Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಪ್ರಧಾನಿ ಮೋದಿಯವರು ಹೇಳಿದ ಸುಳ್ಳನ್ನು ಆಧಾರ ಸಹಿತ ‘ಸ್ಕ್ರಾಲ್‌.ಇನ್‌’ ಬಯಲಿಗೆಳೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 24ರಂದು ಅಹಮದಾಬಾದ್‌ನ ಬಾವ್ಲಾದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಾ, “20 ವರ್ಷಗಳ ಹಿಂದೆ ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತು. ಜಿಲ್ಲೆಯಲ್ಲಿ ಈಗ 23 ವಿಶ್ವವಿದ್ಯಾಲಯಗಳಿವೆ” ಎಂದಿದ್ದರು. ಇದನ್ನು ಬಿಜೆಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವಾಲಯದ ದಾಖಲೆಗಳು ಮೋದಿಯವರ ಹೇಳಿಕೆಗೆ ತದ್ವಿರುದ್ಧವಾಗಿವೆ ಎಂದು ‘ಸ್ಕ್ರಾಲ್‌.ಇನ್‌’ ಜಾಲತಾಣ ‘ಫ್ಯಾಕ್ಟ್‌ಚೆಕ್’ ಮಾಡಿದೆ.

“ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲು ಒಂದೇ ಒಂದು ವಿಶ್ವವಿದ್ಯಾಲಯವಿತ್ತು” ಎಂದು ಮೋದಿ ಸುಳ್ಳು ಹೇಳಿರುವುದನ್ನು ಬಯಲಿಗೆಳೆದಿರುವ ವರದಿಯು, ಕೇಂದ್ರ ಸರ್ಕಾರದ ದಾಖಲೆಗಳನ್ನು ಉಲ್ಲೇಖಿಸಿದೆ.

“ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಎರಡು ದಶಕಗಳ ಹಿಂದೆಯೇ ‘ಗುಜರಾತ್ ವಿಶ್ವವಿದ್ಯಾಲಯ, ಗುಜರಾತ್ ವಿದ್ಯಾಪೀಠ ಮತ್ತು ಡಾ ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ’ ಇದ್ದವು. ಅಂದರೆ ಮೂರು ವಿಶ್ವವಿದ್ಯಾಲಯಗಳು ಮೊದಲೇ ಸ್ಥಾಪಿತವಾಗಿದ್ದವು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಶಿಕ್ಷಣ ಸಚಿವಾಲಯದ ಅಡಿಯಲ್ಲಿ 1956ರಲ್ಲಿ ಸ್ಥಾಪನೆಯಾದ ಶಾಸನಬದ್ಧ ಸಂಸ್ಥೆ ಎಂಬುದನ್ನು ಗಮನಿಸಬೇಕು. ಈ ಸಂಸ್ಥೆ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ಹಣವನ್ನು ವಿತರಣೆ ಮಾಡುತ್ತದೆ.

ಗುಜರಾತ್ ವಿಶ್ವವಿದ್ಯಾನಿಲಯವನ್ನು 1949ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯ ಕಾಯಿದೆಯಡಿಯಲ್ಲಿ ಸ್ಥಾಪಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯವನ್ನು 1994ರಲ್ಲಿ ಸ್ಥಾಪಿಸಲಾಯಿತು. ಇವೆರಡೂ ರಾಜ್ಯ ವಿಶ್ವವಿದ್ಯಾಲಯಗಳಾಗಿವೆ. ಅಕ್ಟೋಬರ್ 1920ರಲ್ಲಿ ಮಹಾತ್ಮ ಗಾಂಧಿಯವರು ಸ್ಥಾಪಿಸಿದ ಗುಜರಾತ್ ವಿದ್ಯಾಪೀಠವನ್ನು 1963ರಲ್ಲಿ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಯಿತು.

ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲೇ ಎರಡು ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿದ್ದವು. ಅವುಗಳೆಂದರೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್. ಈ ಎರಡನ್ನೂ 1961ರಲ್ಲಿ ಸ್ಥಾಪಿಸಲಾಗಿದೆ.

‘27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ’

ಭಾರತೀಯ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ಕಳೆದ 27 ವರ್ಷಗಳಿಂದ (1995-2022) ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 2001ರ ಅಕ್ಟೋಬರ್‌ನಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗುವ ಮೊದಲು ಕೇಶುಭಾಯಿ ಪಟೇಲ್, ಸುರೇಶ್ಚಂದ್ರ ಮೆಹ್ತಾ, ಶಂಕರಸಿನ್ಹ ವಘೇಲಾ ಮತ್ತು ದಿಲೀಪ್ ಪಾರಿಖ್ ಅವರು ಗುಜರಾತ್‌ನಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಮೋದಿ ಅವರು ಮುಖ್ಯಮಂತ್ರಿಯಾಗಿ ಎರಡನೇ ವರ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2014ರ ಮೇವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಗುಜರಾತ್‌ನಲ್ಲಿ 1990-94ರವರೆಗೆ ಜನತಾ ದಳ ನೇತೃತ್ವದ ಸರ್ಕಾರವಿತ್ತು. 1990ರ ಮೊದಲು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸತತವಾಗಿ ಆಡಳಿತ ನಡೆಸಿತ್ತು.

ಯುಜಿಸಿ ದಾಖಲೆಗಳ ಪ್ರಕಾರ ನವೆಂಬರ್ 25ರ ಹೊತ್ತಿಗೆ (ಅಂದರೆ ಪ್ರಧಾನಿಯವರ ಭಾಷಣದ ವೇಳೆಗೆ) ಅಹಮದಾಬಾದ್ ಜಿಲ್ಲೆಯಲ್ಲಿ 22 ವಿಶ್ವವಿದ್ಯಾನಿಲಯಗಳಿವೆ.

ಫೆಬ್ರವರಿ 2 ರಂದು ರಾಜ್ಯಸಭೆಯಲ್ಲಿ ಶಿಕ್ಷಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಜೂರಾದ 162 ಬೋಧಕ ಹುದ್ದೆಗಳಲ್ಲಿ 68 (41%) ಖಾಲಿ ಇವೆ. ಇದಲ್ಲದೆ, “2020ರ ಏಪ್ರಿಲ್‌ನಲ್ಲಿ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 72 ಖಾಲಿ ಹುದ್ದೆಗಳಿದ್ದವು. ಇದು ಏಪ್ರಿಲ್ 2021ರಲ್ಲಿ 65ಕ್ಕೆ ಇಳಿದಿದೆ. ಆದರೆ ಏಪ್ರಿಲ್ 2022ರಲ್ಲಿಯೂ 64 ಹುದ್ದೆಗಳು ಖಾಲಿ ಇದ್ದವು” ಎಂದು ಫ್ಯಾಕ್ಟ್‌ಚೆಕ್ ವರದಿ ಹೇಳುತ್ತದೆ.

ಮೋದಿಯವರು ಮಾಡಿರುವ ಪ್ರತಿಪಾದನೆಯು ವಾಸ್ತವದಿಂದ ಕೂಡಿದೆಯೇ ಎಂದು ತಿಳಿಯಲು ‘ಸ್ಕ್ರಾಲ್‌.ಇನ್‌’ ಜಾಲತಾಣ ಪ್ರಧಾನ ಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿದೆ. “ಗುಜರಾತ್‌ನಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತು ಅಪ್‌ಡೇಟ್‌ಗಾಗಿ ನಾವು ಗುಜರಾತ್ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ಜೆ ಹೈದರ್ ಅವರನ್ನು ಫೋನ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ” ಎಂದು ವರದಿ ತಿಳಿಸಿದೆ.

ವರದಿ ಕೃಪೆ: ಸ್ಕ್ರಾಲ್‌.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...