Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ರದಲ್ಲಿ ರಾಮನ ಚಿತ್ರಗಳನ್ನು ಹೊತ್ತ ಜಾಹಿರಾತು ಫಲಕವನ್ನು ತೋರಿಸಲಾಗುತ್ತಿದೆ.

ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್ ಅಯೋಧ್ಯೆಯಲ್ಲಿರುವ ರಾಮ ಮತ್ತು ರಾಮ ಮಂದಿರದ 3 ಡಿ ಚಿತ್ರಗಳನ್ನು ಪ್ರದರ್ಶಿಸುತ್ತದೆ ಎಂಬುದು ನಿಜವಾದರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಫೋಟೋಶಾಪ್ ಮಾಡಿ ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾಗಿದೆ.

ಹಲವಾರು ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್‌‌:

ಮಂದಿರದ ಶಂಕು ಸ್ಥಾಪನೆ ಸಮಾರಂಭದ ಜಾಹೀರಾತುಗಳನ್ನು ಅಮೆರಿಕದಲ್ಲಿ ಬಿತ್ತರಿಸಲಾಗಿಲ್ಲ. ಆಗಸ್ಟ್‌ 5 ರಂದು ಕಾರ್ಯಕ್ರಮ ನಡೆಯುವಾಗ ಅದರ ಪ್ರಸಾರವನ್ನು ಅಲ್ಲಿ ಬಿತ್ತರಿಸಲಾಗುತ್ತದೆ.

“ಟೈಮ್ಸ್ ಸ್ಕ್ವೇರ್ ಜನರೇಟರ್” ಎಂಬ ಕೀವರ್ಡ್‌‌ಗಳೊಂದಿಗೆ ಗೂಗಲ್‌ನಲ್ಲಿ ಚಿತ್ರವನ್ನು ರಿವರ್ಸ್ ಮಾಡಿ ಹುಡುಕಿದರೆ, “Makeweet.com” ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ಚಿತ್ರದಲ್ಲಿ ಬಳಸಲಾದ ನಿಖರವಾದ ಟೆಂಪ್ಲೇಟ್ ಅನ್ನು ಕಾಣಬಹುದಾಗಿದೆ.

ಈ ವೆಬ್‌ಸೈಟ್‌ನಲ್ಲಿ ಇರುವುದು ಫೋಟೋಶಾಪ್‌ಗೆ ಒಳಗಾಗಿರುವ ವೈರಲ್ ಚಿತ್ರವೆ ಎಂದು ಮತ್ತಷ್ಟು ಗಮನಿಸಿದರೆ ಅದರ ಸತ್ಯಾಸತ್ಯತೆಯನ್ನು ನೋಡಬಹುದಾಗಿದೆ. ಉದಾಹರಣೆಗೆ ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಹಸಿರು ಬಣ್ಣದ ಜಾಹೀರಾತು ಫಲಕ ಎಡಭಾಗದಲ್ಲಿದೆ, ಆದರೆ ಇದು ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ.

ಇದಲ್ಲದೆ, ಹಳದಿ ಬಾಟಲಿಯ ಜಾಹೀರಾತು ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಎಡಭಾಗದಲ್ಲಿದೆ, ಆದರೆ ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ. ಎರಡೂ ಚಿತ್ರಗಳಲ್ಲಿ ರಸ್ತೆಯಲ್ಲಿ ಕಂಡುಬರುವ ಕಾರುಗಳು ಕೂಡಾ ಬಲಭಾಗದಲ್ಲಿರವುದು ಎಡಭಾಗದಲ್ಲಿದೆ.

ಇದೇ ಟೆಂಪ್ಲೇಟ್ ಬಳಸಿ ನಮ್ಮದೇ ಆದ ಚಿತ್ರವನ್ನು ರಚಿಸಬಹುದಾಗಿದೆ. ವೈರಲ್ ಆಗಿರುವ ಚಿತ್ರದಂತೆ ನಮ್ಮ ಚಿತ್ರವನ್ನು ಕೂಡಾ ಸ್ಕ್ರೀನ್‌ನಲ್ಲಿ ತೋರುವ ಹಾಗೆ ನಾವೆ ರಚಿಸಿದ್ದೇವೆ ನೋಡಿ.

ಇಷ್ಟೇ ಅಲ್ಲದೆ ವೈರಲ್‌ ಚಿತ್ರದಲ್ಲಿ ಬಳಸಲಾದ ಚಿತ್ರಗಳಲ್ಲಿ ಒಂದನ್ನು ಅಲಾಮಿಯ ಸ್ಟಾಕ್‌ ಚಿತ್ರಗಳ ಸಂಗ್ರಹದಿಂದ ಪಡೆಯಲಾದ ಚಿತ್ರವಾಗಿದೆ. ಹಳದಿ ಬಣ್ಣದಲ್ಲಿ ಹೈಲೈಟ್ ಮಾಡಿದ ಬರಹ “ಅಲಾಮಿ ಸ್ಟಾಕ್ ಫೋಟೋ” ಎಂದು ಬರೆದಿದ್ದನ್ನು ಗಮನಸಬಹುದಾಗಿದೆ.

ಅಲಾಮಿ ಈ ಚಿತ್ರವನ್ನು “ಶ್ರೀ ವಡಪತಿರಾ ಕಲಿಯಮ್ಮನ್ ಹಿಂದೂ ದೇವಾಲಯ. ವಿಷ್ಣುವಿನ ಅವತಾರ. ಭಗವಾನ್ ರಾಮ 7 ನೇ ಅವತಾರ, ಸಿಂಗಾಪುರ” ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಿತ್ತು.

ಇವುಗಳಿಂದ ಸ್ಪಷ್ಟವಾಗುವುದೇನೆಂದರೆ, ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾದ ಚಿತ್ರವು ಅಮೆರಿಕಾದ ಟೈಮ್ಸ್ ಸ್ಕ್ವೇರ್ನಲ್ಲಿ ರಾಮನ ಚಿತ್ರವನ್ನು ಬಿತ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ವೈರಲ್ ಮಾಡಲಾಗುತ್ತಿದೆ.

ಕೃಪೆ: ದಿಕ್ವಿಂಟ್


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ? ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...