Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಭೂಮಿ ಪೂಜಾ ಸಮಾರಂಭಕ್ಕೆ ಮುಂಚಿತವಾಗಿ ಅಮೆರಿಕಾದ ನ್ಯೂಯಾರ್ಕ್ ನಗರದಲ್ಲಿರುವ ಟೈಮ್ಸ್ ಸ್ಕ್ವೇರ್‌ನಲ್ಲಿ ಅವುಗಳ ಜಾಹಿರಾತನ್ನು ಪ್ರದರ್ಶಿಸಲಾಗುತ್ತಿದೆ ಎಂದು ಹೇಳುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚಿತ್ರದಲ್ಲಿ ರಾಮನ ಚಿತ್ರಗಳನ್ನು ಹೊತ್ತ ಜಾಹಿರಾತು ಫಲಕವನ್ನು ತೋರಿಸಲಾಗುತ್ತಿದೆ.

ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್ ಅಯೋಧ್ಯೆಯಲ್ಲಿರುವ ರಾಮ ಮತ್ತು ರಾಮ ಮಂದಿರದ 3 ಡಿ ಚಿತ್ರಗಳನ್ನು ಪ್ರದರ್ಶಿಸುತ್ತದೆ ಎಂಬುದು ನಿಜವಾದರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರವನ್ನು ಫೋಟೋಶಾಪ್ ಮಾಡಿ ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾಗಿದೆ.

ಹಲವಾರು ಫೇಸ್‌ಬುಕ್ ಬಳಕೆದಾರರು ಈ ಚಿತ್ರವನ್ನು ಹಂಚುತ್ತಿದ್ದಾರೆ.

ಫ್ಯಾಕ್ಟ್‌‌ಚೆಕ್‌‌:

ಮಂದಿರದ ಶಂಕು ಸ್ಥಾಪನೆ ಸಮಾರಂಭದ ಜಾಹೀರಾತುಗಳನ್ನು ಅಮೆರಿಕದಲ್ಲಿ ಬಿತ್ತರಿಸಲಾಗಿಲ್ಲ. ಆಗಸ್ಟ್‌ 5 ರಂದು ಕಾರ್ಯಕ್ರಮ ನಡೆಯುವಾಗ ಅದರ ಪ್ರಸಾರವನ್ನು ಅಲ್ಲಿ ಬಿತ್ತರಿಸಲಾಗುತ್ತದೆ.

“ಟೈಮ್ಸ್ ಸ್ಕ್ವೇರ್ ಜನರೇಟರ್” ಎಂಬ ಕೀವರ್ಡ್‌‌ಗಳೊಂದಿಗೆ ಗೂಗಲ್‌ನಲ್ಲಿ ಚಿತ್ರವನ್ನು ರಿವರ್ಸ್ ಮಾಡಿ ಹುಡುಕಿದರೆ, “Makeweet.com” ಎಂಬ ವೆಬ್‌ಸೈಟ್‌ನಲ್ಲಿ ವೈರಲ್ ಚಿತ್ರದಲ್ಲಿ ಬಳಸಲಾದ ನಿಖರವಾದ ಟೆಂಪ್ಲೇಟ್ ಅನ್ನು ಕಾಣಬಹುದಾಗಿದೆ.

ಈ ವೆಬ್‌ಸೈಟ್‌ನಲ್ಲಿ ಇರುವುದು ಫೋಟೋಶಾಪ್‌ಗೆ ಒಳಗಾಗಿರುವ ವೈರಲ್ ಚಿತ್ರವೆ ಎಂದು ಮತ್ತಷ್ಟು ಗಮನಿಸಿದರೆ ಅದರ ಸತ್ಯಾಸತ್ಯತೆಯನ್ನು ನೋಡಬಹುದಾಗಿದೆ. ಉದಾಹರಣೆಗೆ ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಹಸಿರು ಬಣ್ಣದ ಜಾಹೀರಾತು ಫಲಕ ಎಡಭಾಗದಲ್ಲಿದೆ, ಆದರೆ ಇದು ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ.

ಇದಲ್ಲದೆ, ಹಳದಿ ಬಾಟಲಿಯ ಜಾಹೀರಾತು ಆನ್‌ಲೈನ್ ಟೆಂಪ್ಲೇಟ್‌ನಲ್ಲಿ ಎಡಭಾಗದಲ್ಲಿದೆ, ಆದರೆ ವೈರಲ್ ಚಿತ್ರದಲ್ಲಿ ಬಲಭಾಗದಲ್ಲಿದೆ. ಎರಡೂ ಚಿತ್ರಗಳಲ್ಲಿ ರಸ್ತೆಯಲ್ಲಿ ಕಂಡುಬರುವ ಕಾರುಗಳು ಕೂಡಾ ಬಲಭಾಗದಲ್ಲಿರವುದು ಎಡಭಾಗದಲ್ಲಿದೆ.

ಇದೇ ಟೆಂಪ್ಲೇಟ್ ಬಳಸಿ ನಮ್ಮದೇ ಆದ ಚಿತ್ರವನ್ನು ರಚಿಸಬಹುದಾಗಿದೆ. ವೈರಲ್ ಆಗಿರುವ ಚಿತ್ರದಂತೆ ನಮ್ಮ ಚಿತ್ರವನ್ನು ಕೂಡಾ ಸ್ಕ್ರೀನ್‌ನಲ್ಲಿ ತೋರುವ ಹಾಗೆ ನಾವೆ ರಚಿಸಿದ್ದೇವೆ ನೋಡಿ.

ಇಷ್ಟೇ ಅಲ್ಲದೆ ವೈರಲ್‌ ಚಿತ್ರದಲ್ಲಿ ಬಳಸಲಾದ ಚಿತ್ರಗಳಲ್ಲಿ ಒಂದನ್ನು ಅಲಾಮಿಯ ಸ್ಟಾಕ್‌ ಚಿತ್ರಗಳ ಸಂಗ್ರಹದಿಂದ ಪಡೆಯಲಾದ ಚಿತ್ರವಾಗಿದೆ. ಹಳದಿ ಬಣ್ಣದಲ್ಲಿ ಹೈಲೈಟ್ ಮಾಡಿದ ಬರಹ “ಅಲಾಮಿ ಸ್ಟಾಕ್ ಫೋಟೋ” ಎಂದು ಬರೆದಿದ್ದನ್ನು ಗಮನಸಬಹುದಾಗಿದೆ.

ಅಲಾಮಿ ಈ ಚಿತ್ರವನ್ನು “ಶ್ರೀ ವಡಪತಿರಾ ಕಲಿಯಮ್ಮನ್ ಹಿಂದೂ ದೇವಾಲಯ. ವಿಷ್ಣುವಿನ ಅವತಾರ. ಭಗವಾನ್ ರಾಮ 7 ನೇ ಅವತಾರ, ಸಿಂಗಾಪುರ” ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಿತ್ತು.

ಇವುಗಳಿಂದ ಸ್ಪಷ್ಟವಾಗುವುದೇನೆಂದರೆ, ಆನ್‌ಲೈನ್ ಜನರೇಟರ್ ಬಳಸಿ ರಚಿಸಲಾದ ಚಿತ್ರವು ಅಮೆರಿಕಾದ ಟೈಮ್ಸ್ ಸ್ಕ್ವೇರ್ನಲ್ಲಿ ರಾಮನ ಚಿತ್ರವನ್ನು ಬಿತ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ವೈರಲ್ ಮಾಡಲಾಗುತ್ತಿದೆ.

ಕೃಪೆ: ದಿಕ್ವಿಂಟ್


ಓದಿ: ರೇವಾದಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ್ದು ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವೆ? ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...