Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

- Advertisement -
- Advertisement -

“ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ನಡುವೆ ಜಟಾಪಟಿ ನಡೆದಿದೆ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊ ತುಣುಕ್ಕೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈದರು ಎಂದು ವೈರಲ್ ಮಾಡಲಾಗುತ್ತಿದೆ.

“ಹೇಯ್‌ ಕೂತ್ಕೊಳಲೇ ಕೂಲಿ ಕೆಲ್ಸಕ್ಕೆ ಬಂದೋನು ನೀನು” ಎಂದು ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಅವರಿಗೆ ಹೇಳುತ್ತಿರುವಂತೆ ಈ ವಿಡಿಯೊದಲ್ಲಿ ಭಾಸವಾಗುತ್ತದೆ. ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸುತ್ತಾ, “ನಾನು ರಾಜಕಾರಣಕ್ಕೆ ಬಂದಾಗ ನೀನು ನೀನು ಚಡ್ಡಿನೇ ಹಾಕಿಲ್ಲ” ಎಂದು ಹೇಳಿದಂತೆ ಭಾಸವಾಗುತ್ತದೆ. ಹೀಗೆ ಈ ಇಬ್ಬರು ಕಾಂಗ್ರೆಸ್ ನಾಯಕರು ಜಗಳ ಆಡಿಕೊಂಡಿದ್ದಾರೆ ಎಂದು ಹಲವರು ಬಿಂಬಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇದು ತಿರುಚಿದ (ಎಡಿಟ್ ಮಾಡಿದ) ವಿಡಿಯೋವಾಗಿದೆ. ಇದನ್ನು ಹಲವಾರು ಜನ ಹಂಚಿಕೊಂಡಿರುವುದನ್ನು ಕೆಳಗೆ ಕಾಣಬಹುದು.

ತಕ್ಷಣಕ್ಕೆ ನೋಡಿದರೆ ಕಾಂಗ್ರೆಸ್‌ ನಾಯಕರು ಜಗಳ ಆಡಿದ್ದಾರೆಂದೇ ಅನಿಸುತ್ತದೆ. ಆದರೆ ವಾಸ್ತವ ಬೇರೆ ಇದೆ. ಇಬ್ಬರು ಕಾಂಗ್ರೆಸ್‌ ನಾಯಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುರಿತು ಮಾತನಾಡುತ್ತಿದ್ದಾರೆ ಎಂಬುದು ಮಾಧ್ಯಮಗಳ ವರದಿಗಳಿಂದ ಸ್ಪಷ್ಟವಾಗುತ್ತದೆ.

ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಅವರ ಮಾತಿನ ಹಿನ್ನೆಲೆಯನ್ನು ಸುವರ್ಣ ಸುದ್ದಿವಾಹಿನಿ ಪ್ರಸಾರ ಮಾಡಿದೆ. ಹಂಚಿಕೊಂಡಿರುವ ವಿಡಿಯೊದಲ್ಲಿ ಕೆಲವು ಪದಗಳನ್ನು ಮ್ಯೂಟ್ ಮಾಡಿರುವುದನ್ನು ಗುರುತಿಸಬಹುದು.

ಸುವರ್ಣ ವರದಿ ಹೇಳುವುದೇನು?

“ಸಿದ್ದರಾಮಯ್ಯ ಮತ್ತು ಇಬ್ರಾಹಿಂ ಆತ್ಮೀಯ ಸ್ನೇಹಿತರು. ಇವರಿಬ್ಬರ ನಡುವೆ ಚರ್ಚೆ ಸಾಮಾನ್ಯ. ಮತ್ತೆ ಇವರಿಬ್ಬರ ನಡುವೆ ಸ್ವಾರಸ್ಯಕರ ಚರ್ಚೆ ನಡೆದಿದೆ. ಪರಿಷತ್‌ನಲ್ಲಿ ಸರ್ಕಾರವನ್ನು ಝಾಡಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಪರಿಷತ್‌ನಲ್ಲಾದ ಈಶ್ವರಪ್ಪ ಅವರೊಂದಿಗಿನ ಜಗಳವನ್ನು ಇಬ್ರಾಹಿಂ ಪ್ರಸ್ತಾಪಿಸಿದ್ದಾರೆ. ಪರಿಷತ್‌ನಲ್ಲಿ ಸಚಿವ ಈಶ್ವರಪ್ಪ ಅವರು ರೋಲೆಕ್ಸ್‌ ವಾಚ್ ಪ್ರಕರಣದ ಕುರಿತು ಪ್ರಸ್ತಾಪ ಮಾಡಿದರು. ಈ ವೇಳೆ ಈಶ್ವರಪ್ಪನವರಿಗೆ ಝಾಡಿಸಿದೆ ಎಂದು ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚಿಸಿದರು” ಎಂದು ವರದಿ ಹೇಳುತ್ತದೆ.

ಕೆ.ಎಸ್‌.ಈಶ್ವರಪ್ಪ ಹಾಗೂ ಸಿ.ಎಂ.ಇಬ್ರಾಹಿಂ ಅವರು ವಿಧಾನಪರಿಷತ್‌ನಲ್ಲಿ ಚರ್ಚೆ ಮಾಡಿರುವುದನ್ನೂ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಟಿ.ವಿ.9 ಕನ್ನಡ ಸುದ್ದಿ ವಾಹಿನಿ ಮಾಡಿರುವ ವರದಿಯನ್ನು ಈ ನಿಟ್ಟಿನಲ್ಲಿ ಗಮನಿಸಬಹುದು. ಪರಿಷತ್‌ನಲ್ಲಿ ನಡೆದ ಚರ್ಚೆಯನ್ನು ಇಬ್ರಾಹಿಂ ಅವರು ಸಿದ್ದರಾಮಯ್ಯನವರಿಗೆ ತಿಳಿಸುತ್ತಿದ್ದರು ಎಂಬುದು ವಾಸ್ತವವಾಗಿದೆ. ಆದರೆ ಇದೇ ವಿಡಿಯೋವನ್ನು ಕಾಂಗ್ರೆಸ್ ನಾಯಕರ ಏಕವಚನದ ಜಗಳ ಎಂದು ತಿರುಚಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿರಿ: ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...