Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ರದಲ್ಲಿ ರಾಮನ ಚಿತ್ರಗಳನ್ನು ಹೊತ್ತ ಜಾಹಿರಾತು ಫಲಕವನ್ನು ತೋರಿಸಲಾಗುತ್ತಿದೆ.

ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್ ಅಯೋಧ್ಯೆಯಲ್ಲಿರುವ ರಾಮ ಮತ್ತು ರಾಮ ಮಂದಿರದ 3 ಡಿ ಚಿತ್ರಗಳನ್ನು ಪ್ರದರ್ಶಿಸುತ್ತದೆ ಎಂಬುದು ನಿಜವಾದರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಫೋಟೋಶಾಪ್ ಮಾಡಿ ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾಗಿದೆ.

ಹಲವಾರು ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್‌‌:

ಮಂದಿರದ ಶಂಕು ಸ್ಥಾಪನೆ ಸಮಾರಂಭದ ಜಾಹೀರಾತುಗಳನ್ನು ಅಮೆರಿಕದಲ್ಲಿ ಬಿತ್ತರಿಸಲಾಗಿಲ್ಲ. ಆಗಸ್ಟ್‌ 5 ರಂದು ಕಾರ್ಯಕ್ರಮ ನಡೆಯುವಾಗ ಅದರ ಪ್ರಸಾರವನ್ನು ಅಲ್ಲಿ ಬಿತ್ತರಿಸಲಾಗುತ್ತದೆ.

“ಟೈಮ್ಸ್ ಸ್ಕ್ವೇರ್ ಜನರೇಟರ್” ಎಂಬ ಕೀವರ್ಡ್‌‌ಗಳೊಂದಿಗೆ ಗೂಗಲ್‌ನಲ್ಲಿ ಚಿತ್ರವನ್ನು ರಿವರ್ಸ್ ಮಾಡಿ ಹುಡುಕಿದರೆ, “Makeweet.com” ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ಚಿತ್ರದಲ್ಲಿ ಬಳಸಲಾದ ನಿಖರವಾದ ಟೆಂಪ್ಲೇಟ್ ಅನ್ನು ಕಾಣಬಹುದಾಗಿದೆ.

ಈ ವೆಬ್‌ಸೈಟ್‌ನಲ್ಲಿ ಇರುವುದು ಫೋಟೋಶಾಪ್‌ಗೆ ಒಳಗಾಗಿರುವ ವೈರಲ್ ಚಿತ್ರವೆ ಎಂದು ಮತ್ತಷ್ಟು ಗಮನಿಸಿದರೆ ಅದರ ಸತ್ಯಾಸತ್ಯತೆಯನ್ನು ನೋಡಬಹುದಾಗಿದೆ. ಉದಾಹರಣೆಗೆ ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಹಸಿರು ಬಣ್ಣದ ಜಾಹೀರಾತು ಫಲಕ ಎಡಭಾಗದಲ್ಲಿದೆ, ಆದರೆ ಇದು ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ.

ಇದಲ್ಲದೆ, ಹಳದಿ ಬಾಟಲಿಯ ಜಾಹೀರಾತು ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಎಡಭಾಗದಲ್ಲಿದೆ, ಆದರೆ ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ. ಎರಡೂ ಚಿತ್ರಗಳಲ್ಲಿ ರಸ್ತೆಯಲ್ಲಿ ಕಂಡುಬರುವ ಕಾರುಗಳು ಕೂಡಾ ಬಲಭಾಗದಲ್ಲಿರವುದು ಎಡಭಾಗದಲ್ಲಿದೆ.

ಇದೇ ಟೆಂಪ್ಲೇಟ್ ಬಳಸಿ ನಮ್ಮದೇ ಆದ ಚಿತ್ರವನ್ನು ರಚಿಸಬಹುದಾಗಿದೆ. ವೈರಲ್ ಆಗಿರುವ ಚಿತ್ರದಂತೆ ನಮ್ಮ ಚಿತ್ರವನ್ನು ಕೂಡಾ ಸ್ಕ್ರೀನ್‌ನಲ್ಲಿ ತೋರುವ ಹಾಗೆ ನಾವೆ ರಚಿಸಿದ್ದೇವೆ ನೋಡಿ.

ಇಷ್ಟೇ ಅಲ್ಲದೆ ವೈರಲ್‌ ಚಿತ್ರದಲ್ಲಿ ಬಳಸಲಾದ ಚಿತ್ರಗಳಲ್ಲಿ ಒಂದನ್ನು ಅಲಾಮಿಯ ಸ್ಟಾಕ್‌ ಚಿತ್ರಗಳ ಸಂಗ್ರಹದಿಂದ ಪಡೆಯಲಾದ ಚಿತ್ರವಾಗಿದೆ. ಹಳದಿ ಬಣ್ಣದಲ್ಲಿ ಹೈಲೈಟ್ ಮಾಡಿದ ಬರಹ “ಅಲಾಮಿ ಸ್ಟಾಕ್ ಫೋಟೋ” ಎಂದು ಬರೆದಿದ್ದನ್ನು ಗಮನಸಬಹುದಾಗಿದೆ.

ಅಲಾಮಿ ಈ ಚಿತ್ರವನ್ನು “ಶ್ರೀ ವಡಪತಿರಾ ಕಲಿಯಮ್ಮನ್ ಹಿಂದೂ ದೇವಾಲಯ. ವಿಷ್ಣುವಿನ ಅವತಾರ. ಭಗವಾನ್ ರಾಮ 7 ನೇ ಅವತಾರ, ಸಿಂಗಾಪುರ” ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಿತ್ತು.

ಇವುಗಳಿಂದ ಸ್ಪಷ್ಟವಾಗುವುದೇನೆಂದರೆ, ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾದ ಚಿತ್ರವು ಅಮೆರಿಕಾದ ಟೈಮ್ಸ್ ಸ್ಕ್ವೇರ್ನಲ್ಲಿ ರಾಮನ ಚಿತ್ರವನ್ನು ಬಿತ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ವೈರಲ್ ಮಾಡಲಾಗುತ್ತಿದೆ.

ಕೃಪೆ: ದಿಕ್ವಿಂಟ್


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ? ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...