Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

- Advertisement -
- Advertisement -

“ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ನಡುವೆ ಜಟಾಪಟಿ ನಡೆದಿದೆ” ಎಂಬ ಪ್ರತಿಪಾದನೆಯೊಂದಿಗೆ ವಿಡಿಯೊ ತುಣುಕ್ಕೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈದರು ಎಂದು ವೈರಲ್ ಮಾಡಲಾಗುತ್ತಿದೆ.

“ಹೇಯ್‌ ಕೂತ್ಕೊಳಲೇ ಕೂಲಿ ಕೆಲ್ಸಕ್ಕೆ ಬಂದೋನು ನೀನು” ಎಂದು ಸಿ.ಎಂ. ಇಬ್ರಾಹಿಂ ಸಿದ್ದರಾಮಯ್ಯ ಅವರಿಗೆ ಹೇಳುತ್ತಿರುವಂತೆ ಈ ವಿಡಿಯೊದಲ್ಲಿ ಭಾಸವಾಗುತ್ತದೆ. ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸುತ್ತಾ, “ನಾನು ರಾಜಕಾರಣಕ್ಕೆ ಬಂದಾಗ ನೀನು ನೀನು ಚಡ್ಡಿನೇ ಹಾಕಿಲ್ಲ” ಎಂದು ಹೇಳಿದಂತೆ ಭಾಸವಾಗುತ್ತದೆ. ಹೀಗೆ ಈ ಇಬ್ಬರು ಕಾಂಗ್ರೆಸ್ ನಾಯಕರು ಜಗಳ ಆಡಿಕೊಂಡಿದ್ದಾರೆ ಎಂದು ಹಲವರು ಬಿಂಬಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಇದು ತಿರುಚಿದ (ಎಡಿಟ್ ಮಾಡಿದ) ವಿಡಿಯೋವಾಗಿದೆ. ಇದನ್ನು ಹಲವಾರು ಜನ ಹಂಚಿಕೊಂಡಿರುವುದನ್ನು ಕೆಳಗೆ ಕಾಣಬಹುದು.

ತಕ್ಷಣಕ್ಕೆ ನೋಡಿದರೆ ಕಾಂಗ್ರೆಸ್‌ ನಾಯಕರು ಜಗಳ ಆಡಿದ್ದಾರೆಂದೇ ಅನಿಸುತ್ತದೆ. ಆದರೆ ವಾಸ್ತವ ಬೇರೆ ಇದೆ. ಇಬ್ಬರು ಕಾಂಗ್ರೆಸ್‌ ನಾಯಕರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುರಿತು ಮಾತನಾಡುತ್ತಿದ್ದಾರೆ ಎಂಬುದು ಮಾಧ್ಯಮಗಳ ವರದಿಗಳಿಂದ ಸ್ಪಷ್ಟವಾಗುತ್ತದೆ.

ಇಬ್ರಾಹಿಂ ಹಾಗೂ ಸಿದ್ದರಾಮಯ್ಯ ಅವರ ಮಾತಿನ ಹಿನ್ನೆಲೆಯನ್ನು ಸುವರ್ಣ ಸುದ್ದಿವಾಹಿನಿ ಪ್ರಸಾರ ಮಾಡಿದೆ. ಹಂಚಿಕೊಂಡಿರುವ ವಿಡಿಯೊದಲ್ಲಿ ಕೆಲವು ಪದಗಳನ್ನು ಮ್ಯೂಟ್ ಮಾಡಿರುವುದನ್ನು ಗುರುತಿಸಬಹುದು.

ಸುವರ್ಣ ವರದಿ ಹೇಳುವುದೇನು?

“ಸಿದ್ದರಾಮಯ್ಯ ಮತ್ತು ಇಬ್ರಾಹಿಂ ಆತ್ಮೀಯ ಸ್ನೇಹಿತರು. ಇವರಿಬ್ಬರ ನಡುವೆ ಚರ್ಚೆ ಸಾಮಾನ್ಯ. ಮತ್ತೆ ಇವರಿಬ್ಬರ ನಡುವೆ ಸ್ವಾರಸ್ಯಕರ ಚರ್ಚೆ ನಡೆದಿದೆ. ಪರಿಷತ್‌ನಲ್ಲಿ ಸರ್ಕಾರವನ್ನು ಝಾಡಿಸುವಂತೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಪರಿಷತ್‌ನಲ್ಲಾದ ಈಶ್ವರಪ್ಪ ಅವರೊಂದಿಗಿನ ಜಗಳವನ್ನು ಇಬ್ರಾಹಿಂ ಪ್ರಸ್ತಾಪಿಸಿದ್ದಾರೆ. ಪರಿಷತ್‌ನಲ್ಲಿ ಸಚಿವ ಈಶ್ವರಪ್ಪ ಅವರು ರೋಲೆಕ್ಸ್‌ ವಾಚ್ ಪ್ರಕರಣದ ಕುರಿತು ಪ್ರಸ್ತಾಪ ಮಾಡಿದರು. ಈ ವೇಳೆ ಈಶ್ವರಪ್ಪನವರಿಗೆ ಝಾಡಿಸಿದೆ ಎಂದು ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಚರ್ಚಿಸಿದರು” ಎಂದು ವರದಿ ಹೇಳುತ್ತದೆ.

ಕೆ.ಎಸ್‌.ಈಶ್ವರಪ್ಪ ಹಾಗೂ ಸಿ.ಎಂ.ಇಬ್ರಾಹಿಂ ಅವರು ವಿಧಾನಪರಿಷತ್‌ನಲ್ಲಿ ಚರ್ಚೆ ಮಾಡಿರುವುದನ್ನೂ ದೃಶ್ಯ ಮಾಧ್ಯಮಗಳು ವರದಿ ಮಾಡಿವೆ. ಟಿ.ವಿ.9 ಕನ್ನಡ ಸುದ್ದಿ ವಾಹಿನಿ ಮಾಡಿರುವ ವರದಿಯನ್ನು ಈ ನಿಟ್ಟಿನಲ್ಲಿ ಗಮನಿಸಬಹುದು. ಪರಿಷತ್‌ನಲ್ಲಿ ನಡೆದ ಚರ್ಚೆಯನ್ನು ಇಬ್ರಾಹಿಂ ಅವರು ಸಿದ್ದರಾಮಯ್ಯನವರಿಗೆ ತಿಳಿಸುತ್ತಿದ್ದರು ಎಂಬುದು ವಾಸ್ತವವಾಗಿದೆ. ಆದರೆ ಇದೇ ವಿಡಿಯೋವನ್ನು ಕಾಂಗ್ರೆಸ್ ನಾಯಕರ ಏಕವಚನದ ಜಗಳ ಎಂದು ತಿರುಚಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿರಿ: ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...