Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

- Advertisement -
- Advertisement -

ಕನ್ನಡಿಗರ ಹೃದಯದಲ್ಲಿ ನೆಲೆಸಿರುವ ಪುನೀತ್‌ ರಾಜ್‌ಕುಮಾರ್‌, ಎಲ್ಲರ ಪ್ರೀತಿಯ ನಟ ಅಪ್ಪು ಅವರು ಅಗಲಿ ಒಂದು ವರ್ಷವಾಗಿದೆ. ಪುನೀತ್‌‌ ಅವರ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅಪ್ಪು ನಮ್ಮನ್ನು ನಿನ್ನೆ ಮೊನ್ನೆಯೋ ಬಿಟ್ಟು ಹೋದರೇನೋ ಎಂಬಂತೆ ಭಾಸವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ, ಸಹಿಸುವುದಿಲ್ಲ ಇಲ್ಲ. ಈ ಹೊತ್ತಿನಲ್ಲಿ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರು ಹಗುರವಾಗಿ ಮಾತನಾಡಿದ್ದಾರೆಂದು ಪ್ರತಿಪಾದಿಸಿ ಪೋಸ್ಟರ್‌ವೊಂದು ವೈರಲ್‌ ಆಗುತ್ತಿದೆ.

“ಪುನೀತ್‌ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ?- ಚಕ್ರವರ್ತಿ ಸೂಲಿಬೆಲೆ” ಎಂದಿರುವ ಪೋಸ್ಟರ್‌ಅನ್ನು ಸಾಕಷ್ಟು ಜನರು ಹಂಚಿಕೊಳ್ಳುತ್ತಿದ್ದಾರೆ. ‘ಬಿ ಟಿವಿ’ ಚಾನೆಲ್‌ ವರದಿ ಮಾಡಿರುವಂತೆ ಈ ಪೋಸ್ಟರ್‌ ರೂಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

May be an image of 1 person and text that says "ಪುನೀತ್ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ? BTVNEWSLIVE.COM ಚಕ್ತವರ್ತಿ ಸೂಲಿಬೆಲೆ"

ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಈ ಪೋಸ್ಟರ್‌ ಅನ್ನು ಅನೇಕರು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ. ಕೆಲವರು ಡಿಲೀಟ್ ಕೂಡ ಮಾಡಿದ್ದಾರೆ. ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಸೂಲಿಬೆಲೆಯವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವಾಟ್ಸ್‌ಅಪ್‌ ಗ್ರೂಪ್‌ವೊಂದರಲ್ಲಿ ಆಗಿರುವ ಚರ್ಚೆ

“ಮೊದಲು ಹಂಸಲೇಖ. ಆಮೇಲೆ ಚೇತನ್ ಅಹಿಂಸಾ. ಇವಾಗ ಡಾಲಿ ಧನಂಜಯ. ಮತ್ತೆ ಪುನೀತ್ ರಾಜ್ ಕುಮಾರ್ ರವರ ಬಳಿ ಬರ್ತಿದಾರೆ. ಇದಕ್ಕೆ ಅಭಿಮಾನಿಗಳೇ ಉತ್ತರ ನೀಡ್ತಾರೆ. ಇದ್ಯಾಕೋ ಅತಿ ಅಯ್ತು ಅನ್ಸಲ್ವಾ?” ಎಂದು ಅಪ್ಪು ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಡಾ.ಪುನೀತ್ ರಾಜ್ ಕುಮಾರ್ ನಮಗೆಲ್ಲ ಸ್ಪೂರ್ತಿ. ಅವರನ್ನು ಕಳೆದುಕೊಂಡಾಗ ಕರ್ನಾಟಕದ ಪ್ರತಿಯೊಬ್ಬರು ಕಣ್ಣೀರು ಹಾಕಿದ್ದಾರೆ. ನಮ್ಮ ಅಪ್ಪು ಬಗ್ಗೆ ಮಾತನಾಡುವ ಅರ್ಹತೆಯೂ ನಿಮಗಿಲ್ಲ. ನಮ್ಮ ಪರಮಾತ್ಮ, ನಿಮ್ಮಂತೆ ನಮಗೆ ಸುಳ್ಳು ಹೇಳಿಲ್ಲ” ಎಂದು ಯೂತ್‌ ಕಾಂಗ್ರೆಸ್ ಕರ್ನಾಟಕ ಘಟಕವು ಟ್ವೀಟ್ ಮಾಡಿದೆ. (ಅರ್ಕೈವ್‌ ಲಿಂಕ್‌)

“ಈ ರೀತಿಯಲ್ಲಿ ಬಿಟಿವಿ ವರದಿ ಮಾಡಿದೆಯೇ?” “ಸುದ್ದಿ ನಿಜವೇ?” ಎಂದು ‘ನಾನುಗೌರಿ.ಕಾಂ’ ಪರಿಶೀಲಿಸಿದೆ. ‘ಬಿ ಟಿವಿ’ಯ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಸಂಪರ್ಕಿಸಿದಾಗ, “ಈ ರೀತಿಯ ಶೀರ್ಷಿಕೆಯಲ್ಲಿ ಯಾವುದೇ ಸುದ್ದಿಯನ್ನು ನಾವು ಮಾಡಿಲ್ಲ. ಆದರೆ ಬಿ.ಟಿ.ಯ ಮಾದರಿಯಲ್ಲೇ ಪೋಸ್ಟರ್‌ ಎಡಿಟ್ ಮಾಡಲಾಗಿದೆ. ಹಿಂದೊಮ್ಮೆ ಆಗಿದ್ದ ಸುದ್ದಿಯಲ್ಲಿ ಶೀರ್ಷಿಕೆಯನ್ನು ಅಳಸಿ, ಬೇರೆ ಶೀರ್ಷಿಕೆ ನೀಡಿ ವೈರಲ್‌ ಮಾಡಿದ್ದಾರೆ. ಸೂಲಿಬೆಲೆಯವರು ಪುನೀತ್ ರಾಜ್‌ಕುಮಾರ್‌ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದು ಚರ್ಚೆಯಾಗಿತ್ತು. ಈಗ ವೈರಲ್‌ ಆಗುತ್ತಿರುವ ಪೋಸ್ಟರ್‌ಗೂ ಬಿಟಿವಿಗೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು. ಬಿಟಿವಿ ಮಾಡಿದ್ದ ಹಳೆಯ ಸುದ್ದಿ ತುಣುಕನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದರು.

“ಹಿಂದೂಗಳ ರಕ್ಷಣೆ ನೀವೇ ಮಾಡುತ್ತೀರೋ, ನಾವೇ ಮಾಡಿಕೊಳ್ಳಬೇಕಾ… ಗೃಹ ಸಚಿವರಿಗೆ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ…” ಎಂಬ ಶೀರ್ಷಿಕೆಯಲ್ಲಿ ‘ಬಿ ಟಿವಿ’ ಮಾಡಿರುವ ವರದಿಯಲ್ಲಿ ಬಳಸಲಾಗಿರುವ ಪೋಸ್ಟರ್‌ನಲ್ಲಿ ‘ಸರ್ಕಾರ ಹಾಗೂ ಇಂಟೆಲಿಜೆನ್ಸ್‌ ವಿಫಲವಾಗಿದೆ’ ಎಂದು ಬರೆದಿರುವುದನ್ನು ಕಾಣಬಹುದು.

ಅಪ್ಪು ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ; ನಂತರ ಕ್ಷಮೆಯಾಚಿಸಿದ್ದ ಸೂಲಿಬೆಲೆ

“ಚಕ್ರವರ್ತಿ ಸೂಲಿಬೆಲೆ ಅಪ್ಪು ಬಗ್ಗೆ ಹಗುರವಾಗಿ ಟ್ವೀಟ್‌ ಮಾಡಿದ ಆರೋಪಕ್ಕೆ ಈ ಹಿಂದೆ ಗುರಿಯಾಗಿದ್ದರು.” ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಅಪ್ಪು ಅವರ ಸಾವಿನ ಸಂದರ್ಭದ ಬಗ್ಗೆ ಲಘುವಾಗಿ ಟ್ವೀಟ್ ಮಾಡಿದ್ದು ಆಕ್ಷೇಪಗಳಿಗೆ ಕಾರಣವಾಗಿತ್ತು.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುತ್ತಾ ಚಕ್ರವರ್ತಿ ಸೂಲಿಬೆಲೆ, ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿದ್ದರು.

ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ್ದ ಚಕ್ರವರ್ತಿ ಸೂಲಿಬೆಲೆ, ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಅಣಕ ಮಾಡಿದ್ದರು.

“ಉಪಯೋಗಕ್ಕೆ ಬಾರದ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಜನರ ವಿರೋಧದ ಬಳಿಕ ಸೂಲಿಬೆಲೆ, “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...