HomeUncategorizedಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು...

ಫ್ಯಾಕ್ಟ್‌ಚೆಕ್: ಸಂಸ್ಕೃತ ಭಾಷೆಯ ಆಧಾರದ ಮೇಲೆ ಸೂಪರ್ ಕಂಪ್ಯೂಟರ್ ರಚನೆ ಮಾಡುವ ಬಗ್ಗೆ NASA ವಿಜ್ಞಾನಿಗಳು ಹೇಳಿದ್ದಾರೆಯೇ?

- Advertisement -
- Advertisement -

ಅಮೇರಿಕದವರು 6ನೇ ಮತ್ತು 7ನೇ ಆವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ರಚನೆಮಾಡಲಾಗುತ್ತದೆ ಎಂಬ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ವೈರಲ್ ಆಗುತ್ತಿದೆ.  6ನೇ ಆವೃತ್ತಿಯ ಕಂಪ್ಯೂಟರನ್ನು 2025ರ ವೇಳೆಗೆ ಮತ್ತು 7ನೇ ಆವೃತ್ತಿಯ ಕಂಪ್ಯೂಟರನ್ನು 2034ರ ವೇಳೆಗೆ ಬಿಡುಗಡೆಗೊಳಸಲಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಇದು ನಿಜವೇ ಪರಿಶೀಲಿಸೋಣ.

ಅಮೇರಿಕವು 6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್‌ಗಳನ್ನು ಸಂಸ್ಕೃತ ಭಾಷೆಯ ಆಧಾರದ ಮೇಲೆ ಬಿಡುಗಡೆಮಾಡಲಾಗುತ್ತದೆ ಎಂದು NASA ವಿಜ್ಞಾನಿಗಳು ವರದಿ ಮಾಡಿದ್ದಾರೆ ಎಂಬ ಪೋಸ್ಟ್ 2016ರಿಂದಲೇ ವೈರಲ್ ಆಗುತ್ತಿದೆ. ಅವುಗಳನ್ನು  ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾವು NASA ಅವರ ಅಧಿಕೃತ ವೆಬ್ ಸೈಟ್ ಪರಿಶೀಲಿಸಿದಾಗ ಮೇಲಿನ ಪ್ರತಿಪಾದನೆ ರೀತಿಯ ಯಾವುದೇ ರೀತಿಯ ಮಾಹಿತಿಗಳು ನಮಗೆ ಸಿಕ್ಕಿಲ್ಲ. NASA ಅವರ ಸೂಪರ್ ಕಂಪ್ಯೂಟರ್ ವಿಭಾಗದ ವೈಬ್ ಸೈಟನಲ್ಲಿ ಕೂಡ ಈ ಸಂಸ್ಕೃತ ಭಾಷೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಾಸಾ ವರದಿಯ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಪತ್ರಿಕಾ ವರದಿಗಳು ಕಂಡುಬಂದಿಲ್ಲ.

ಸಂಸ್ಕೃತ ಭಾಷೆ ಮತ್ತು NASA ಗೆ ಸಂಬಂಧಿಸಿದಂತೆ, 1985 ರಲ್ಲಿ ‘ಆರ್ಟಿಫಿಶಿಯಲ್ ಇಂಟೆಲಿಜೆನ್ಸ್’ ಪುಸ್ತಕದಲ್ಲಿ ರಿಕ್ ಬ್ರಿಗ್ಸ್ ಅವರು “Knowledge Representation in Sanskrit and Artificial Intelligence (ಜ್ಞಾನದ ದೃಷ್ಟಿಯಿಂದ ಸಂಸ್ಕೃತ ಮತ್ತು ಕೃತಕ ಬುದ್ದಿಮತ್ತೆ” ಎಂಬ ಬರಹ ಬರೆದಿದ್ದಾರೆ). ಅದರಲ್ಲಿ 2025 ಮತ್ತು 2034ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ  6ನೇ ಮತ್ತು 7ನೇ ಅವೃತ್ತಿಯ ಸೂಪರ್ ಕಂಪ್ಯೂಟರ್ ತಯಾರುಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಆ ಬರಹದಲ್ಲಿ ಸಂಸ್ಕೃತದಂತಹ 1000 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭಾಷೆಗಳನ್ನು ಕೃತಕ ಬುದ್ದಿಮತ್ತೆ ಸಂಬಂಧಿತ ಕಂಪ್ಯೂಟರ್ ಪ್ರಕ್ರಿಯೆಯಲ್ಲಿ ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಮಾತ್ರ ಬರೆಯಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್  ಸಿಂಗ್  2015 ರಲ್ಲಿ ಸಂಸ್ಕೃತ ಭಾಷೆಯ ಉಪಯುಕ್ತತೆ ಕುರಿತು ಮಾತನಾಡುತ್ತ, “NASA ಅವರು ಸೂಪರ್ ಕಂಪ್ಯೂಟರ್ ನಿರ್ಮಿಸುತ್ತಿದ್ದಾರೆ, ಅದಕ್ಕೆ ಸಂಸ್ಕೃತ ಭಾಷೆಯು ಅತ್ಯಂತ ಸೂಕ್ತವಾಗಿದೆ ಎಂದಿದ್ದರು. ಆ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹದು. ಆದರೆ 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯ ಆಧಾರದ ಮೇಲೆ 6ನೇ ಮತ್ತು 7ನೇ ಅವೃತ್ತಿಯ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಯಾವುದೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಇದಕ್ಕೂ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ.

IIT  ಪ್ರಾಧ್ಯಾಪರಾದ  ಡಾ. ಪವನ್ ಗೋಯಲ್‌ರವರು ನಾಸಾ ಲ್ಯಾಬ್‌ಗಳಲ್ಲಿ ರಹಸ್ಯವಾಗಿ ಸಂಸ್ಕೃತ ಕಲಿಸಲಾಗುತ್ತಿದೆ ಎಂಬ ಪ್ರತಿಪಾದನೆಯನ್ನು ನಿರಾಕರಿಸಿದ್ದಾರೆ. ಅದೆಲ್ಲವೂ ಕಟ್ಟು ಕತೆ ಎಂದು ಟೀಕಿಸಿದ್ದಾರೆ. ಸ್ವರಾಜ್ಯ ಮ್ಯಾಗಜಿನ್‌ನವರು ಅವರ ಬಳಿ ಕೃತಕ ಬುದ್ದಿಮತ್ತೆಯಲ್ಲಿ ಸಂಸ್ಕೃತದ ಬಳಕೆ ಕುರಿತು ರಿಕ್ ಬ್ರಿಗ್ಸ್‌ ವರದಿಯ ಬಗ್ಗೆ ಕೇಳಿದಾಗ “ಅದು ಬಹಳ ಆಸಕ್ತಿದಾಯಕ ಲೇಖನವಾಗಿತ್ತು, ಇದು ಭಾರತೀಯ ವ್ಯಾಕರಣ ಸಂಪ್ರದಾಯದ ಪರಿಕಲ್ಪನೆಗಳನ್ನು ಕೃತಕ ಬುದ್ಧಿವಂತಿಕೆ ಸಂಶೋಧನೆಯಲ್ಲಿ ಜ್ಞಾನದ ಪ್ರಾತಿನಿಧ್ಯಕ್ಕಾಗಿ ಹೇಗೆ ಬಳಸಬಹುದು ಎಂಬುದರ ಬಗ್ಗೆ ತಿಳಿಸಲಾಗಿದೆ. ಲೇಖನವು ಕಠಿಣ ಮತ್ತು ಆಸಕ್ತಿದಾಯಕವಾಗಿದೆ. ಆದರೆ ಸೋಷಿಯಲ್  ಮೀಡಿಯಾದಲ್ಲಿ ತಡೆಯಾಗಲಷ್ಟು ತಪ್ಪು ಮಾಹಿತಿ ಹರಡಿದೆ. ’’ಸಂಸ್ಕೃತವು ಕಂಪ್ಯೂಟರ್ ಪ್ರೋಗ್ರಾಮಿಂಗ್‌ಗೆ ಅಂತಿಮ ಭಾಷೆಯಾಗಿದೆ, ಇದನ್ನು  NASA ಪ್ರಯೋಗಾಲಯಗಳಲ್ಲಿ ಅಧ್ಯಯನ ಮಾಡಲಾಗಿದೆ ಎಂದು ಹೇಳುವಷ್ಟರ ಮಟ್ಟಿಗೆ ಸುಳ್ಳು ಹರಡಿದೆ.  ಇಂಗ್ಲಿಷ್ ಅಥವಾ ಹಿಂದಿಯಂತಹ ಯಾವುದೇ ನೈಸರ್ಗಿಕ ಭಾಷೆಯಂತೆ ಸಂಸ್ಕೃತವನ್ನು ಪ್ರೋಗ್ರಾಮಿಂಗ್ ಭಾಷೆಯಾಗಿ ನೇರವಾಗಿ ಬಳಸಲಾಗುವುದಿಲ್ಲ. ಈ ವದಂತಿಗಳು ಪ್ರಾಚೀನ ವಿಜ್ಞಾನ ವ್ಯಾಕರಣಕ್ಕೆ  ಹಾನಿಕಾರಕವಾಗಿದೆ” ಎಂದಿದ್ದಾರೆ.  ಡಾ ಪವನ್ ಗೋಯಲ್ ಅವರು ಕಂಪ್ಯೂಟರ್ ವಿಜ್ಞಾನಿಯಾಗಿದ್ದು, ಅವರು ಸ್ವಯಂಚಾಲಿತ ಕಂಪ್ಯೂಟೇಶನಲ್ ಪ್ರೊಸೆಸಿಂಗ್ ತಂತ್ರಗಳ ಸಹಾಯದಿಂದ ಸಂಸ್ಕೃತ ಪಠ್ಯಗಳನ್ನು ಹೆಚ್ಚು ಪ್ರವೇಶಿಸುವಂತೆ ಮಾಡಲು ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 2025 ಮತ್ತು 2034 ರ ವೇಳೆಗೆ ಸಂಸ್ಕೃತ ಭಾಷೆಯನ್ನು ಆಧರಿಸಿ 6ನೇ ಮತ್ತು 7ನೇ ತಲೆಮಾರಿನ ಸೂಪರ್‌ ಕಂಪ್ಯೂಟರ್‌ಗಳನ್ನು ರಚಿಸುವ ಅಮೇರಿಕದ ಯೋಜನೆಯು NASA ವಿಜ್ಞಾನಿಗಳ ವರದಿ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...