HomeUncategorizedಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು...

ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?

- Advertisement -
- Advertisement -

ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿದೆ.  6ನೇ ಆವೃತ್ತಿಯ ಕಂಪ್ಯೂಟರನ್ನು 2025ರ ವೇಳೆಗೆ ಮತ್ತು 7ನೇ ಆವೃತ್ತಿಯ ಕಂಪ್ಯೂಟರನ್ನು 2034ರ ವೇಳೆಗೆ ಬಿಡುಗಡೆಗೊಳಸಲಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ.

ಅಮೇರಿಕವು 6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ಬಿಡುಗಡೆಮಾಡಲಾಗುತ್ತದೆ ಎಂದು NASA ವಿಜ್ಞಾನಿಗಳು ವರದಿ ಮಾಡಿದ್ದಾರೆ ಎಂಬ ಪೋಸ್ಟ್ 2016ರಿಂದಲೇ ವೈರಲ್ ಆಗುತ್ತಿದೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾವು NASA ಅವರ ಅಧಿಕೃತ ವೆಬ್ ಸೈಟ್ ಪರಿಶೀಲಿಸಿದಾಗ ಮೇಲಿನ ಪ್ರತಿಪಾದನೆ ರೀತಿಯ ಯಾವುದೇ ರೀತಿಯ ಮಾಹಿತಿಗಳು ನಮಗೆ ಸಿಕ್ಕಿಲ್ಲ. NASA ಅವರ ಸೂಪರ್ ಕಂಪ್ಯೂಟರ್ ವಿಭಾಗದ ವೈಬ್ ಸೈಟನಲ್ಲಿ ಕೂಡ ಈ ಸಂಸ್ಕೃತ ಭಾಷೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾಸಾ ವರದಿಯ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಪತ್ರಿಕಾ ವರದಿಗಳು ಕಂಡುಬಂದಿಲ್ಲ.

ಸಂಸ್ಕೃತ ಭಾಷೆ ಮತ್ತು NASA ಗೆ ಸಂಬಂಧಿಸಿದಂತೆ, 1985 ರಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಪುಸ್ತಕದಲ್ಲಿ ರಿಕ್ ಬ್ರಿಗ್ಸ್ ಅವರು “Knowledge Representation in Sanskrit and Artificial Intelligence (ಜ್ಞಾನದ ದೃಷ್ಟಿಯಿಂದ ಸಂಸ್ಕೃತ ಮತ್ತು ಕೃತಕ ಬುದ್ದಿಮತ್ತೆ” ಎಂಬ ಬರಹ ಬರೆದಿದ್ದಾರೆ). ಅದರಲ್ಲಿ 2025 ಮತ್ತು 2034ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ  6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್ ತಯಾರುಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆ ಬರಹದಲ್ಲಿ ಸಂಸ್ಕೃತದಂತಹ 1000 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭಾಷೆಗಳನ್ನು ಕೃತಕ ಬುದ್ದಿಮತ್ತೆ ಸಂಬಂಧಿತ ಕಂಪ್ಯೂಟರ್ ಪ್ರಕ್ರಿಯೆಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಮಾತ್ರ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್  2015 ರಲ್ಲಿ ಸಂಸ್ಕೃತ ಭಾಷೆಯ ಉಪಯುಕ್ತತೆ ಕುರಿತು ಮಾತನಾಡುತ್ತ, “NASA ಅವರು ಸೂಪರ್ ಕಂಪ್ಯೂಟರ್ ನಿರ್ಮಿಸುತ್ತಿದ್ದಾರೆ, ಅದಕ್ಕೆ ಸಂಸ್ಕೃತ ಭಾಷೆಯು ಅತ್ಯಂತ ಸೂಕ್ತವಾಗಿದೆ ಎಂದಿದ್ದರು. ಆ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹದು. ಆದರೆ 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ 6ನೇ ಮತ್ತು 7ನೇ ಅವೃತ್ತಿಯ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಯಾವುದೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದಕ್ಕೂ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

IIT  ಪ್ರಾಧ್ಯಾಪರಾದ  ಡಾ. ಪವನ್ ಗೋಯಲ್‌ರವರು ನಾಸಾ ಲ್ಯಾಬ್‌ಗಳಲ್ಲಿ ರಹಸ್ಯವಾಗಿ ಸಂಸ್ಕೃತ ಕಲಿಸಲಾಗುತ್ತಿದೆ ಎಂಬ ಪ್ರತಿಪಾದನೆಯನ್ನು ನಿರಾಕರಿಸಿದ್ದಾರೆ. ಅದೆಲ್ಲವೂ ಕಟ್ಟು ಕತೆ ಎಂದು ಟೀಕಿಸಿದ್ದಾರೆ. ಸ್ವರಾಜ್ಯ ಮ್ಯಾಗಜಿನ್‌ನವರು ಅವರ ಬಳಿ ಕೃತಕ ಬುದ್ದಿಮತ್ತೆಯಲ್ಲಿ ಸಂಸ್ಕೃತದ ಬಳಕೆ ಕುರಿತು ರಿಕ್ ಬ್ರಿಗ್ಸ್‌ ವರದಿಯ ಬಗ್ಗೆ ಕೇಳಿದಾಗ “ಅದು ಬಹಳ ಆಸಕ್ತಿದಾಯಕ ಲೇಖನವಾಗಿತ್ತು, ಇದು ಭಾರತೀಯ ವ್ಯಾಕರಣ ಸಂಪ್ರದಾಯದ ಪರಿಕಲ್ಪನೆಗಳನ್ನು ಕೃತಕ ಬುದ್ಧಿವಂತಿಕೆ ಸಂಶೋಧನೆಯಲ್ಲಿ ಜ್ಞಾನದ ಪ್ರಾತಿನಿಧ್ಯಕ್ಕಾಗಿ ಹೇಗೆ ಬಳಸಬಹುದು ಎಂಬುದರ ಬಗ್ಗೆ ತಿಳಿಸಲಾಗಿದೆ. ಲೇಖನವು ಕಠಿಣ ಮತ್ತು ಆಸಕ್ತಿದಾಯಕವಾಗಿದೆ. ಆದರೆ ಸೋಷಿಯಲ್  ಮೀಡಿಯಾದಲ್ಲಿ ತಡೆಯಾಗಲಷ್ಟು ತಪ್ಪು ಮಾಹಿತಿ ಹರಡಿದೆ. ’’ಸಂಸ್ಕೃತವು ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಅಂತಿಮ ಭಾಷೆಯಾಗಿದೆ, ಇದನ್ನು  NASA ಪ್ರಯೋಗಾಲಯಗಳಲ್ಲಿ ಅಧ್ಯಯನ ಮಾಡಲಾಗಿದೆ ಎಂದು ಹೇಳುವಷ್ಟರ ಮಟ್ಟಿಗೆ ಸುಳ್ಳು ಹರಡಿದೆ.  ಇಂಗ್ಲಿಷ್ ಅಥವಾ ಹಿಂದಿಯಂತಹ ಯಾವುದೇ ನೈಸರ್ಗಿಕ ಭಾಷೆಯಂತೆ ಸಂಸ್ಕೃತವನ್ನು ಪ್ರೋಗ್ರಾಮಿಂಗ್ ಭಾಷೆಯಾಗಿ ನೇರವಾಗಿ ಬಳಸಲಾಗುವುದಿಲ್ಲ. ಈ ವದಂತಿಗಳು ಪ್ರಾಚೀನ ವಿಜ್ಞಾನ ವ್ಯಾಕರಣಕ್ಕೆ  ಹಾನಿಕಾರಕವಾಗಿದೆ” ಎಂದಿದ್ದಾರೆ.  ಡಾ ಪವನ್ ಗೋಯಲ್ ಅವರು ಕಂಪ್ಯೂಟರ್ ವಿಜ್ಞಾನಿಯಾಗಿದ್ದು, ಅವರು ಸ್ವಯಂಚಾಲಿತ ಕಂಪ್ಯೂಟೇಶನಲ್ ಪ್ರೊಸೆಸಿಂಗ್ ತಂತ್ರಗಳ ಸಹಾಯದಿಂದ ಸಂಸ್ಕೃತ ಪಠ್ಯಗಳನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯನ್ನು ಆಧರಿಸಿ 6ನೇ ಮತ್ತು 7ನೇ ತಲೆಮಾರಿನ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಅಮೇರಿಕದ ಯೋಜನೆಯು NASA ವಿಜ್ಞಾನಿಗಳ ವರದಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....