Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

2020ರ ಬಿಹಾರ ವಿಧಾನ ಸಭೆ ಚುನಾವಣೆಯ ಪ್ರಯುಕ್ತ ಪ್ರಿಯಾಂಕಾ ಗಾಂಧಿ ತನ್ನ ಅಜ್ಜಿಯ ಸೀರೆಯನ್ನು ಧರಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಪ್ರಿಯಾಂಕಾ ಗಾಂಧಿ ವಾದ್ರಾ ಕೆಂಪು ಸೀರೆಯುಟ್ಟು, ದೇವಾಲಯದ ಗಂಟೆ ಬಾರಿಸುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಪ್ರಿಯಾಂಕಾ ಅವರು ಬಿಹಾರ ವಿಧಾನಸಭಾ ಚುನಾವಣೆಯ ಕಾರಣಕ್ಕೆ ಇಂದಿರಾಗಾಂಧಿಯವರ ಸೀರೆ ಧರಿಸಿದ್ದಾರೆ ಎಂದು ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

“ಬಿಹಾರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಕಪಾಟಿನಲ್ಲಿದ್ದ ಸೀರೆ ಹೊರಗೆ ಬಂದಿದೆ” ಎಂದು ಈ ಚಿತ್ರವನ್ನು ದೇಶದಾದ್ಯಂತ ಸಾಮಾಜಿಕ ಮಾಧ್ಯಮಗಳಲ್ಲಿ ಇದೇ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತದೆ.

ಫ್ಯಾಕ್ಟ್‌ಚೆಕ್:

ಈ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ಇದೇ ಪ್ರತಿಪಾದನೆ ಹೊಂದಿರುವ ಇತ್ತೀಚಿನ ಪೋಸ್ಟ್‌ಗಳು ಮಾತ್ರ ಕಂಡುಬರುತ್ತವೆ. ಆದರೆ, ಪ್ರತಿಪಾದನೆಯಲ್ಲಿ ಬಳಸಲಾದ ಕೆಲವು ಕೀವರ್ಡ್‌ಗಳ ಮೂಲಕ ನಾವು ಹುಡುಕಿದಾಗ, ಇದೇ ಫೋಟೋವನ್ನು ಹಲವು ಪೋಸ್ಟ್‌ಗಳಲ್ಲಿ ಅಕ್ಟೋಬರ್ 2018 ರಲ್ಲಿ ಹಂಚಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ನಾವು ಇತರ ಕೀವರ್ಡ್‌ಗಳನ್ನು ಬಳಸಿ ಹುಡುಕಿದಾಗ ಮತ್ತು ಟೈಮ್ ಫಿಲ್ಟರ್ ಬಳಸಿದಾಗ, ಇದೇ ಫೋಟೋವನ್ನು ಫ್ಲಿಕರ್ ವೆಬ್‌ಸೈಟ್‌ನಲ್ಲಿ ‘ಪ್ರೆಸ್‌ಬ್ರೀಫ್.ಇನ್’ ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ಅಲ್ಲಿ ನೀಡಿರುವ ವಿವರಣೆಯಲ್ಲಿ, 2009 ರ ಏಪ್ರಿಲ್ 12 ರಂದು ಪ್ರಿಯಾಂಕಾ ಗಾಂಧಿ ಅವರು ತಮ್ಮ ಸಹೋದರ ರಾಹುಲ್ ಗಾಂಧಿಯವರ ಚುನಾವಣಾ ಕ್ಷೇತ್ರವಾದ ಅಮೇಥಿಯಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಈ ಫೋಟೋ ತೆಗೆಯಲಾಗಿದೆ. ಇದೇ ರೀತಿಯ ಇತರ ಫೋಟೋಗಳನ್ನು ಇಲ್ಲಿ ಕಾಣಬಹುದು.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಅಲ್ಲದೆ, 2009 ರಲ್ಲಿ ಅವರು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದ ಫೋಟೋಗಳನ್ನು ‘ಗೆಟ್ಟಿ ಇಮೇಜಸ್’ ಮತ್ತು ‘ಔಟ್‌ಲುಕ್’ ವೆಬ್‌ಸೈಟ್‌ಗಳಲ್ಲಿ ಸಹ ಕಾಣಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು…

ಪೋಸ್ಟ್ ಮಾಡಿದ ಈ ಫೋಟೋ ಹಳೆಯದಾಗಿದ್ದರೂ, ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ದೆಹಲಿಯ ವಾಲ್ಮೀಕಿ ದೇವಸ್ಥಾನಕ್ಕೆ ಭೇಟಿ ನೀಡಿ, ಹತ್ರಾಸ್ ಸಂತ್ರಸ್ತರಿಗಾಗಿನ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಅವರ ದೇವಾಲಯದ ಭೇಟಿಗೆ ಸಂಬಂಧಿಸಿದ ಸುದ್ದಿ ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಹಾಗಾಗಿ, ಈ ಫೋಟೊ 2019ರಲ್ಲಿ ಉತ್ತರಪ್ರದೇಶದ ಅಮೇಥಿಯಲ್ಲಿ ತೆಗೆದಿದ್ದು. ಇದಕ್ಕೂ ಮುಂಬರುವ ಬಿಹಾರ ವಿಧಾನ ಸಭಾ ಚುನಾವಣೆಗೂ ಸಂಬಂಧವಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ, 2009 ರ ಫೋಟೋವೊಂದನ್ನು ‘ಬಿಹಾರ ವಿಧಾನಸಭಾ ಚುನಾವಣೆಯ ಕಾರಣಕ್ಕೆ ಇಂದಿರಾ ಗಾಂಧಿಯವರ ಸೀರೆಯನ್ನು ಧರಿಸಿದ ಪ್ರಿಯಾಂಕಾ” ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...