Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ರದಲ್ಲಿ ರಾಮನ ಚಿತ್ರಗಳನ್ನು ಹೊತ್ತ ಜಾಹಿರಾತು ಫಲಕವನ್ನು ತೋರಿಸಲಾಗುತ್ತಿದೆ.

ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್ ಅಯೋಧ್ಯೆಯಲ್ಲಿರುವ ರಾಮ ಮತ್ತು ರಾಮ ಮಂದಿರದ 3 ಡಿ ಚಿತ್ರಗಳನ್ನು ಪ್ರದರ್ಶಿಸುತ್ತದೆ ಎಂಬುದು ನಿಜವಾದರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಫೋಟೋಶಾಪ್ ಮಾಡಿ ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾಗಿದೆ.

ಹಲವಾರು ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್‌‌:

ಮಂದಿರದ ಶಂಕು ಸ್ಥಾಪನೆ ಸಮಾರಂಭದ ಜಾಹೀರಾತುಗಳನ್ನು ಅಮೆರಿಕದಲ್ಲಿ ಬಿತ್ತರಿಸಲಾಗಿಲ್ಲ. ಆಗಸ್ಟ್‌ 5 ರಂದು ಕಾರ್ಯಕ್ರಮ ನಡೆಯುವಾಗ ಅದರ ಪ್ರಸಾರವನ್ನು ಅಲ್ಲಿ ಬಿತ್ತರಿಸಲಾಗುತ್ತದೆ.

“ಟೈಮ್ಸ್ ಸ್ಕ್ವೇರ್ ಜನರೇಟರ್” ಎಂಬ ಕೀವರ್ಡ್‌‌ಗಳೊಂದಿಗೆ ಗೂಗಲ್‌ನಲ್ಲಿ ಚಿತ್ರವನ್ನು ರಿವರ್ಸ್ ಮಾಡಿ ಹುಡುಕಿದರೆ, “Makeweet.com” ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ಚಿತ್ರದಲ್ಲಿ ಬಳಸಲಾದ ನಿಖರವಾದ ಟೆಂಪ್ಲೇಟ್ ಅನ್ನು ಕಾಣಬಹುದಾಗಿದೆ.

ಈ ವೆಬ್‌ಸೈಟ್‌ನಲ್ಲಿ ಇರುವುದು ಫೋಟೋಶಾಪ್‌ಗೆ ಒಳಗಾಗಿರುವ ವೈರಲ್ ಚಿತ್ರವೆ ಎಂದು ಮತ್ತಷ್ಟು ಗಮನಿಸಿದರೆ ಅದರ ಸತ್ಯಾಸತ್ಯತೆಯನ್ನು ನೋಡಬಹುದಾಗಿದೆ. ಉದಾಹರಣೆಗೆ ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಹಸಿರು ಬಣ್ಣದ ಜಾಹೀರಾತು ಫಲಕ ಎಡಭಾಗದಲ್ಲಿದೆ, ಆದರೆ ಇದು ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ.

ಇದಲ್ಲದೆ, ಹಳದಿ ಬಾಟಲಿಯ ಜಾಹೀರಾತು ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಎಡಭಾಗದಲ್ಲಿದೆ, ಆದರೆ ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ. ಎರಡೂ ಚಿತ್ರಗಳಲ್ಲಿ ರಸ್ತೆಯಲ್ಲಿ ಕಂಡುಬರುವ ಕಾರುಗಳು ಕೂಡಾ ಬಲಭಾಗದಲ್ಲಿರವುದು ಎಡಭಾಗದಲ್ಲಿದೆ.

ಇದೇ ಟೆಂಪ್ಲೇಟ್ ಬಳಸಿ ನಮ್ಮದೇ ಆದ ಚಿತ್ರವನ್ನು ರಚಿಸಬಹುದಾಗಿದೆ. ವೈರಲ್ ಆಗಿರುವ ಚಿತ್ರದಂತೆ ನಮ್ಮ ಚಿತ್ರವನ್ನು ಕೂಡಾ ಸ್ಕ್ರೀನ್‌ನಲ್ಲಿ ತೋರುವ ಹಾಗೆ ನಾವೆ ರಚಿಸಿದ್ದೇವೆ ನೋಡಿ.

ಇಷ್ಟೇ ಅಲ್ಲದೆ ವೈರಲ್‌ ಚಿತ್ರದಲ್ಲಿ ಬಳಸಲಾದ ಚಿತ್ರಗಳಲ್ಲಿ ಒಂದನ್ನು ಅಲಾಮಿಯ ಸ್ಟಾಕ್‌ ಚಿತ್ರಗಳ ಸಂಗ್ರಹದಿಂದ ಪಡೆಯಲಾದ ಚಿತ್ರವಾಗಿದೆ. ಹಳದಿ ಬಣ್ಣದಲ್ಲಿ ಹೈಲೈಟ್ ಮಾಡಿದ ಬರಹ “ಅಲಾಮಿ ಸ್ಟಾಕ್ ಫೋಟೋ” ಎಂದು ಬರೆದಿದ್ದನ್ನು ಗಮನಸಬಹುದಾಗಿದೆ.

ಅಲಾಮಿ ಈ ಚಿತ್ರವನ್ನು “ಶ್ರೀ ವಡಪತಿರಾ ಕಲಿಯಮ್ಮನ್ ಹಿಂದೂ ದೇವಾಲಯ. ವಿಷ್ಣುವಿನ ಅವತಾರ. ಭಗವಾನ್ ರಾಮ 7 ನೇ ಅವತಾರ, ಸಿಂಗಾಪುರ” ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಿತ್ತು.

ಇವುಗಳಿಂದ ಸ್ಪಷ್ಟವಾಗುವುದೇನೆಂದರೆ, ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾದ ಚಿತ್ರವು ಅಮೆರಿಕಾದ ಟೈಮ್ಸ್ ಸ್ಕ್ವೇರ್ನಲ್ಲಿ ರಾಮನ ಚಿತ್ರವನ್ನು ಬಿತ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ವೈರಲ್ ಮಾಡಲಾಗುತ್ತಿದೆ.

ಕೃಪೆ: ದಿಕ್ವಿಂಟ್


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ? ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...