Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ರದಲ್ಲಿ ರಾಮನ ಚಿತ್ರಗಳನ್ನು ಹೊತ್ತ ಜಾಹಿರಾತು ಫಲಕವನ್ನು ತೋರಿಸಲಾಗುತ್ತಿದೆ.

ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್ ಅಯೋಧ್ಯೆಯಲ್ಲಿರುವ ರಾಮ ಮತ್ತು ರಾಮ ಮಂದಿರದ 3 ಡಿ ಚಿತ್ರಗಳನ್ನು ಪ್ರದರ್ಶಿಸುತ್ತದೆ ಎಂಬುದು ನಿಜವಾದರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಫೋಟೋಶಾಪ್ ಮಾಡಿ ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾಗಿದೆ.

ಹಲವಾರು ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್‌‌:

ಮಂದಿರದ ಶಂಕು ಸ್ಥಾಪನೆ ಸಮಾರಂಭದ ಜಾಹೀರಾತುಗಳನ್ನು ಅಮೆರಿಕದಲ್ಲಿ ಬಿತ್ತರಿಸಲಾಗಿಲ್ಲ. ಆಗಸ್ಟ್‌ 5 ರಂದು ಕಾರ್ಯಕ್ರಮ ನಡೆಯುವಾಗ ಅದರ ಪ್ರಸಾರವನ್ನು ಅಲ್ಲಿ ಬಿತ್ತರಿಸಲಾಗುತ್ತದೆ.

“ಟೈಮ್ಸ್ ಸ್ಕ್ವೇರ್ ಜನರೇಟರ್” ಎಂಬ ಕೀವರ್ಡ್‌‌ಗಳೊಂದಿಗೆ ಗೂಗಲ್‌ನಲ್ಲಿ ಚಿತ್ರವನ್ನು ರಿವರ್ಸ್ ಮಾಡಿ ಹುಡುಕಿದರೆ, “Makeweet.com” ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ಚಿತ್ರದಲ್ಲಿ ಬಳಸಲಾದ ನಿಖರವಾದ ಟೆಂಪ್ಲೇಟ್ ಅನ್ನು ಕಾಣಬಹುದಾಗಿದೆ.

ಈ ವೆಬ್‌ಸೈಟ್‌ನಲ್ಲಿ ಇರುವುದು ಫೋಟೋಶಾಪ್‌ಗೆ ಒಳಗಾಗಿರುವ ವೈರಲ್ ಚಿತ್ರವೆ ಎಂದು ಮತ್ತಷ್ಟು ಗಮನಿಸಿದರೆ ಅದರ ಸತ್ಯಾಸತ್ಯತೆಯನ್ನು ನೋಡಬಹುದಾಗಿದೆ. ಉದಾಹರಣೆಗೆ ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಹಸಿರು ಬಣ್ಣದ ಜಾಹೀರಾತು ಫಲಕ ಎಡಭಾಗದಲ್ಲಿದೆ, ಆದರೆ ಇದು ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ.

ಇದಲ್ಲದೆ, ಹಳದಿ ಬಾಟಲಿಯ ಜಾಹೀರಾತು ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಎಡಭಾಗದಲ್ಲಿದೆ, ಆದರೆ ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ. ಎರಡೂ ಚಿತ್ರಗಳಲ್ಲಿ ರಸ್ತೆಯಲ್ಲಿ ಕಂಡುಬರುವ ಕಾರುಗಳು ಕೂಡಾ ಬಲಭಾಗದಲ್ಲಿರವುದು ಎಡಭಾಗದಲ್ಲಿದೆ.

ಇದೇ ಟೆಂಪ್ಲೇಟ್ ಬಳಸಿ ನಮ್ಮದೇ ಆದ ಚಿತ್ರವನ್ನು ರಚಿಸಬಹುದಾಗಿದೆ. ವೈರಲ್ ಆಗಿರುವ ಚಿತ್ರದಂತೆ ನಮ್ಮ ಚಿತ್ರವನ್ನು ಕೂಡಾ ಸ್ಕ್ರೀನ್‌ನಲ್ಲಿ ತೋರುವ ಹಾಗೆ ನಾವೆ ರಚಿಸಿದ್ದೇವೆ ನೋಡಿ.

ಇಷ್ಟೇ ಅಲ್ಲದೆ ವೈರಲ್‌ ಚಿತ್ರದಲ್ಲಿ ಬಳಸಲಾದ ಚಿತ್ರಗಳಲ್ಲಿ ಒಂದನ್ನು ಅಲಾಮಿಯ ಸ್ಟಾಕ್‌ ಚಿತ್ರಗಳ ಸಂಗ್ರಹದಿಂದ ಪಡೆಯಲಾದ ಚಿತ್ರವಾಗಿದೆ. ಹಳದಿ ಬಣ್ಣದಲ್ಲಿ ಹೈಲೈಟ್ ಮಾಡಿದ ಬರಹ “ಅಲಾಮಿ ಸ್ಟಾಕ್ ಫೋಟೋ” ಎಂದು ಬರೆದಿದ್ದನ್ನು ಗಮನಸಬಹುದಾಗಿದೆ.

ಅಲಾಮಿ ಈ ಚಿತ್ರವನ್ನು “ಶ್ರೀ ವಡಪತಿರಾ ಕಲಿಯಮ್ಮನ್ ಹಿಂದೂ ದೇವಾಲಯ. ವಿಷ್ಣುವಿನ ಅವತಾರ. ಭಗವಾನ್ ರಾಮ 7 ನೇ ಅವತಾರ, ಸಿಂಗಾಪುರ” ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಿತ್ತು.

ಇವುಗಳಿಂದ ಸ್ಪಷ್ಟವಾಗುವುದೇನೆಂದರೆ, ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾದ ಚಿತ್ರವು ಅಮೆರಿಕಾದ ಟೈಮ್ಸ್ ಸ್ಕ್ವೇರ್ನಲ್ಲಿ ರಾಮನ ಚಿತ್ರವನ್ನು ಬಿತ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ವೈರಲ್ ಮಾಡಲಾಗುತ್ತಿದೆ.

ಕೃಪೆ: ದಿಕ್ವಿಂಟ್


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ? ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...