Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

- Advertisement -
- Advertisement -

ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸಿದ ಬಳಿಕ ಕರ್ನಾಟಕ ಗೊಂದಲದ ಗೂಡಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಸಾಂವಿಧಾನಿಕ ಪ್ರತಿಭಟನೆಯನ್ನು ಹತ್ತಿಕ್ಕಲು ಬಲಪಂಥೀಯ ಸಂಘಟನೆಗಳು ವಿದ್ಯಾರ್ಥಿಗಳನ್ನು ಪ್ರಚೋದಿಸಿದವು. ಉನ್ಮಾದಿತರಾದ ವಿದ್ಯಾರ್ಥಿಗಳು ಹಿಜಾ‌ಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದಿದ್ದು ಪ್ರಕರಣ ತೀವ್ರಗೊಳ್ಳಲು ಕಾರಣವಾಗಿದೆ.

ಈ ಪ್ರತಿಭಟನೆಗಳ ಸಂದರ್ಭದಲ್ಲಿ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ಹಾಕಿದ್ದ ಯುವಕರ ಗುಂಪೊಂದು ಮುಸ್ಲಿಂ ವಿದ್ಯಾರ್ಥಿಯ ಮೇಲೆರಗಲು ಬಂದರು. ಜೈ ಶ್ರೀರಾಮ್ ಎಂದು ಬಂದವರ ಎದುರು ತಿರುಗಿಬಿದ್ದ ಏಕಾಂಗಿ ವಿದ್ಯಾರ್ಥಿನಿಯ ವಿಡಿಯೊ ವೈರಲ್ ಆಗಿದೆ.

ಬಲಪಂಥೀಯರಿಂದ ಪ್ರೇರೇಪಿತರಾದ ಹುಡುಗರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತ ನುಗ್ಗಿದಾಗ ವಿದ್ಯಾರ್ಥಿನಿಯು ‘ಅಲ್ಲಾ-ಹು-ಅಕ್ಬರ್’ ಎಂದು ಕೂಗಿದ ವಿಡಿಯೊ ಭಾರಿ ಸಂಚಲನ ಮೂಡಿಸಿತು. ಈ ವಿದ್ಯಾರ್ಥಿನಿಯನ್ನು ಬೀಬಿ ಮುಸ್ಕಾನ್ ಖಾನ್ ಎಂದು ಗುರುತಿಸಲಾಗಿದೆ. ಮುಸ್ಕಾನ್‌ ಘೋಷಣೆಯ ವಿಡಿಯೊ ಟ್ವಿಟರ್‌ನಲ್ಲಿ #Sherni (ಸಿಂಹಿಣಿ) ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ರೆಂಡ್ ಆಗಿದೆ.

ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಅವರ ಪಕ್ಕದಲ್ಲಿ ನಿಂತಿರುವ ಮಹಿಳೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಈಕೆ “ಹಿಜಾಬ್ ಧರಿಸಿರುವ ಸಿಂಹಿಣಿ” ಎಂದು ಬಿಂಬಿಸಲಾಗಿದೆ. ಕರ್ನಾಟಕದಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳು ಕಾಂಗ್ರೆಸ್ ಪಕ್ಷದ ಯೋಜಿತ ಪಿತೂರಿ ಎಂದು ಪ್ರಕರಣವನ್ನು ತಿರುಚಲಾಗುತ್ತಿದೆ.

ಈ ಫೋಟೋ ಫೇಸ್‌ಬುಕ್‌ನಲ್ಲಿ ಹೆಚ್ಚು ವೈರಲ್ ಆಗಿದೆ. #ToolKitInAction ಎಂಬ ಹ್ಯಾಶ್‌ಟ್ಯಾಗ್‌ ಹಂಚಿಕೊಳ್ಳಲಾಗುತ್ತಿದೆ. ಆದರೆ ಈ ಫೋಟೋದ ಸತ್ಯಾಸತ್ಯತೆಯನ್ನು ಆಲ್ಟ್‌ ನ್ಯೂಸ್‌ ಬಯಲಿಗೆಳೆದಿದೆ.

ಫೋಟೋದಲ್ಲಿ ಇರುವವರು ಯಾರು?

ವೈರಲ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಮಾಡಿದಾಗ ಈ ಫೋಟೋ ಅಂಬಾ ಪ್ರಸಾದ್ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಅಪ್‌ಲೋಡ್ ಆಗಿರುವುದು ಕಂಡುಬಂದಿದೆ. ಅಂಬಾ ಪ್ರಸಾದ್ ಅವರು ಜಾರ್ಖಂಡ್‌ನ ಬರ್ಕಗಾಂವ್‌ನ ಕಾಂಗ್ರೆಸ್ ಶಾಸಕರಾಗಿದ್ದಾರೆ. ಫೆಬ್ರವರಿ 2022ರಲ್ಲಿ ಅಂಬಾ ಪ್ರಸಾದ್ ಅವರು ಜಾರ್ಖಂಡ್‌ನ ಇತರ ಕಾಂಗ್ರೆಸ್ ಶಾಸಕರೊಂದಿಗೆ ರಾಹುಲ್ ಗಾಂಧಿಯನ್ನು ಭೇಟಿಯಾದಾಗ ತೆಗೆಸಿಕೊಂಡಿರುವ ಫೋಟೋವನ್ನು ತಪ್ಪಾಗಿ ಹರಿಬಿಡಲಾಗಿದೆ. ಈ ಭೇಟಿಯ ಫೋಟೋಗಳನ್ನು ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿಯೂ ಕಾಣಬಹುದು.

ನಾವು ಅಂಬಾ ಪ್ರಸಾದ್ ಅವರ ಟ್ವಿಟರ್ ಹ್ಯಾಂಡಲ್ ಅನ್ನು ಸಹ ಪರಿಶೀಲಿಸಿದ್ದೇವೆ. ವೈರಲ್‌ ಫೋಟೋದ ಕುರಿತು ಅವರು ಫೆಬ್ರವರಿ 10ರಂದು ಸ್ಪಷ್ಟನೆಯನ್ನೂ ನೀಡಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಜಾರ್ಖಂಡ್ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಅವರ ಫೋಟೋವನ್ನು ಮುಸ್ಕಾನ್ ಖಾನ್ ಎಂದು ಬಿಂಬಿಸಿ ದಾರಿತಪ್ಪಿಸಲಾಗುತ್ತಿದೆ. ಜನತಾ ದಳ (ಜಾತ್ಯತೀತ) ಸದಸ್ಯೆ ನಜ್ಮಾ ನಜೀರ್ ಅವರ ಫೋಟೋವನ್ನು ಮುಸ್ಕಾನ್‌ ಎಂದು ತಪ್ಪಾಗಿ ಬಿಂಬಿಸಿ ವೈರಲ್ ಮಾಡಲಾಗಿತ್ತು.


ಇದನ್ನೂ ಓದಿರಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...