HomeUncategorizedಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು...

ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?

- Advertisement -
- Advertisement -

ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿದೆ.  6ನೇ ಆವೃತ್ತಿಯ ಕಂಪ್ಯೂಟರನ್ನು 2025ರ ವೇಳೆಗೆ ಮತ್ತು 7ನೇ ಆವೃತ್ತಿಯ ಕಂಪ್ಯೂಟರನ್ನು 2034ರ ವೇಳೆಗೆ ಬಿಡುಗಡೆಗೊಳಸಲಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ.

ಅಮೇರಿಕವು 6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ಬಿಡುಗಡೆಮಾಡಲಾಗುತ್ತದೆ ಎಂದು NASA ವಿಜ್ಞಾನಿಗಳು ವರದಿ ಮಾಡಿದ್ದಾರೆ ಎಂಬ ಪೋಸ್ಟ್ 2016ರಿಂದಲೇ ವೈರಲ್ ಆಗುತ್ತಿದೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾವು NASA ಅವರ ಅಧಿಕೃತ ವೆಬ್ ಸೈಟ್ ಪರಿಶೀಲಿಸಿದಾಗ ಮೇಲಿನ ಪ್ರತಿಪಾದನೆ ರೀತಿಯ ಯಾವುದೇ ರೀತಿಯ ಮಾಹಿತಿಗಳು ನಮಗೆ ಸಿಕ್ಕಿಲ್ಲ. NASA ಅವರ ಸೂಪರ್ ಕಂಪ್ಯೂಟರ್ ವಿಭಾಗದ ವೈಬ್ ಸೈಟನಲ್ಲಿ ಕೂಡ ಈ ಸಂಸ್ಕೃತ ಭಾಷೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾಸಾ ವರದಿಯ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಪತ್ರಿಕಾ ವರದಿಗಳು ಕಂಡುಬಂದಿಲ್ಲ.

ಸಂಸ್ಕೃತ ಭಾಷೆ ಮತ್ತು NASA ಗೆ ಸಂಬಂಧಿಸಿದಂತೆ, 1985 ರಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಪುಸ್ತಕದಲ್ಲಿ ರಿಕ್ ಬ್ರಿಗ್ಸ್ ಅವರು “Knowledge Representation in Sanskrit and Artificial Intelligence (ಜ್ಞಾನದ ದೃಷ್ಟಿಯಿಂದ ಸಂಸ್ಕೃತ ಮತ್ತು ಕೃತಕ ಬುದ್ದಿಮತ್ತೆ” ಎಂಬ ಬರಹ ಬರೆದಿದ್ದಾರೆ). ಅದರಲ್ಲಿ 2025 ಮತ್ತು 2034ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ  6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್ ತಯಾರುಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆ ಬರಹದಲ್ಲಿ ಸಂಸ್ಕೃತದಂತಹ 1000 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭಾಷೆಗಳನ್ನು ಕೃತಕ ಬುದ್ದಿಮತ್ತೆ ಸಂಬಂಧಿತ ಕಂಪ್ಯೂಟರ್ ಪ್ರಕ್ರಿಯೆಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಮಾತ್ರ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್  2015 ರಲ್ಲಿ ಸಂಸ್ಕೃತ ಭಾಷೆಯ ಉಪಯುಕ್ತತೆ ಕುರಿತು ಮಾತನಾಡುತ್ತ, “NASA ಅವರು ಸೂಪರ್ ಕಂಪ್ಯೂಟರ್ ನಿರ್ಮಿಸುತ್ತಿದ್ದಾರೆ, ಅದಕ್ಕೆ ಸಂಸ್ಕೃತ ಭಾಷೆಯು ಅತ್ಯಂತ ಸೂಕ್ತವಾಗಿದೆ ಎಂದಿದ್ದರು. ಆ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹದು. ಆದರೆ 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ 6ನೇ ಮತ್ತು 7ನೇ ಅವೃತ್ತಿಯ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಯಾವುದೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದಕ್ಕೂ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

IIT  ಪ್ರಾಧ್ಯಾಪರಾದ  ಡಾ. ಪವನ್ ಗೋಯಲ್‌ರವರು ನಾಸಾ ಲ್ಯಾಬ್‌ಗಳಲ್ಲಿ ರಹಸ್ಯವಾಗಿ ಸಂಸ್ಕೃತ ಕಲಿಸಲಾಗುತ್ತಿದೆ ಎಂಬ ಪ್ರತಿಪಾದನೆಯನ್ನು ನಿರಾಕರಿಸಿದ್ದಾರೆ. ಅದೆಲ್ಲವೂ ಕಟ್ಟು ಕತೆ ಎಂದು ಟೀಕಿಸಿದ್ದಾರೆ. ಸ್ವರಾಜ್ಯ ಮ್ಯಾಗಜಿನ್‌ನವರು ಅವರ ಬಳಿ ಕೃತಕ ಬುದ್ದಿಮತ್ತೆಯಲ್ಲಿ ಸಂಸ್ಕೃತದ ಬಳಕೆ ಕುರಿತು ರಿಕ್ ಬ್ರಿಗ್ಸ್‌ ವರದಿಯ ಬಗ್ಗೆ ಕೇಳಿದಾಗ “ಅದು ಬಹಳ ಆಸಕ್ತಿದಾಯಕ ಲೇಖನವಾಗಿತ್ತು, ಇದು ಭಾರತೀಯ ವ್ಯಾಕರಣ ಸಂಪ್ರದಾಯದ ಪರಿಕಲ್ಪನೆಗಳನ್ನು ಕೃತಕ ಬುದ್ಧಿವಂತಿಕೆ ಸಂಶೋಧನೆಯಲ್ಲಿ ಜ್ಞಾನದ ಪ್ರಾತಿನಿಧ್ಯಕ್ಕಾಗಿ ಹೇಗೆ ಬಳಸಬಹುದು ಎಂಬುದರ ಬಗ್ಗೆ ತಿಳಿಸಲಾಗಿದೆ. ಲೇಖನವು ಕಠಿಣ ಮತ್ತು ಆಸಕ್ತಿದಾಯಕವಾಗಿದೆ. ಆದರೆ ಸೋಷಿಯಲ್  ಮೀಡಿಯಾದಲ್ಲಿ ತಡೆಯಾಗಲಷ್ಟು ತಪ್ಪು ಮಾಹಿತಿ ಹರಡಿದೆ. ’’ಸಂಸ್ಕೃತವು ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಅಂತಿಮ ಭಾಷೆಯಾಗಿದೆ, ಇದನ್ನು  NASA ಪ್ರಯೋಗಾಲಯಗಳಲ್ಲಿ ಅಧ್ಯಯನ ಮಾಡಲಾಗಿದೆ ಎಂದು ಹೇಳುವಷ್ಟರ ಮಟ್ಟಿಗೆ ಸುಳ್ಳು ಹರಡಿದೆ.  ಇಂಗ್ಲಿಷ್ ಅಥವಾ ಹಿಂದಿಯಂತಹ ಯಾವುದೇ ನೈಸರ್ಗಿಕ ಭಾಷೆಯಂತೆ ಸಂಸ್ಕೃತವನ್ನು ಪ್ರೋಗ್ರಾಮಿಂಗ್ ಭಾಷೆಯಾಗಿ ನೇರವಾಗಿ ಬಳಸಲಾಗುವುದಿಲ್ಲ. ಈ ವದಂತಿಗಳು ಪ್ರಾಚೀನ ವಿಜ್ಞಾನ ವ್ಯಾಕರಣಕ್ಕೆ  ಹಾನಿಕಾರಕವಾಗಿದೆ” ಎಂದಿದ್ದಾರೆ.  ಡಾ ಪವನ್ ಗೋಯಲ್ ಅವರು ಕಂಪ್ಯೂಟರ್ ವಿಜ್ಞಾನಿಯಾಗಿದ್ದು, ಅವರು ಸ್ವಯಂಚಾಲಿತ ಕಂಪ್ಯೂಟೇಶನಲ್ ಪ್ರೊಸೆಸಿಂಗ್ ತಂತ್ರಗಳ ಸಹಾಯದಿಂದ ಸಂಸ್ಕೃತ ಪಠ್ಯಗಳನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯನ್ನು ಆಧರಿಸಿ 6ನೇ ಮತ್ತು 7ನೇ ತಲೆಮಾರಿನ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಅಮೇರಿಕದ ಯೋಜನೆಯು NASA ವಿಜ್ಞಾನಿಗಳ ವರದಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...