Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

2020ರ ಬಿಹಾರ ವಿಧಾನ ಸಭೆ ಚುನಾವಣೆಯ ಪ್ರಯುಕ್ತ ಪ್ರಿಯಾಂಕಾ ಗಾಂಧಿ ತನ್ನ ಅಜ್ಜಿಯ ಸೀರೆಯನ್ನು ಧರಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಪ್ರಿಯಾಂಕಾ ಗಾಂಧಿ ವಾದ್ರಾ ಕೆಂಪು ಸೀರೆಯುಟ್ಟು, ದೇವಾಲಯದ ಗಂಟೆ ಬಾರಿಸುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಪ್ರಿಯಾಂಕಾ ಅವರು ಬಿಹಾರ ವಿಧಾನಸಭಾ ಚುನಾವಣೆಯ ಕಾರಣಕ್ಕೆ ಇಂದಿರಾಗಾಂಧಿಯವರ ಸೀರೆ ಧರಿಸಿದ್ದಾರೆ ಎಂದು ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

“ಬಿಹಾರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಕಪಾಟಿನಲ್ಲಿದ್ದ ಸೀರೆ ಹೊರಗೆ ಬಂದಿದೆ” ಎಂದು ಈ ಚಿತ್ರವನ್ನು ದೇಶದಾದ್ಯಂತ ಸಾಮಾಜಿಕ ಮಾಧ್ಯಮಗಳಲ್ಲಿ ಇದೇ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ.

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ಇದೇ ಪ್ರತಿಪಾದನೆ ಹೊಂದಿರುವ ಇತ್ತೀಚಿನ ಪೋಸ್ಟ್‌ಗಳು ಮಾತ್ರ ಕಂಡುಬರುತ್ತವೆ. ಆದರೆ, ಪ್ರತಿಪಾದನೆಯಲ್ಲಿ ಬಳಸಲಾದ ಕೆಲವು ಕೀವರ್ಡ್‌ಗಳ ಮೂಲಕ ನಾವು ಹುಡುಕಿದಾಗ, ಇದೇ ಫೋಟೋವನ್ನು ಹಲವು ಪೋಸ್ಟ್‌ಗಳಲ್ಲಿ ಅಕ್ಟೋಬರ್ 2018 ರಲ್ಲಿ ಹಂಚಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ನಾವು ಇತರ ಕೀವರ್ಡ್‌ಗಳನ್ನು ಬಳಸಿ ಹುಡುಕಿದಾಗ ಮತ್ತು ಟೈಮ್ ಫಿಲ್ಟರ್ ಬಳಸಿದಾಗ, ಇದೇ ಫೋಟೋವನ್ನು ಫ್ಲಿಕರ್ ವೆಬ್‌ಸೈಟ್‌ನಲ್ಲಿ ‘ಪ್ರೆಸ್‌ಬ್ರೀಫ್.ಇನ್’ ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ಅಲ್ಲಿ ನೀಡಿರುವ ವಿವರಣೆಯಲ್ಲಿ, 2009 ರ ಏಪ್ರಿಲ್ 12 ರಂದು ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿಯವರ ಚುನಾವಣಾ ಕ್ಷೇತ್ರವಾದ ಅಮೇಥಿಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಈ ಫೋಟೋ ತೆಗೆಯಲಾಗಿದೆ. ಇದೇ ರೀತಿಯ ಇತರ ಫೋಟೋಗಳನ್ನು ಇಲ್ಲಿ ಕಾಣಬಹುದು.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಅಲ್ಲದೆ, 2009 ರಲ್ಲಿ ಅವರು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದ ಫೋಟೋಗಳನ್ನು ‘ಗೆಟ್ಟಿ ಇಮೇಜಸ್’ ಮತ್ತು ‘ಔಟ್‌ಲುಕ್’ ವೆಬ್‌ಸೈಟ್‌ಗಳಲ್ಲಿ ಸಹ ಕಾಣಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

ಪೋಸ್ಟ್ ಮಾಡಿದ ಈ ಫೋಟೋ ಹಳೆಯದಾಗಿದ್ದರೂ, ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ದೆಹಲಿಯ ವಾಲ್ಮೀಕಿ ದೇವಸ್ಥಾನಕ್ಕೆ ಭೇಟಿ ನೀಡಿ, ಹತ್ರಾಸ್ ಸಂತ್ರಸ್ತರಿಗಾಗಿನ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಅವರ ದೇವಾಲಯದ ಭೇಟಿಗೆ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಹಾಗಾಗಿ, ಈ ಫೋಟೊ 2019ರಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ತೆಗೆದಿದ್ದು. ಇದಕ್ಕೂ ಮುಂಬರುವ ಬಿಹಾರ ವಿಧಾನ ಸಭಾ ಚುನಾವಣೆಗೂ ಸಂಬಂಧವಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ, 2009 ರ ಫೋಟೋವೊಂದನ್ನು ‘ಬಿಹಾರ ವಿಧಾನಸಭಾ ಚುನಾವಣೆಯ ಕಾರಣಕ್ಕೆ ಇಂದಿರಾ ಗಾಂಧಿಯವರ ಸೀರೆಯನ್ನು ಧರಿಸಿದ ಪ್ರಿಯಾಂಕಾ” ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...