Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

- Advertisement -
- Advertisement -

“ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ನಡುವೆ ಜಟಾಪಟಿ ನಡೆದಿದೆ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊ ತುಣುಕ್ಕೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈದರು ಎಂದು ವೈರಲ್ ಮಾಡಲಾಗುತ್ತಿದೆ.

“ಹೇಯ್‌ ಕೂತ್ಕೊಳಲೇ ಕೂಲಿ ಕೆಲ್ಸಕ್ಕೆ ಬಂದೋನು ನೀನು” ಎಂದು ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಅವರಿಗೆ ಹೇಳುತ್ತಿರುವಂತೆ ಈ ವಿಡಿಯೊದಲ್ಲಿ ಭಾಸವಾಗುತ್ತದೆ. ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸುತ್ತಾ, “ನಾನು ರಾಜಕಾರಣಕ್ಕೆ ಬಂದಾಗ ನೀನು ನೀನು ಚಡ್ಡಿನೇ ಹಾಕಿಲ್ಲ” ಎಂದು ಹೇಳಿದಂತೆ ಭಾಸವಾಗುತ್ತದೆ. ಹೀಗೆ ಈ ಇಬ್ಬರು ಕಾಂಗ್ರೆಸ್ ನಾಯಕರು ಜಗಳ ಆಡಿಕೊಂಡಿದ್ದಾರೆ ಎಂದು ಹಲವರು ಬಿಂಬಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇದು ತಿರುಚಿದ (ಎಡಿಟ್ ಮಾಡಿದ) ವಿಡಿಯೋವಾಗಿದೆ. ಇದನ್ನು ಹಲವಾರು ಜನ ಹಂಚಿಕೊಂಡಿರುವುದನ್ನು ಕೆಳಗೆ ಕಾಣಬಹುದು.

ತಕ್ಷಣಕ್ಕೆ ನೋಡಿದರೆ ಕಾಂಗ್ರೆಸ್‌ ನಾಯಕರು ಜಗಳ ಆಡಿದ್ದಾರೆಂದೇ ಅನಿಸುತ್ತದೆ. ಆದರೆ ವಾಸ್ತವ ಬೇರೆ ಇದೆ. ಇಬ್ಬರು ಕಾಂಗ್ರೆಸ್‌ ನಾಯಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುರಿತು ಮಾತನಾಡುತ್ತಿದ್ದಾರೆ ಎಂಬುದು ಮಾಧ್ಯಮಗಳ ವರದಿಗಳಿಂದ ಸ್ಪಷ್ಟವಾಗುತ್ತದೆ.

ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಅವರ ಮಾತಿನ ಹಿನ್ನೆಲೆಯನ್ನು ಸುವರ್ಣ ಸುದ್ದಿವಾಹಿನಿ ಪ್ರಸಾರ ಮಾಡಿದೆ. ಹಂಚಿಕೊಂಡಿರುವ ವಿಡಿಯೊದಲ್ಲಿ ಕೆಲವು ಪದಗಳನ್ನು ಮ್ಯೂಟ್ ಮಾಡಿರುವುದನ್ನು ಗುರುತಿಸಬಹುದು.

ಸುವರ್ಣ ವರದಿ ಹೇಳುವುದೇನು?

“ಸಿದ್ದರಾಮಯ್ಯ ಮತ್ತು ಇಬ್ರಾಹಿಂ ಆತ್ಮೀಯ ಸ್ನೇಹಿತರು. ಇವರಿಬ್ಬರ ನಡುವೆ ಚರ್ಚೆ ಸಾಮಾನ್ಯ. ಮತ್ತೆ ಇವರಿಬ್ಬರ ನಡುವೆ ಸ್ವಾರಸ್ಯಕರ ಚರ್ಚೆ ನಡೆದಿದೆ. ಪರಿಷತ್‌ನಲ್ಲಿ ಸರ್ಕಾರವನ್ನು ಝಾಡಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಪರಿಷತ್‌ನಲ್ಲಾದ ಈಶ್ವರಪ್ಪ ಅವರೊಂದಿಗಿನ ಜಗಳವನ್ನು ಇಬ್ರಾಹಿಂ ಪ್ರಸ್ತಾಪಿಸಿದ್ದಾರೆ. ಪರಿಷತ್‌ನಲ್ಲಿ ಸಚಿವ ಈಶ್ವರಪ್ಪ ಅವರು ರೋಲೆಕ್ಸ್‌ ವಾಚ್ ಪ್ರಕರಣದ ಕುರಿತು ಪ್ರಸ್ತಾಪ ಮಾಡಿದರು. ಈ ವೇಳೆ ಈಶ್ವರಪ್ಪನವರಿಗೆ ಝಾಡಿಸಿದೆ ಎಂದು ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚಿಸಿದರು” ಎಂದು ವರದಿ ಹೇಳುತ್ತದೆ.

ಕೆ.ಎಸ್‌.ಈಶ್ವರಪ್ಪ ಹಾಗೂ ಸಿ.ಎಂ.ಇಬ್ರಾಹಿಂ ಅವರು ವಿಧಾನಪರಿಷತ್‌ನಲ್ಲಿ ಚರ್ಚೆ ಮಾಡಿರುವುದನ್ನೂ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಟಿ.ವಿ.9 ಕನ್ನಡ ಸುದ್ದಿ ವಾಹಿನಿ ಮಾಡಿರುವ ವರದಿಯನ್ನು ಈ ನಿಟ್ಟಿನಲ್ಲಿ ಗಮನಿಸಬಹುದು. ಪರಿಷತ್‌ನಲ್ಲಿ ನಡೆದ ಚರ್ಚೆಯನ್ನು ಇಬ್ರಾಹಿಂ ಅವರು ಸಿದ್ದರಾಮಯ್ಯನವರಿಗೆ ತಿಳಿಸುತ್ತಿದ್ದರು ಎಂಬುದು ವಾಸ್ತವವಾಗಿದೆ. ಆದರೆ ಇದೇ ವಿಡಿಯೋವನ್ನು ಕಾಂಗ್ರೆಸ್ ನಾಯಕರ ಏಕವಚನದ ಜಗಳ ಎಂದು ತಿರುಚಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿರಿ: ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...