Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಫ್ಯಾಕ್ಟ್‌ಚೆಕ್‌: ಮೋದಿ ಹೇಳಿದ್ದು ಸುಳ್ಳು, 2002ರ ಮೊದಲೇ ಅಹಮದಾಬಾದ್‌ ಜಿಲ್ಲೆಯಲ್ಲಿ ಮೂರು ವಿವಿಗಳಿದ್ದವು!

ಪ್ರಧಾನಿ ಮೋದಿಯವರು ಹೇಳಿದ ಸುಳ್ಳನ್ನು ಆಧಾರ ಸಹಿತ ‘ಸ್ಕ್ರಾಲ್‌.ಇನ್‌’ ಬಯಲಿಗೆಳೆದಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 24ರಂದು ಅಹಮದಾಬಾದ್‌ನ ಬಾವ್ಲಾದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಾ, “20 ವರ್ಷಗಳ ಹಿಂದೆ ಅಹಮದಾಬಾದ್ ಜಿಲ್ಲೆಯಲ್ಲಿ ಒಂದೇ ಒಂದು ವಿಶ್ವವಿದ್ಯಾಲಯವಿತ್ತು. ಜಿಲ್ಲೆಯಲ್ಲಿ ಈಗ 23 ವಿಶ್ವವಿದ್ಯಾಲಯಗಳಿವೆ” ಎಂದಿದ್ದರು. ಇದನ್ನು ಬಿಜೆಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿಯೂ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಕೇಂದ್ರ ಶಿಕ್ಷಣ ಸಚಿವಾಲಯದ ದಾಖಲೆಗಳು ಮೋದಿಯವರ ಹೇಳಿಕೆಗೆ ತದ್ವಿರುದ್ಧವಾಗಿವೆ ಎಂದು ‘ಸ್ಕ್ರಾಲ್‌.ಇನ್‌’ ಜಾಲತಾಣ ‘ಫ್ಯಾಕ್ಟ್‌ಚೆಕ್’ ಮಾಡಿದೆ.

“ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲು ಒಂದೇ ಒಂದು ವಿಶ್ವವಿದ್ಯಾಲಯವಿತ್ತು” ಎಂದು ಮೋದಿ ಸುಳ್ಳು ಹೇಳಿರುವುದನ್ನು ಬಯಲಿಗೆಳೆದಿರುವ ವರದಿಯು, ಕೇಂದ್ರ ಸರ್ಕಾರದ ದಾಖಲೆಗಳನ್ನು ಉಲ್ಲೇಖಿಸಿದೆ.

“ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಎರಡು ದಶಕಗಳ ಹಿಂದೆಯೇ ‘ಗುಜರಾತ್ ವಿಶ್ವವಿದ್ಯಾಲಯ, ಗುಜರಾತ್ ವಿದ್ಯಾಪೀಠ ಮತ್ತು ಡಾ ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ’ ಇದ್ದವು. ಅಂದರೆ ಮೂರು ವಿಶ್ವವಿದ್ಯಾಲಯಗಳು ಮೊದಲೇ ಸ್ಥಾಪಿತವಾಗಿದ್ದವು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಶಿಕ್ಷಣ ಸಚಿವಾಲಯದ ಅಡಿಯಲ್ಲಿ 1956ರಲ್ಲಿ ಸ್ಥಾಪನೆಯಾದ ಶಾಸನಬದ್ಧ ಸಂಸ್ಥೆ ಎಂಬುದನ್ನು ಗಮನಿಸಬೇಕು. ಈ ಸಂಸ್ಥೆ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ಹಣವನ್ನು ವಿತರಣೆ ಮಾಡುತ್ತದೆ.

ಗುಜರಾತ್ ವಿಶ್ವವಿದ್ಯಾನಿಲಯವನ್ನು 1949ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯ ಕಾಯಿದೆಯಡಿಯಲ್ಲಿ ಸ್ಥಾಪಿಸಲಾಯಿತು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯವನ್ನು 1994ರಲ್ಲಿ ಸ್ಥಾಪಿಸಲಾಯಿತು. ಇವೆರಡೂ ರಾಜ್ಯ ವಿಶ್ವವಿದ್ಯಾಲಯಗಳಾಗಿವೆ. ಅಕ್ಟೋಬರ್ 1920ರಲ್ಲಿ ಮಹಾತ್ಮ ಗಾಂಧಿಯವರು ಸ್ಥಾಪಿಸಿದ ಗುಜರಾತ್ ವಿದ್ಯಾಪೀಠವನ್ನು 1963ರಲ್ಲಿ ವಿಶ್ವವಿದ್ಯಾನಿಲಯವೆಂದು ಪರಿಗಣಿಸಲಾಯಿತು.

ಅಹಮದಾಬಾದ್ ಜಿಲ್ಲೆಯಲ್ಲಿ 2002ರ ಮೊದಲೇ ಎರಡು ರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಿದ್ದವು. ಅವುಗಳೆಂದರೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್. ಈ ಎರಡನ್ನೂ 1961ರಲ್ಲಿ ಸ್ಥಾಪಿಸಲಾಗಿದೆ.

‘27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ’

ಭಾರತೀಯ ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ಕಳೆದ 27 ವರ್ಷಗಳಿಂದ (1995-2022) ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. 2001ರ ಅಕ್ಟೋಬರ್‌ನಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗುವ ಮೊದಲು ಕೇಶುಭಾಯಿ ಪಟೇಲ್, ಸುರೇಶ್ಚಂದ್ರ ಮೆಹ್ತಾ, ಶಂಕರಸಿನ್ಹ ವಘೇಲಾ ಮತ್ತು ದಿಲೀಪ್ ಪಾರಿಖ್ ಅವರು ಗುಜರಾತ್‌ನಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಮೋದಿ ಅವರು ಮುಖ್ಯಮಂತ್ರಿಯಾಗಿ ಎರಡನೇ ವರ್ಷದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2014ರ ಮೇವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರು. ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಗುಜರಾತ್‌ನಲ್ಲಿ 1990-94ರವರೆಗೆ ಜನತಾ ದಳ ನೇತೃತ್ವದ ಸರ್ಕಾರವಿತ್ತು. 1990ರ ಮೊದಲು, ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಸತತವಾಗಿ ಆಡಳಿತ ನಡೆಸಿತ್ತು.

ಯುಜಿಸಿ ದಾಖಲೆಗಳ ಪ್ರಕಾರ ನವೆಂಬರ್ 25ರ ಹೊತ್ತಿಗೆ (ಅಂದರೆ ಪ್ರಧಾನಿಯವರ ಭಾಷಣದ ವೇಳೆಗೆ) ಅಹಮದಾಬಾದ್ ಜಿಲ್ಲೆಯಲ್ಲಿ 22 ವಿಶ್ವವಿದ್ಯಾನಿಲಯಗಳಿವೆ.

ಫೆಬ್ರವರಿ 2 ರಂದು ರಾಜ್ಯಸಭೆಯಲ್ಲಿ ಶಿಕ್ಷಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, ಗುಜರಾತ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಜೂರಾದ 162 ಬೋಧಕ ಹುದ್ದೆಗಳಲ್ಲಿ 68 (41%) ಖಾಲಿ ಇವೆ. ಇದಲ್ಲದೆ, “2020ರ ಏಪ್ರಿಲ್‌ನಲ್ಲಿ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 72 ಖಾಲಿ ಹುದ್ದೆಗಳಿದ್ದವು. ಇದು ಏಪ್ರಿಲ್ 2021ರಲ್ಲಿ 65ಕ್ಕೆ ಇಳಿದಿದೆ. ಆದರೆ ಏಪ್ರಿಲ್ 2022ರಲ್ಲಿಯೂ 64 ಹುದ್ದೆಗಳು ಖಾಲಿ ಇದ್ದವು” ಎಂದು ಫ್ಯಾಕ್ಟ್‌ಚೆಕ್ ವರದಿ ಹೇಳುತ್ತದೆ.

ಮೋದಿಯವರು ಮಾಡಿರುವ ಪ್ರತಿಪಾದನೆಯು ವಾಸ್ತವದಿಂದ ಕೂಡಿದೆಯೇ ಎಂದು ತಿಳಿಯಲು ‘ಸ್ಕ್ರಾಲ್‌.ಇನ್‌’ ಜಾಲತಾಣ ಪ್ರಧಾನ ಮಂತ್ರಿಗಳ ಕಚೇರಿಯನ್ನು ಸಂಪರ್ಕಿಸಿದೆ. “ಗುಜರಾತ್‌ನಾದ್ಯಂತ ಇರುವ ವಿಶ್ವವಿದ್ಯಾನಿಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಕುರಿತು ಅಪ್‌ಡೇಟ್‌ಗಾಗಿ ನಾವು ಗುಜರಾತ್ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌ಜೆ ಹೈದರ್ ಅವರನ್ನು ಫೋನ್ ಮತ್ತು ಇಮೇಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ” ಎಂದು ವರದಿ ತಿಳಿಸಿದೆ.

ವರದಿ ಕೃಪೆ: ಸ್ಕ್ರಾಲ್‌.ಇನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...