್ನು ಅದರ ಜೊತೆಯಲ್ಲಿ ಹಂಚಿಕೊಳ್ಳಲಾಗುತ್ತಿದೆ.

Deepika Padukone buying liquor in Mumbai….. Best social distancing example…… No servants……… No drivers

Posted by Vikas Bhatia on Wednesday, May 6, 2020

ಫ್ಯಾಕ್ಟ್‌ಚೆಕ್‌

ಆ ವಿಡಿಯೋದಲ್ಲಿರುವವರು ನಟಿ ರಕುಲ್‌ ಪ್ರೀತ್‌ ಸಿಂಗ್‌ ಆಗಿದ್ದಾರೆ. ಜೊತಗೆ ಕೈಯಲ್ಲಿರುವು ಮದ್ಯ ಅಲ್ಲ ಬದಲಿಗೆ ಔಷಧಿಗಳಾಗಿವೆ. ಮುಂಬೈನ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಕೆಲವು ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ವಿಡಿಯೋವನ್ನೇ ದೀಪಿಕಾ ಪಡುಕೋಣೆ ಮದ್ಯ ಖರೀದಿಸುತ್ತಿರುವುದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.

ಅಲ್ಲದೇ ಮೇ 04 ರಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದ ಅಲ್ಲಿನ ಸರ್ಕಾರ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದು ಮೇ 06ರಂದು ಮದ್ಯ ಮಾರಾಟವನ್ನು ಮತ್ತೆ ನಿಷೇಧಿಸಿದೆ.

ಬಾಲಿವುಡ್‌ನ ಛಾಯಾಗ್ರಾಹಕ ವೈರಲ್ ಭಯಾನಿ ಅವರ ತಂಡವು ಸೆರೆಹಿಡಿದ ವೀಡಿಯೊ ಅದಾಗಿದ್ದು, ನಟಿ ರಕುಲ್‌ ಪ್ರೀತ್‌ ಸಿಂಗ್ ಮೇ 05 ರ ಸಂಜೆ ಬಾಂದ್ರಾದ ಪಾಲಿ ಹಿಲ್‌ನಲ್ಲಿನ ಮೆಡಿಕಲ್‌ ಸ್ಟೋರ್‌ನಿಂದ ಔಷಧಿಗಳನ್ನು ಖರೀದಿಸಿ ಹೊರಬರುತ್ತಿರುವ ತೆಗೆದ ವಿಡಿಯೋ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೇ ಭಯಾನಿಯವರ ಟಿಕ್‌ಟಾಕ್‌ ಅಕೌಂಟ್‌ನಲ್ಲಿ ಆ ವಿಡಿಯೊವನ್ನು ಅಪ್‌ಲೋಡ್‌ ಮಾಡಲಾಗಿದೆ.

ಇನ್ನು ಕೆಆರ್‌ಕೆ ಅಫಿಷಿಯಲ್‌ ಎನ್ನುವ ಟ್ವಿಟ್ಟರ್‌ ಅಕೌಂಟ್‌ನಿಂದ “ರಕುಲ್‌ ಪ್ರೀತ್‌ ಸಿಂಗ್ ರವರು ಲಾಕ್‌ಡೌನ್‌ ಸಮಯದಲ್ಲಿ ಏನನ್ನು ಖರೀದಿಸುತ್ತಿದ್ದಾರೆ? ಆಲ್ಕೊಹಾಲ್‌ ಖರೀದಿಸಿದ್ದಾರೆಯೇ?” ಎಂದು ಪ್ರಶ್ನಿಸಿದೆ. ಇದಕ್ಕೆ ರೀಟ್ವೀಟ್‌ ಮೂಲಕ ಉತ್ತರಿಸಿರುವ ರಕುಲ್‌ ಪ್ರೀತ್‌ ಸಿಂಗ್ ” ವಾವ್‌! ಮೆಡಿಕಲ್‌ನಲ್ಲಿ ಮದ್ಯ ಮಾರುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ” ಎಂದು ಟಾಂಗ್‌ ಕೊಟ್ಟಿದ್ದಾರೆ.

ಮತ್ತೊಬ್ಬರು ಈ ವಿಷಯವಾಗಿ ಪ್ರತಿಕ್ರಿಯಿಸಿ ಅದು ರಕುಲ್‌ ಪ್ರೀತ್‌ ಸಿಂಗ್ ಇರಲಿ ಅಥವಾ ದೀಪಿಕಾ ಪಡುಕೋಣೆಯೇ ಆಗಿರಲಿ ಮದ್ಯ ಖರೀದಿಸಿದರೆ ನಿಮಗೇನು ತೊಂದರೆ? ಮದ್ಯ ಖರೀದಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಎಂಜೆ ಎನ್ನುವವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಬಾಂದ್ರಾ ಪಾಲಿ ಹಿಲ್‌ನಲ್ಲಿರುವ ಮಾಡ್ರನ್‌ ಮೆಡಿಕಲ್‌ ಶಾಪ್‌ ತನ್ನ ಅಂಗಡಿಯ ಚಿತ್ರಗಳನ್ನು ಗೂಗಲ್‌ನಲ್ಲಿ ಫೋಟೊಗಳನ್ನು ಅಪ್‌ಲೋಡ್‌ ಮಾಡಿದೆ. ಅವುಗಳನ್ನು ಮತ್ತು ವಿಡಿಯೋದಲ್ಲಿರುವ ಚಿತ್ರಗಳನ್ನು ಹೋಲಿಕೆ ಮಾಡಿದ್ದಲ್ಲಿ ಪೂರ್ಣ ಸಾಮ್ಯತೆ ಕಂಡುಬಂದಿದ್ದು ಅದು ಮದ್ಯದಂಗಡಿಯಲ್ಲ, ಮೆಡಿಕಲ್‌ ಎಂಬುದು ಸಾಬೀತಾಗಿದೆ. ಆದರೆ ಕೆಲವರು ದೀಪಿಕಾ ಮದ್ಯ ಖರೀದಿಸಿದ್ದು ಎಂದು ಸುಳ್ಳು ಸಂದೇಶವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...