Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

- Advertisement -
- Advertisement -

ಕನ್ನಡಿಗರ ಹೃದಯದಲ್ಲಿ ನೆಲೆಸಿರುವ ಪುನೀತ್‌ ರಾಜ್‌ಕುಮಾರ್‌, ಎಲ್ಲರ ಪ್ರೀತಿಯ ನಟ ಅಪ್ಪು ಅವರು ಅಗಲಿ ಒಂದು ವರ್ಷವಾಗಿದೆ. ಪುನೀತ್‌‌ ಅವರ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅಪ್ಪು ನಮ್ಮನ್ನು ನಿನ್ನೆ ಮೊನ್ನೆಯೋ ಬಿಟ್ಟು ಹೋದರೇನೋ ಎಂಬಂತೆ ಭಾಸವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ, ಸಹಿಸುವುದಿಲ್ಲ ಇಲ್ಲ. ಈ ಹೊತ್ತಿನಲ್ಲಿ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರು ಹಗುರವಾಗಿ ಮಾತನಾಡಿದ್ದಾರೆಂದು ಪ್ರತಿಪಾದಿಸಿ ಪೋಸ್ಟರ್‌ವೊಂದು ವೈರಲ್‌ ಆಗುತ್ತಿದೆ.

“ಪುನೀತ್‌ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ?- ಚಕ್ರವರ್ತಿ ಸೂಲಿಬೆಲೆ” ಎಂದಿರುವ ಪೋಸ್ಟರ್‌ಅನ್ನು ಸಾಕಷ್ಟು ಜನರು ಹಂಚಿಕೊಳ್ಳುತ್ತಿದ್ದಾರೆ. ‘ಬಿ ಟಿವಿ’ ಚಾನೆಲ್‌ ವರದಿ ಮಾಡಿರುವಂತೆ ಈ ಪೋಸ್ಟರ್‌ ರೂಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

May be an image of 1 person and text that says "ಪುನೀತ್ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ? BTVNEWSLIVE.COM ಚಕ್ತವರ್ತಿ ಸೂಲಿಬೆಲೆ"

ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಈ ಪೋಸ್ಟರ್‌ ಅನ್ನು ಅನೇಕರು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ. ಕೆಲವರು ಡಿಲೀಟ್ ಕೂಡ ಮಾಡಿದ್ದಾರೆ. ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಸೂಲಿಬೆಲೆಯವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವಾಟ್ಸ್‌ಅಪ್‌ ಗ್ರೂಪ್‌ವೊಂದರಲ್ಲಿ ಆಗಿರುವ ಚರ್ಚೆ

“ಮೊದಲು ಹಂಸಲೇಖ. ಆಮೇಲೆ ಚೇತನ್ ಅಹಿಂಸಾ. ಇವಾಗ ಡಾಲಿ ಧನಂಜಯ. ಮತ್ತೆ ಪುನೀತ್ ರಾಜ್ ಕುಮಾರ್ ರವರ ಬಳಿ ಬರ್ತಿದಾರೆ. ಇದಕ್ಕೆ ಅಭಿಮಾನಿಗಳೇ ಉತ್ತರ ನೀಡ್ತಾರೆ. ಇದ್ಯಾಕೋ ಅತಿ ಅಯ್ತು ಅನ್ಸಲ್ವಾ?” ಎಂದು ಅಪ್ಪು ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಡಾ.ಪುನೀತ್ ರಾಜ್ ಕುಮಾರ್ ನಮಗೆಲ್ಲ ಸ್ಪೂರ್ತಿ. ಅವರನ್ನು ಕಳೆದುಕೊಂಡಾಗ ಕರ್ನಾಟಕದ ಪ್ರತಿಯೊಬ್ಬರು ಕಣ್ಣೀರು ಹಾಕಿದ್ದಾರೆ. ನಮ್ಮ ಅಪ್ಪು ಬಗ್ಗೆ ಮಾತನಾಡುವ ಅರ್ಹತೆಯೂ ನಿಮಗಿಲ್ಲ. ನಮ್ಮ ಪರಮಾತ್ಮ, ನಿಮ್ಮಂತೆ ನಮಗೆ ಸುಳ್ಳು ಹೇಳಿಲ್ಲ” ಎಂದು ಯೂತ್‌ ಕಾಂಗ್ರೆಸ್ ಕರ್ನಾಟಕ ಘಟಕವು ಟ್ವೀಟ್ ಮಾಡಿದೆ. (ಅರ್ಕೈವ್‌ ಲಿಂಕ್‌)

“ಈ ರೀತಿಯಲ್ಲಿ ಬಿಟಿವಿ ವರದಿ ಮಾಡಿದೆಯೇ?” “ಸುದ್ದಿ ನಿಜವೇ?” ಎಂದು ‘ನಾನುಗೌರಿ.ಕಾಂ’ ಪರಿಶೀಲಿಸಿದೆ. ‘ಬಿ ಟಿವಿ’ಯ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಸಂಪರ್ಕಿಸಿದಾಗ, “ಈ ರೀತಿಯ ಶೀರ್ಷಿಕೆಯಲ್ಲಿ ಯಾವುದೇ ಸುದ್ದಿಯನ್ನು ನಾವು ಮಾಡಿಲ್ಲ. ಆದರೆ ಬಿ.ಟಿ.ಯ ಮಾದರಿಯಲ್ಲೇ ಪೋಸ್ಟರ್‌ ಎಡಿಟ್ ಮಾಡಲಾಗಿದೆ. ಹಿಂದೊಮ್ಮೆ ಆಗಿದ್ದ ಸುದ್ದಿಯಲ್ಲಿ ಶೀರ್ಷಿಕೆಯನ್ನು ಅಳಸಿ, ಬೇರೆ ಶೀರ್ಷಿಕೆ ನೀಡಿ ವೈರಲ್‌ ಮಾಡಿದ್ದಾರೆ. ಸೂಲಿಬೆಲೆಯವರು ಪುನೀತ್ ರಾಜ್‌ಕುಮಾರ್‌ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದು ಚರ್ಚೆಯಾಗಿತ್ತು. ಈಗ ವೈರಲ್‌ ಆಗುತ್ತಿರುವ ಪೋಸ್ಟರ್‌ಗೂ ಬಿಟಿವಿಗೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು. ಬಿಟಿವಿ ಮಾಡಿದ್ದ ಹಳೆಯ ಸುದ್ದಿ ತುಣುಕನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದರು.

“ಹಿಂದೂಗಳ ರಕ್ಷಣೆ ನೀವೇ ಮಾಡುತ್ತೀರೋ, ನಾವೇ ಮಾಡಿಕೊಳ್ಳಬೇಕಾ… ಗೃಹ ಸಚಿವರಿಗೆ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ…” ಎಂಬ ಶೀರ್ಷಿಕೆಯಲ್ಲಿ ‘ಬಿ ಟಿವಿ’ ಮಾಡಿರುವ ವರದಿಯಲ್ಲಿ ಬಳಸಲಾಗಿರುವ ಪೋಸ್ಟರ್‌ನಲ್ಲಿ ‘ಸರ್ಕಾರ ಹಾಗೂ ಇಂಟೆಲಿಜೆನ್ಸ್‌ ವಿಫಲವಾಗಿದೆ’ ಎಂದು ಬರೆದಿರುವುದನ್ನು ಕಾಣಬಹುದು.

ಅಪ್ಪು ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ; ನಂತರ ಕ್ಷಮೆಯಾಚಿಸಿದ್ದ ಸೂಲಿಬೆಲೆ

“ಚಕ್ರವರ್ತಿ ಸೂಲಿಬೆಲೆ ಅಪ್ಪು ಬಗ್ಗೆ ಹಗುರವಾಗಿ ಟ್ವೀಟ್‌ ಮಾಡಿದ ಆರೋಪಕ್ಕೆ ಈ ಹಿಂದೆ ಗುರಿಯಾಗಿದ್ದರು.” ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಅಪ್ಪು ಅವರ ಸಾವಿನ ಸಂದರ್ಭದ ಬಗ್ಗೆ ಲಘುವಾಗಿ ಟ್ವೀಟ್ ಮಾಡಿದ್ದು ಆಕ್ಷೇಪಗಳಿಗೆ ಕಾರಣವಾಗಿತ್ತು.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುತ್ತಾ ಚಕ್ರವರ್ತಿ ಸೂಲಿಬೆಲೆ, ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿದ್ದರು.

ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ್ದ ಚಕ್ರವರ್ತಿ ಸೂಲಿಬೆಲೆ, ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಅಣಕ ಮಾಡಿದ್ದರು.

“ಉಪಯೋಗಕ್ಕೆ ಬಾರದ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಜನರ ವಿರೋಧದ ಬಳಿಕ ಸೂಲಿಬೆಲೆ, “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...