Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ರದಲ್ಲಿ ರಾಮನ ಚಿತ್ರಗಳನ್ನು ಹೊತ್ತ ಜಾಹಿರಾತು ಫಲಕವನ್ನು ತೋರಿಸಲಾಗುತ್ತಿದೆ.

ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್ ಅಯೋಧ್ಯೆಯಲ್ಲಿರುವ ರಾಮ ಮತ್ತು ರಾಮ ಮಂದಿರದ 3 ಡಿ ಚಿತ್ರಗಳನ್ನು ಪ್ರದರ್ಶಿಸುತ್ತದೆ ಎಂಬುದು ನಿಜವಾದರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಫೋಟೋಶಾಪ್ ಮಾಡಿ ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾಗಿದೆ.

ಹಲವಾರು ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್‌‌:

ಮಂದಿರದ ಶಂಕು ಸ್ಥಾಪನೆ ಸಮಾರಂಭದ ಜಾಹೀರಾತುಗಳನ್ನು ಅಮೆರಿಕದಲ್ಲಿ ಬಿತ್ತರಿಸಲಾಗಿಲ್ಲ. ಆಗಸ್ಟ್‌ 5 ರಂದು ಕಾರ್ಯಕ್ರಮ ನಡೆಯುವಾಗ ಅದರ ಪ್ರಸಾರವನ್ನು ಅಲ್ಲಿ ಬಿತ್ತರಿಸಲಾಗುತ್ತದೆ.

“ಟೈಮ್ಸ್ ಸ್ಕ್ವೇರ್ ಜನರೇಟರ್” ಎಂಬ ಕೀವರ್ಡ್‌‌ಗಳೊಂದಿಗೆ ಗೂಗಲ್‌ನಲ್ಲಿ ಚಿತ್ರವನ್ನು ರಿವರ್ಸ್ ಮಾಡಿ ಹುಡುಕಿದರೆ, “Makeweet.com” ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ಚಿತ್ರದಲ್ಲಿ ಬಳಸಲಾದ ನಿಖರವಾದ ಟೆಂಪ್ಲೇಟ್ ಅನ್ನು ಕಾಣಬಹುದಾಗಿದೆ.

ಈ ವೆಬ್‌ಸೈಟ್‌ನಲ್ಲಿ ಇರುವುದು ಫೋಟೋಶಾಪ್‌ಗೆ ಒಳಗಾಗಿರುವ ವೈರಲ್ ಚಿತ್ರವೆ ಎಂದು ಮತ್ತಷ್ಟು ಗಮನಿಸಿದರೆ ಅದರ ಸತ್ಯಾಸತ್ಯತೆಯನ್ನು ನೋಡಬಹುದಾಗಿದೆ. ಉದಾಹರಣೆಗೆ ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಹಸಿರು ಬಣ್ಣದ ಜಾಹೀರಾತು ಫಲಕ ಎಡಭಾಗದಲ್ಲಿದೆ, ಆದರೆ ಇದು ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ.

ಇದಲ್ಲದೆ, ಹಳದಿ ಬಾಟಲಿಯ ಜಾಹೀರಾತು ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಎಡಭಾಗದಲ್ಲಿದೆ, ಆದರೆ ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ. ಎರಡೂ ಚಿತ್ರಗಳಲ್ಲಿ ರಸ್ತೆಯಲ್ಲಿ ಕಂಡುಬರುವ ಕಾರುಗಳು ಕೂಡಾ ಬಲಭಾಗದಲ್ಲಿರವುದು ಎಡಭಾಗದಲ್ಲಿದೆ.

ಇದೇ ಟೆಂಪ್ಲೇಟ್ ಬಳಸಿ ನಮ್ಮದೇ ಆದ ಚಿತ್ರವನ್ನು ರಚಿಸಬಹುದಾಗಿದೆ. ವೈರಲ್ ಆಗಿರುವ ಚಿತ್ರದಂತೆ ನಮ್ಮ ಚಿತ್ರವನ್ನು ಕೂಡಾ ಸ್ಕ್ರೀನ್‌ನಲ್ಲಿ ತೋರುವ ಹಾಗೆ ನಾವೆ ರಚಿಸಿದ್ದೇವೆ ನೋಡಿ.

ಇಷ್ಟೇ ಅಲ್ಲದೆ ವೈರಲ್‌ ಚಿತ್ರದಲ್ಲಿ ಬಳಸಲಾದ ಚಿತ್ರಗಳಲ್ಲಿ ಒಂದನ್ನು ಅಲಾಮಿಯ ಸ್ಟಾಕ್‌ ಚಿತ್ರಗಳ ಸಂಗ್ರಹದಿಂದ ಪಡೆಯಲಾದ ಚಿತ್ರವಾಗಿದೆ. ಹಳದಿ ಬಣ್ಣದಲ್ಲಿ ಹೈಲೈಟ್ ಮಾಡಿದ ಬರಹ “ಅಲಾಮಿ ಸ್ಟಾಕ್ ಫೋಟೋ” ಎಂದು ಬರೆದಿದ್ದನ್ನು ಗಮನಸಬಹುದಾಗಿದೆ.

ಅಲಾಮಿ ಈ ಚಿತ್ರವನ್ನು “ಶ್ರೀ ವಡಪತಿರಾ ಕಲಿಯಮ್ಮನ್ ಹಿಂದೂ ದೇವಾಲಯ. ವಿಷ್ಣುವಿನ ಅವತಾರ. ಭಗವಾನ್ ರಾಮ 7 ನೇ ಅವತಾರ, ಸಿಂಗಾಪುರ” ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಿತ್ತು.

ಇವುಗಳಿಂದ ಸ್ಪಷ್ಟವಾಗುವುದೇನೆಂದರೆ, ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾದ ಚಿತ್ರವು ಅಮೆರಿಕಾದ ಟೈಮ್ಸ್ ಸ್ಕ್ವೇರ್ನಲ್ಲಿ ರಾಮನ ಚಿತ್ರವನ್ನು ಬಿತ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ವೈರಲ್ ಮಾಡಲಾಗುತ್ತಿದೆ.

ಕೃಪೆ: ದಿಕ್ವಿಂಟ್


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ? ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...