Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

- Advertisement -
- Advertisement -

“ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ನಡುವೆ ಜಟಾಪಟಿ ನಡೆದಿದೆ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊ ತುಣುಕ್ಕೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈದರು ಎಂದು ವೈರಲ್ ಮಾಡಲಾಗುತ್ತಿದೆ.

“ಹೇಯ್‌ ಕೂತ್ಕೊಳಲೇ ಕೂಲಿ ಕೆಲ್ಸಕ್ಕೆ ಬಂದೋನು ನೀನು” ಎಂದು ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಅವರಿಗೆ ಹೇಳುತ್ತಿರುವಂತೆ ಈ ವಿಡಿಯೊದಲ್ಲಿ ಭಾಸವಾಗುತ್ತದೆ. ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸುತ್ತಾ, “ನಾನು ರಾಜಕಾರಣಕ್ಕೆ ಬಂದಾಗ ನೀನು ನೀನು ಚಡ್ಡಿನೇ ಹಾಕಿಲ್ಲ” ಎಂದು ಹೇಳಿದಂತೆ ಭಾಸವಾಗುತ್ತದೆ. ಹೀಗೆ ಈ ಇಬ್ಬರು ಕಾಂಗ್ರೆಸ್ ನಾಯಕರು ಜಗಳ ಆಡಿಕೊಂಡಿದ್ದಾರೆ ಎಂದು ಹಲವರು ಬಿಂಬಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇದು ತಿರುಚಿದ (ಎಡಿಟ್ ಮಾಡಿದ) ವಿಡಿಯೋವಾಗಿದೆ. ಇದನ್ನು ಹಲವಾರು ಜನ ಹಂಚಿಕೊಂಡಿರುವುದನ್ನು ಕೆಳಗೆ ಕಾಣಬಹುದು.

ತಕ್ಷಣಕ್ಕೆ ನೋಡಿದರೆ ಕಾಂಗ್ರೆಸ್‌ ನಾಯಕರು ಜಗಳ ಆಡಿದ್ದಾರೆಂದೇ ಅನಿಸುತ್ತದೆ. ಆದರೆ ವಾಸ್ತವ ಬೇರೆ ಇದೆ. ಇಬ್ಬರು ಕಾಂಗ್ರೆಸ್‌ ನಾಯಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುರಿತು ಮಾತನಾಡುತ್ತಿದ್ದಾರೆ ಎಂಬುದು ಮಾಧ್ಯಮಗಳ ವರದಿಗಳಿಂದ ಸ್ಪಷ್ಟವಾಗುತ್ತದೆ.

ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಅವರ ಮಾತಿನ ಹಿನ್ನೆಲೆಯನ್ನು ಸುವರ್ಣ ಸುದ್ದಿವಾಹಿನಿ ಪ್ರಸಾರ ಮಾಡಿದೆ. ಹಂಚಿಕೊಂಡಿರುವ ವಿಡಿಯೊದಲ್ಲಿ ಕೆಲವು ಪದಗಳನ್ನು ಮ್ಯೂಟ್ ಮಾಡಿರುವುದನ್ನು ಗುರುತಿಸಬಹುದು.

ಸುವರ್ಣ ವರದಿ ಹೇಳುವುದೇನು?

“ಸಿದ್ದರಾಮಯ್ಯ ಮತ್ತು ಇಬ್ರಾಹಿಂ ಆತ್ಮೀಯ ಸ್ನೇಹಿತರು. ಇವರಿಬ್ಬರ ನಡುವೆ ಚರ್ಚೆ ಸಾಮಾನ್ಯ. ಮತ್ತೆ ಇವರಿಬ್ಬರ ನಡುವೆ ಸ್ವಾರಸ್ಯಕರ ಚರ್ಚೆ ನಡೆದಿದೆ. ಪರಿಷತ್‌ನಲ್ಲಿ ಸರ್ಕಾರವನ್ನು ಝಾಡಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಪರಿಷತ್‌ನಲ್ಲಾದ ಈಶ್ವರಪ್ಪ ಅವರೊಂದಿಗಿನ ಜಗಳವನ್ನು ಇಬ್ರಾಹಿಂ ಪ್ರಸ್ತಾಪಿಸಿದ್ದಾರೆ. ಪರಿಷತ್‌ನಲ್ಲಿ ಸಚಿವ ಈಶ್ವರಪ್ಪ ಅವರು ರೋಲೆಕ್ಸ್‌ ವಾಚ್ ಪ್ರಕರಣದ ಕುರಿತು ಪ್ರಸ್ತಾಪ ಮಾಡಿದರು. ಈ ವೇಳೆ ಈಶ್ವರಪ್ಪನವರಿಗೆ ಝಾಡಿಸಿದೆ ಎಂದು ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚಿಸಿದರು” ಎಂದು ವರದಿ ಹೇಳುತ್ತದೆ.

ಕೆ.ಎಸ್‌.ಈಶ್ವರಪ್ಪ ಹಾಗೂ ಸಿ.ಎಂ.ಇಬ್ರಾಹಿಂ ಅವರು ವಿಧಾನಪರಿಷತ್‌ನಲ್ಲಿ ಚರ್ಚೆ ಮಾಡಿರುವುದನ್ನೂ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಟಿ.ವಿ.9 ಕನ್ನಡ ಸುದ್ದಿ ವಾಹಿನಿ ಮಾಡಿರುವ ವರದಿಯನ್ನು ಈ ನಿಟ್ಟಿನಲ್ಲಿ ಗಮನಿಸಬಹುದು. ಪರಿಷತ್‌ನಲ್ಲಿ ನಡೆದ ಚರ್ಚೆಯನ್ನು ಇಬ್ರಾಹಿಂ ಅವರು ಸಿದ್ದರಾಮಯ್ಯನವರಿಗೆ ತಿಳಿಸುತ್ತಿದ್ದರು ಎಂಬುದು ವಾಸ್ತವವಾಗಿದೆ. ಆದರೆ ಇದೇ ವಿಡಿಯೋವನ್ನು ಕಾಂಗ್ರೆಸ್ ನಾಯಕರ ಏಕವಚನದ ಜಗಳ ಎಂದು ತಿರುಚಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿರಿ: ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...