Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ರದಲ್ಲಿ ರಾಮನ ಚಿತ್ರಗಳನ್ನು ಹೊತ್ತ ಜಾಹಿರಾತು ಫಲಕವನ್ನು ತೋರಿಸಲಾಗುತ್ತಿದೆ.

ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್ ಅಯೋಧ್ಯೆಯಲ್ಲಿರುವ ರಾಮ ಮತ್ತು ರಾಮ ಮಂದಿರದ 3 ಡಿ ಚಿತ್ರಗಳನ್ನು ಪ್ರದರ್ಶಿಸುತ್ತದೆ ಎಂಬುದು ನಿಜವಾದರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಫೋಟೋಶಾಪ್ ಮಾಡಿ ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾಗಿದೆ.

ಹಲವಾರು ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್‌‌:

ಮಂದಿರದ ಶಂಕು ಸ್ಥಾಪನೆ ಸಮಾರಂಭದ ಜಾಹೀರಾತುಗಳನ್ನು ಅಮೆರಿಕದಲ್ಲಿ ಬಿತ್ತರಿಸಲಾಗಿಲ್ಲ. ಆಗಸ್ಟ್‌ 5 ರಂದು ಕಾರ್ಯಕ್ರಮ ನಡೆಯುವಾಗ ಅದರ ಪ್ರಸಾರವನ್ನು ಅಲ್ಲಿ ಬಿತ್ತರಿಸಲಾಗುತ್ತದೆ.

“ಟೈಮ್ಸ್ ಸ್ಕ್ವೇರ್ ಜನರೇಟರ್” ಎಂಬ ಕೀವರ್ಡ್‌‌ಗಳೊಂದಿಗೆ ಗೂಗಲ್‌ನಲ್ಲಿ ಚಿತ್ರವನ್ನು ರಿವರ್ಸ್ ಮಾಡಿ ಹುಡುಕಿದರೆ, “Makeweet.com” ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ಚಿತ್ರದಲ್ಲಿ ಬಳಸಲಾದ ನಿಖರವಾದ ಟೆಂಪ್ಲೇಟ್ ಅನ್ನು ಕಾಣಬಹುದಾಗಿದೆ.

ಈ ವೆಬ್‌ಸೈಟ್‌ನಲ್ಲಿ ಇರುವುದು ಫೋಟೋಶಾಪ್‌ಗೆ ಒಳಗಾಗಿರುವ ವೈರಲ್ ಚಿತ್ರವೆ ಎಂದು ಮತ್ತಷ್ಟು ಗಮನಿಸಿದರೆ ಅದರ ಸತ್ಯಾಸತ್ಯತೆಯನ್ನು ನೋಡಬಹುದಾಗಿದೆ. ಉದಾಹರಣೆಗೆ ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಹಸಿರು ಬಣ್ಣದ ಜಾಹೀರಾತು ಫಲಕ ಎಡಭಾಗದಲ್ಲಿದೆ, ಆದರೆ ಇದು ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ.

ಇದಲ್ಲದೆ, ಹಳದಿ ಬಾಟಲಿಯ ಜಾಹೀರಾತು ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಎಡಭಾಗದಲ್ಲಿದೆ, ಆದರೆ ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ. ಎರಡೂ ಚಿತ್ರಗಳಲ್ಲಿ ರಸ್ತೆಯಲ್ಲಿ ಕಂಡುಬರುವ ಕಾರುಗಳು ಕೂಡಾ ಬಲಭಾಗದಲ್ಲಿರವುದು ಎಡಭಾಗದಲ್ಲಿದೆ.

ಇದೇ ಟೆಂಪ್ಲೇಟ್ ಬಳಸಿ ನಮ್ಮದೇ ಆದ ಚಿತ್ರವನ್ನು ರಚಿಸಬಹುದಾಗಿದೆ. ವೈರಲ್ ಆಗಿರುವ ಚಿತ್ರದಂತೆ ನಮ್ಮ ಚಿತ್ರವನ್ನು ಕೂಡಾ ಸ್ಕ್ರೀನ್‌ನಲ್ಲಿ ತೋರುವ ಹಾಗೆ ನಾವೆ ರಚಿಸಿದ್ದೇವೆ ನೋಡಿ.

ಇಷ್ಟೇ ಅಲ್ಲದೆ ವೈರಲ್‌ ಚಿತ್ರದಲ್ಲಿ ಬಳಸಲಾದ ಚಿತ್ರಗಳಲ್ಲಿ ಒಂದನ್ನು ಅಲಾಮಿಯ ಸ್ಟಾಕ್‌ ಚಿತ್ರಗಳ ಸಂಗ್ರಹದಿಂದ ಪಡೆಯಲಾದ ಚಿತ್ರವಾಗಿದೆ. ಹಳದಿ ಬಣ್ಣದಲ್ಲಿ ಹೈಲೈಟ್ ಮಾಡಿದ ಬರಹ “ಅಲಾಮಿ ಸ್ಟಾಕ್ ಫೋಟೋ” ಎಂದು ಬರೆದಿದ್ದನ್ನು ಗಮನಸಬಹುದಾಗಿದೆ.

ಅಲಾಮಿ ಈ ಚಿತ್ರವನ್ನು “ಶ್ರೀ ವಡಪತಿರಾ ಕಲಿಯಮ್ಮನ್ ಹಿಂದೂ ದೇವಾಲಯ. ವಿಷ್ಣುವಿನ ಅವತಾರ. ಭಗವಾನ್ ರಾಮ 7 ನೇ ಅವತಾರ, ಸಿಂಗಾಪುರ” ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಿತ್ತು.

ಇವುಗಳಿಂದ ಸ್ಪಷ್ಟವಾಗುವುದೇನೆಂದರೆ, ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾದ ಚಿತ್ರವು ಅಮೆರಿಕಾದ ಟೈಮ್ಸ್ ಸ್ಕ್ವೇರ್ನಲ್ಲಿ ರಾಮನ ಚಿತ್ರವನ್ನು ಬಿತ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ವೈರಲ್ ಮಾಡಲಾಗುತ್ತಿದೆ.

ಕೃಪೆ: ದಿಕ್ವಿಂಟ್


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ? ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...