Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

- Advertisement -
- Advertisement -

“ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ನಡುವೆ ಜಟಾಪಟಿ ನಡೆದಿದೆ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊ ತುಣುಕ್ಕೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈದರು ಎಂದು ವೈರಲ್ ಮಾಡಲಾಗುತ್ತಿದೆ.

“ಹೇಯ್‌ ಕೂತ್ಕೊಳಲೇ ಕೂಲಿ ಕೆಲ್ಸಕ್ಕೆ ಬಂದೋನು ನೀನು” ಎಂದು ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಅವರಿಗೆ ಹೇಳುತ್ತಿರುವಂತೆ ಈ ವಿಡಿಯೊದಲ್ಲಿ ಭಾಸವಾಗುತ್ತದೆ. ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸುತ್ತಾ, “ನಾನು ರಾಜಕಾರಣಕ್ಕೆ ಬಂದಾಗ ನೀನು ನೀನು ಚಡ್ಡಿನೇ ಹಾಕಿಲ್ಲ” ಎಂದು ಹೇಳಿದಂತೆ ಭಾಸವಾಗುತ್ತದೆ. ಹೀಗೆ ಈ ಇಬ್ಬರು ಕಾಂಗ್ರೆಸ್ ನಾಯಕರು ಜಗಳ ಆಡಿಕೊಂಡಿದ್ದಾರೆ ಎಂದು ಹಲವರು ಬಿಂಬಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇದು ತಿರುಚಿದ (ಎಡಿಟ್ ಮಾಡಿದ) ವಿಡಿಯೋವಾಗಿದೆ. ಇದನ್ನು ಹಲವಾರು ಜನ ಹಂಚಿಕೊಂಡಿರುವುದನ್ನು ಕೆಳಗೆ ಕಾಣಬಹುದು.

ತಕ್ಷಣಕ್ಕೆ ನೋಡಿದರೆ ಕಾಂಗ್ರೆಸ್‌ ನಾಯಕರು ಜಗಳ ಆಡಿದ್ದಾರೆಂದೇ ಅನಿಸುತ್ತದೆ. ಆದರೆ ವಾಸ್ತವ ಬೇರೆ ಇದೆ. ಇಬ್ಬರು ಕಾಂಗ್ರೆಸ್‌ ನಾಯಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುರಿತು ಮಾತನಾಡುತ್ತಿದ್ದಾರೆ ಎಂಬುದು ಮಾಧ್ಯಮಗಳ ವರದಿಗಳಿಂದ ಸ್ಪಷ್ಟವಾಗುತ್ತದೆ.

ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಅವರ ಮಾತಿನ ಹಿನ್ನೆಲೆಯನ್ನು ಸುವರ್ಣ ಸುದ್ದಿವಾಹಿನಿ ಪ್ರಸಾರ ಮಾಡಿದೆ. ಹಂಚಿಕೊಂಡಿರುವ ವಿಡಿಯೊದಲ್ಲಿ ಕೆಲವು ಪದಗಳನ್ನು ಮ್ಯೂಟ್ ಮಾಡಿರುವುದನ್ನು ಗುರುತಿಸಬಹುದು.

ಸುವರ್ಣ ವರದಿ ಹೇಳುವುದೇನು?

“ಸಿದ್ದರಾಮಯ್ಯ ಮತ್ತು ಇಬ್ರಾಹಿಂ ಆತ್ಮೀಯ ಸ್ನೇಹಿತರು. ಇವರಿಬ್ಬರ ನಡುವೆ ಚರ್ಚೆ ಸಾಮಾನ್ಯ. ಮತ್ತೆ ಇವರಿಬ್ಬರ ನಡುವೆ ಸ್ವಾರಸ್ಯಕರ ಚರ್ಚೆ ನಡೆದಿದೆ. ಪರಿಷತ್‌ನಲ್ಲಿ ಸರ್ಕಾರವನ್ನು ಝಾಡಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಪರಿಷತ್‌ನಲ್ಲಾದ ಈಶ್ವರಪ್ಪ ಅವರೊಂದಿಗಿನ ಜಗಳವನ್ನು ಇಬ್ರಾಹಿಂ ಪ್ರಸ್ತಾಪಿಸಿದ್ದಾರೆ. ಪರಿಷತ್‌ನಲ್ಲಿ ಸಚಿವ ಈಶ್ವರಪ್ಪ ಅವರು ರೋಲೆಕ್ಸ್‌ ವಾಚ್ ಪ್ರಕರಣದ ಕುರಿತು ಪ್ರಸ್ತಾಪ ಮಾಡಿದರು. ಈ ವೇಳೆ ಈಶ್ವರಪ್ಪನವರಿಗೆ ಝಾಡಿಸಿದೆ ಎಂದು ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚಿಸಿದರು” ಎಂದು ವರದಿ ಹೇಳುತ್ತದೆ.

ಕೆ.ಎಸ್‌.ಈಶ್ವರಪ್ಪ ಹಾಗೂ ಸಿ.ಎಂ.ಇಬ್ರಾಹಿಂ ಅವರು ವಿಧಾನಪರಿಷತ್‌ನಲ್ಲಿ ಚರ್ಚೆ ಮಾಡಿರುವುದನ್ನೂ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಟಿ.ವಿ.9 ಕನ್ನಡ ಸುದ್ದಿ ವಾಹಿನಿ ಮಾಡಿರುವ ವರದಿಯನ್ನು ಈ ನಿಟ್ಟಿನಲ್ಲಿ ಗಮನಿಸಬಹುದು. ಪರಿಷತ್‌ನಲ್ಲಿ ನಡೆದ ಚರ್ಚೆಯನ್ನು ಇಬ್ರಾಹಿಂ ಅವರು ಸಿದ್ದರಾಮಯ್ಯನವರಿಗೆ ತಿಳಿಸುತ್ತಿದ್ದರು ಎಂಬುದು ವಾಸ್ತವವಾಗಿದೆ. ಆದರೆ ಇದೇ ವಿಡಿಯೋವನ್ನು ಕಾಂಗ್ರೆಸ್ ನಾಯಕರ ಏಕವಚನದ ಜಗಳ ಎಂದು ತಿರುಚಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿರಿ: ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...