Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

- Advertisement -
- Advertisement -

ಕನ್ನಡಿಗರ ಹೃದಯದಲ್ಲಿ ನೆಲೆಸಿರುವ ಪುನೀತ್‌ ರಾಜ್‌ಕುಮಾರ್‌, ಎಲ್ಲರ ಪ್ರೀತಿಯ ನಟ ಅಪ್ಪು ಅವರು ಅಗಲಿ ಒಂದು ವರ್ಷವಾಗಿದೆ. ಪುನೀತ್‌‌ ಅವರ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅಪ್ಪು ನಮ್ಮನ್ನು ನಿನ್ನೆ ಮೊನ್ನೆಯೋ ಬಿಟ್ಟು ಹೋದರೇನೋ ಎಂಬಂತೆ ಭಾಸವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ, ಸಹಿಸುವುದಿಲ್ಲ ಇಲ್ಲ. ಈ ಹೊತ್ತಿನಲ್ಲಿ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರು ಹಗುರವಾಗಿ ಮಾತನಾಡಿದ್ದಾರೆಂದು ಪ್ರತಿಪಾದಿಸಿ ಪೋಸ್ಟರ್‌ವೊಂದು ವೈರಲ್‌ ಆಗುತ್ತಿದೆ.

“ಪುನೀತ್‌ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ?- ಚಕ್ರವರ್ತಿ ಸೂಲಿಬೆಲೆ” ಎಂದಿರುವ ಪೋಸ್ಟರ್‌ಅನ್ನು ಸಾಕಷ್ಟು ಜನರು ಹಂಚಿಕೊಳ್ಳುತ್ತಿದ್ದಾರೆ. ‘ಬಿ ಟಿವಿ’ ಚಾನೆಲ್‌ ವರದಿ ಮಾಡಿರುವಂತೆ ಈ ಪೋಸ್ಟರ್‌ ರೂಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

May be an image of 1 person and text that says "ಪುನೀತ್ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ? BTVNEWSLIVE.COM ಚಕ್ತವರ್ತಿ ಸೂಲಿಬೆಲೆ"

ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಈ ಪೋಸ್ಟರ್‌ ಅನ್ನು ಅನೇಕರು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ. ಕೆಲವರು ಡಿಲೀಟ್ ಕೂಡ ಮಾಡಿದ್ದಾರೆ. ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಸೂಲಿಬೆಲೆಯವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವಾಟ್ಸ್‌ಅಪ್‌ ಗ್ರೂಪ್‌ವೊಂದರಲ್ಲಿ ಆಗಿರುವ ಚರ್ಚೆ

“ಮೊದಲು ಹಂಸಲೇಖ. ಆಮೇಲೆ ಚೇತನ್ ಅಹಿಂಸಾ. ಇವಾಗ ಡಾಲಿ ಧನಂಜಯ. ಮತ್ತೆ ಪುನೀತ್ ರಾಜ್ ಕುಮಾರ್ ರವರ ಬಳಿ ಬರ್ತಿದಾರೆ. ಇದಕ್ಕೆ ಅಭಿಮಾನಿಗಳೇ ಉತ್ತರ ನೀಡ್ತಾರೆ. ಇದ್ಯಾಕೋ ಅತಿ ಅಯ್ತು ಅನ್ಸಲ್ವಾ?” ಎಂದು ಅಪ್ಪು ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಡಾ.ಪುನೀತ್ ರಾಜ್ ಕುಮಾರ್ ನಮಗೆಲ್ಲ ಸ್ಪೂರ್ತಿ. ಅವರನ್ನು ಕಳೆದುಕೊಂಡಾಗ ಕರ್ನಾಟಕದ ಪ್ರತಿಯೊಬ್ಬರು ಕಣ್ಣೀರು ಹಾಕಿದ್ದಾರೆ. ನಮ್ಮ ಅಪ್ಪು ಬಗ್ಗೆ ಮಾತನಾಡುವ ಅರ್ಹತೆಯೂ ನಿಮಗಿಲ್ಲ. ನಮ್ಮ ಪರಮಾತ್ಮ, ನಿಮ್ಮಂತೆ ನಮಗೆ ಸುಳ್ಳು ಹೇಳಿಲ್ಲ” ಎಂದು ಯೂತ್‌ ಕಾಂಗ್ರೆಸ್ ಕರ್ನಾಟಕ ಘಟಕವು ಟ್ವೀಟ್ ಮಾಡಿದೆ. (ಅರ್ಕೈವ್‌ ಲಿಂಕ್‌)

“ಈ ರೀತಿಯಲ್ಲಿ ಬಿಟಿವಿ ವರದಿ ಮಾಡಿದೆಯೇ?” “ಸುದ್ದಿ ನಿಜವೇ?” ಎಂದು ‘ನಾನುಗೌರಿ.ಕಾಂ’ ಪರಿಶೀಲಿಸಿದೆ. ‘ಬಿ ಟಿವಿ’ಯ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಸಂಪರ್ಕಿಸಿದಾಗ, “ಈ ರೀತಿಯ ಶೀರ್ಷಿಕೆಯಲ್ಲಿ ಯಾವುದೇ ಸುದ್ದಿಯನ್ನು ನಾವು ಮಾಡಿಲ್ಲ. ಆದರೆ ಬಿ.ಟಿ.ಯ ಮಾದರಿಯಲ್ಲೇ ಪೋಸ್ಟರ್‌ ಎಡಿಟ್ ಮಾಡಲಾಗಿದೆ. ಹಿಂದೊಮ್ಮೆ ಆಗಿದ್ದ ಸುದ್ದಿಯಲ್ಲಿ ಶೀರ್ಷಿಕೆಯನ್ನು ಅಳಸಿ, ಬೇರೆ ಶೀರ್ಷಿಕೆ ನೀಡಿ ವೈರಲ್‌ ಮಾಡಿದ್ದಾರೆ. ಸೂಲಿಬೆಲೆಯವರು ಪುನೀತ್ ರಾಜ್‌ಕುಮಾರ್‌ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದು ಚರ್ಚೆಯಾಗಿತ್ತು. ಈಗ ವೈರಲ್‌ ಆಗುತ್ತಿರುವ ಪೋಸ್ಟರ್‌ಗೂ ಬಿಟಿವಿಗೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು. ಬಿಟಿವಿ ಮಾಡಿದ್ದ ಹಳೆಯ ಸುದ್ದಿ ತುಣುಕನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದರು.

“ಹಿಂದೂಗಳ ರಕ್ಷಣೆ ನೀವೇ ಮಾಡುತ್ತೀರೋ, ನಾವೇ ಮಾಡಿಕೊಳ್ಳಬೇಕಾ… ಗೃಹ ಸಚಿವರಿಗೆ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ…” ಎಂಬ ಶೀರ್ಷಿಕೆಯಲ್ಲಿ ‘ಬಿ ಟಿವಿ’ ಮಾಡಿರುವ ವರದಿಯಲ್ಲಿ ಬಳಸಲಾಗಿರುವ ಪೋಸ್ಟರ್‌ನಲ್ಲಿ ‘ಸರ್ಕಾರ ಹಾಗೂ ಇಂಟೆಲಿಜೆನ್ಸ್‌ ವಿಫಲವಾಗಿದೆ’ ಎಂದು ಬರೆದಿರುವುದನ್ನು ಕಾಣಬಹುದು.

ಅಪ್ಪು ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ; ನಂತರ ಕ್ಷಮೆಯಾಚಿಸಿದ್ದ ಸೂಲಿಬೆಲೆ

“ಚಕ್ರವರ್ತಿ ಸೂಲಿಬೆಲೆ ಅಪ್ಪು ಬಗ್ಗೆ ಹಗುರವಾಗಿ ಟ್ವೀಟ್‌ ಮಾಡಿದ ಆರೋಪಕ್ಕೆ ಈ ಹಿಂದೆ ಗುರಿಯಾಗಿದ್ದರು.” ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಅಪ್ಪು ಅವರ ಸಾವಿನ ಸಂದರ್ಭದ ಬಗ್ಗೆ ಲಘುವಾಗಿ ಟ್ವೀಟ್ ಮಾಡಿದ್ದು ಆಕ್ಷೇಪಗಳಿಗೆ ಕಾರಣವಾಗಿತ್ತು.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುತ್ತಾ ಚಕ್ರವರ್ತಿ ಸೂಲಿಬೆಲೆ, ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿದ್ದರು.

ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ್ದ ಚಕ್ರವರ್ತಿ ಸೂಲಿಬೆಲೆ, ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಅಣಕ ಮಾಡಿದ್ದರು.

“ಉಪಯೋಗಕ್ಕೆ ಬಾರದ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಜನರ ವಿರೋಧದ ಬಳಿಕ ಸೂಲಿಬೆಲೆ, “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...