HomeUncategorizedಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು...

ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?

- Advertisement -
- Advertisement -

ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿದೆ.  6ನೇ ಆವೃತ್ತಿಯ ಕಂಪ್ಯೂಟರನ್ನು 2025ರ ವೇಳೆಗೆ ಮತ್ತು 7ನೇ ಆವೃತ್ತಿಯ ಕಂಪ್ಯೂಟರನ್ನು 2034ರ ವೇಳೆಗೆ ಬಿಡುಗಡೆಗೊಳಸಲಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ.

ಅಮೇರಿಕವು 6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ಬಿಡುಗಡೆಮಾಡಲಾಗುತ್ತದೆ ಎಂದು NASA ವಿಜ್ಞಾನಿಗಳು ವರದಿ ಮಾಡಿದ್ದಾರೆ ಎಂಬ ಪೋಸ್ಟ್ 2016ರಿಂದಲೇ ವೈರಲ್ ಆಗುತ್ತಿದೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾವು NASA ಅವರ ಅಧಿಕೃತ ವೆಬ್ ಸೈಟ್ ಪರಿಶೀಲಿಸಿದಾಗ ಮೇಲಿನ ಪ್ರತಿಪಾದನೆ ರೀತಿಯ ಯಾವುದೇ ರೀತಿಯ ಮಾಹಿತಿಗಳು ನಮಗೆ ಸಿಕ್ಕಿಲ್ಲ. NASA ಅವರ ಸೂಪರ್ ಕಂಪ್ಯೂಟರ್ ವಿಭಾಗದ ವೈಬ್ ಸೈಟನಲ್ಲಿ ಕೂಡ ಈ ಸಂಸ್ಕೃತ ಭಾಷೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾಸಾ ವರದಿಯ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಪತ್ರಿಕಾ ವರದಿಗಳು ಕಂಡುಬಂದಿಲ್ಲ.

ಸಂಸ್ಕೃತ ಭಾಷೆ ಮತ್ತು NASA ಗೆ ಸಂಬಂಧಿಸಿದಂತೆ, 1985 ರಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಪುಸ್ತಕದಲ್ಲಿ ರಿಕ್ ಬ್ರಿಗ್ಸ್ ಅವರು “Knowledge Representation in Sanskrit and Artificial Intelligence (ಜ್ಞಾನದ ದೃಷ್ಟಿಯಿಂದ ಸಂಸ್ಕೃತ ಮತ್ತು ಕೃತಕ ಬುದ್ದಿಮತ್ತೆ” ಎಂಬ ಬರಹ ಬರೆದಿದ್ದಾರೆ). ಅದರಲ್ಲಿ 2025 ಮತ್ತು 2034ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ  6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್ ತಯಾರುಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆ ಬರಹದಲ್ಲಿ ಸಂಸ್ಕೃತದಂತಹ 1000 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭಾಷೆಗಳನ್ನು ಕೃತಕ ಬುದ್ದಿಮತ್ತೆ ಸಂಬಂಧಿತ ಕಂಪ್ಯೂಟರ್ ಪ್ರಕ್ರಿಯೆಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಮಾತ್ರ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್  2015 ರಲ್ಲಿ ಸಂಸ್ಕೃತ ಭಾಷೆಯ ಉಪಯುಕ್ತತೆ ಕುರಿತು ಮಾತನಾಡುತ್ತ, “NASA ಅವರು ಸೂಪರ್ ಕಂಪ್ಯೂಟರ್ ನಿರ್ಮಿಸುತ್ತಿದ್ದಾರೆ, ಅದಕ್ಕೆ ಸಂಸ್ಕೃತ ಭಾಷೆಯು ಅತ್ಯಂತ ಸೂಕ್ತವಾಗಿದೆ ಎಂದಿದ್ದರು. ಆ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹದು. ಆದರೆ 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ 6ನೇ ಮತ್ತು 7ನೇ ಅವೃತ್ತಿಯ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಯಾವುದೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದಕ್ಕೂ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

IIT  ಪ್ರಾಧ್ಯಾಪರಾದ  ಡಾ. ಪವನ್ ಗೋಯಲ್‌ರವರು ನಾಸಾ ಲ್ಯಾಬ್‌ಗಳಲ್ಲಿ ರಹಸ್ಯವಾಗಿ ಸಂಸ್ಕೃತ ಕಲಿಸಲಾಗುತ್ತಿದೆ ಎಂಬ ಪ್ರತಿಪಾದನೆಯನ್ನು ನಿರಾಕರಿಸಿದ್ದಾರೆ. ಅದೆಲ್ಲವೂ ಕಟ್ಟು ಕತೆ ಎಂದು ಟೀಕಿಸಿದ್ದಾರೆ. ಸ್ವರಾಜ್ಯ ಮ್ಯಾಗಜಿನ್‌ನವರು ಅವರ ಬಳಿ ಕೃತಕ ಬುದ್ದಿಮತ್ತೆಯಲ್ಲಿ ಸಂಸ್ಕೃತದ ಬಳಕೆ ಕುರಿತು ರಿಕ್ ಬ್ರಿಗ್ಸ್‌ ವರದಿಯ ಬಗ್ಗೆ ಕೇಳಿದಾಗ “ಅದು ಬಹಳ ಆಸಕ್ತಿದಾಯಕ ಲೇಖನವಾಗಿತ್ತು, ಇದು ಭಾರತೀಯ ವ್ಯಾಕರಣ ಸಂಪ್ರದಾಯದ ಪರಿಕಲ್ಪನೆಗಳನ್ನು ಕೃತಕ ಬುದ್ಧಿವಂತಿಕೆ ಸಂಶೋಧನೆಯಲ್ಲಿ ಜ್ಞಾನದ ಪ್ರಾತಿನಿಧ್ಯಕ್ಕಾಗಿ ಹೇಗೆ ಬಳಸಬಹುದು ಎಂಬುದರ ಬಗ್ಗೆ ತಿಳಿಸಲಾಗಿದೆ. ಲೇಖನವು ಕಠಿಣ ಮತ್ತು ಆಸಕ್ತಿದಾಯಕವಾಗಿದೆ. ಆದರೆ ಸೋಷಿಯಲ್  ಮೀಡಿಯಾದಲ್ಲಿ ತಡೆಯಾಗಲಷ್ಟು ತಪ್ಪು ಮಾಹಿತಿ ಹರಡಿದೆ. ’’ಸಂಸ್ಕೃತವು ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಅಂತಿಮ ಭಾಷೆಯಾಗಿದೆ, ಇದನ್ನು  NASA ಪ್ರಯೋಗಾಲಯಗಳಲ್ಲಿ ಅಧ್ಯಯನ ಮಾಡಲಾಗಿದೆ ಎಂದು ಹೇಳುವಷ್ಟರ ಮಟ್ಟಿಗೆ ಸುಳ್ಳು ಹರಡಿದೆ.  ಇಂಗ್ಲಿಷ್ ಅಥವಾ ಹಿಂದಿಯಂತಹ ಯಾವುದೇ ನೈಸರ್ಗಿಕ ಭಾಷೆಯಂತೆ ಸಂಸ್ಕೃತವನ್ನು ಪ್ರೋಗ್ರಾಮಿಂಗ್ ಭಾಷೆಯಾಗಿ ನೇರವಾಗಿ ಬಳಸಲಾಗುವುದಿಲ್ಲ. ಈ ವದಂತಿಗಳು ಪ್ರಾಚೀನ ವಿಜ್ಞಾನ ವ್ಯಾಕರಣಕ್ಕೆ  ಹಾನಿಕಾರಕವಾಗಿದೆ” ಎಂದಿದ್ದಾರೆ.  ಡಾ ಪವನ್ ಗೋಯಲ್ ಅವರು ಕಂಪ್ಯೂಟರ್ ವಿಜ್ಞಾನಿಯಾಗಿದ್ದು, ಅವರು ಸ್ವಯಂಚಾಲಿತ ಕಂಪ್ಯೂಟೇಶನಲ್ ಪ್ರೊಸೆಸಿಂಗ್ ತಂತ್ರಗಳ ಸಹಾಯದಿಂದ ಸಂಸ್ಕೃತ ಪಠ್ಯಗಳನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯನ್ನು ಆಧರಿಸಿ 6ನೇ ಮತ್ತು 7ನೇ ತಲೆಮಾರಿನ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಅಮೇರಿಕದ ಯೋಜನೆಯು NASA ವಿಜ್ಞಾನಿಗಳ ವರದಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...