Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ರದಲ್ಲಿ ರಾಮನ ಚಿತ್ರಗಳನ್ನು ಹೊತ್ತ ಜಾಹಿರಾತು ಫಲಕವನ್ನು ತೋರಿಸಲಾಗುತ್ತಿದೆ.

ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್ ಅಯೋಧ್ಯೆಯಲ್ಲಿರುವ ರಾಮ ಮತ್ತು ರಾಮ ಮಂದಿರದ 3 ಡಿ ಚಿತ್ರಗಳನ್ನು ಪ್ರದರ್ಶಿಸುತ್ತದೆ ಎಂಬುದು ನಿಜವಾದರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಫೋಟೋಶಾಪ್ ಮಾಡಿ ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾಗಿದೆ.

ಹಲವಾರು ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್‌‌:

ಮಂದಿರದ ಶಂಕು ಸ್ಥಾಪನೆ ಸಮಾರಂಭದ ಜಾಹೀರಾತುಗಳನ್ನು ಅಮೆರಿಕದಲ್ಲಿ ಬಿತ್ತರಿಸಲಾಗಿಲ್ಲ. ಆಗಸ್ಟ್‌ 5 ರಂದು ಕಾರ್ಯಕ್ರಮ ನಡೆಯುವಾಗ ಅದರ ಪ್ರಸಾರವನ್ನು ಅಲ್ಲಿ ಬಿತ್ತರಿಸಲಾಗುತ್ತದೆ.

“ಟೈಮ್ಸ್ ಸ್ಕ್ವೇರ್ ಜನರೇಟರ್” ಎಂಬ ಕೀವರ್ಡ್‌‌ಗಳೊಂದಿಗೆ ಗೂಗಲ್‌ನಲ್ಲಿ ಚಿತ್ರವನ್ನು ರಿವರ್ಸ್ ಮಾಡಿ ಹುಡುಕಿದರೆ, “Makeweet.com” ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ಚಿತ್ರದಲ್ಲಿ ಬಳಸಲಾದ ನಿಖರವಾದ ಟೆಂಪ್ಲೇಟ್ ಅನ್ನು ಕಾಣಬಹುದಾಗಿದೆ.

ಈ ವೆಬ್‌ಸೈಟ್‌ನಲ್ಲಿ ಇರುವುದು ಫೋಟೋಶಾಪ್‌ಗೆ ಒಳಗಾಗಿರುವ ವೈರಲ್ ಚಿತ್ರವೆ ಎಂದು ಮತ್ತಷ್ಟು ಗಮನಿಸಿದರೆ ಅದರ ಸತ್ಯಾಸತ್ಯತೆಯನ್ನು ನೋಡಬಹುದಾಗಿದೆ. ಉದಾಹರಣೆಗೆ ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಹಸಿರು ಬಣ್ಣದ ಜಾಹೀರಾತು ಫಲಕ ಎಡಭಾಗದಲ್ಲಿದೆ, ಆದರೆ ಇದು ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ.

ಇದಲ್ಲದೆ, ಹಳದಿ ಬಾಟಲಿಯ ಜಾಹೀರಾತು ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಎಡಭಾಗದಲ್ಲಿದೆ, ಆದರೆ ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ. ಎರಡೂ ಚಿತ್ರಗಳಲ್ಲಿ ರಸ್ತೆಯಲ್ಲಿ ಕಂಡುಬರುವ ಕಾರುಗಳು ಕೂಡಾ ಬಲಭಾಗದಲ್ಲಿರವುದು ಎಡಭಾಗದಲ್ಲಿದೆ.

ಇದೇ ಟೆಂಪ್ಲೇಟ್ ಬಳಸಿ ನಮ್ಮದೇ ಆದ ಚಿತ್ರವನ್ನು ರಚಿಸಬಹುದಾಗಿದೆ. ವೈರಲ್ ಆಗಿರುವ ಚಿತ್ರದಂತೆ ನಮ್ಮ ಚಿತ್ರವನ್ನು ಕೂಡಾ ಸ್ಕ್ರೀನ್‌ನಲ್ಲಿ ತೋರುವ ಹಾಗೆ ನಾವೆ ರಚಿಸಿದ್ದೇವೆ ನೋಡಿ.

ಇಷ್ಟೇ ಅಲ್ಲದೆ ವೈರಲ್‌ ಚಿತ್ರದಲ್ಲಿ ಬಳಸಲಾದ ಚಿತ್ರಗಳಲ್ಲಿ ಒಂದನ್ನು ಅಲಾಮಿಯ ಸ್ಟಾಕ್‌ ಚಿತ್ರಗಳ ಸಂಗ್ರಹದಿಂದ ಪಡೆಯಲಾದ ಚಿತ್ರವಾಗಿದೆ. ಹಳದಿ ಬಣ್ಣದಲ್ಲಿ ಹೈಲೈಟ್ ಮಾಡಿದ ಬರಹ “ಅಲಾಮಿ ಸ್ಟಾಕ್ ಫೋಟೋ” ಎಂದು ಬರೆದಿದ್ದನ್ನು ಗಮನಸಬಹುದಾಗಿದೆ.

ಅಲಾಮಿ ಈ ಚಿತ್ರವನ್ನು “ಶ್ರೀ ವಡಪತಿರಾ ಕಲಿಯಮ್ಮನ್ ಹಿಂದೂ ದೇವಾಲಯ. ವಿಷ್ಣುವಿನ ಅವತಾರ. ಭಗವಾನ್ ರಾಮ 7 ನೇ ಅವತಾರ, ಸಿಂಗಾಪುರ” ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಿತ್ತು.

ಇವುಗಳಿಂದ ಸ್ಪಷ್ಟವಾಗುವುದೇನೆಂದರೆ, ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾದ ಚಿತ್ರವು ಅಮೆರಿಕಾದ ಟೈಮ್ಸ್ ಸ್ಕ್ವೇರ್ನಲ್ಲಿ ರಾಮನ ಚಿತ್ರವನ್ನು ಬಿತ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ವೈರಲ್ ಮಾಡಲಾಗುತ್ತಿದೆ.

ಕೃಪೆ: ದಿಕ್ವಿಂಟ್


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ? ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...