Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

- Advertisement -
- Advertisement -

ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸಿದ ಬಳಿಕ ಕರ್ನಾಟಕ ಗೊಂದಲದ ಗೂಡಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಸಾಂವಿಧಾನಿಕ ಪ್ರತಿಭಟನೆಯನ್ನು ಹತ್ತಿಕ್ಕಲು ಬಲಪಂಥೀಯ ಸಂಘಟನೆಗಳು ವಿದ್ಯಾರ್ಥಿಗಳನ್ನು ಪ್ರಚೋದಿಸಿದವು. ಉನ್ಮಾದಿತರಾದ ವಿದ್ಯಾರ್ಥಿಗಳು ಹಿಜಾ‌ಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದಿದ್ದು ಪ್ರಕರಣ ತೀವ್ರಗೊಳ್ಳಲು ಕಾರಣವಾಗಿದೆ.

ಈ ಪ್ರತಿಭಟನೆಗಳ ಸಂದರ್ಭದಲ್ಲಿ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ಹಾಕಿದ್ದ ಯುವಕರ ಗುಂಪೊಂದು ಮುಸ್ಲಿಂ ವಿದ್ಯಾರ್ಥಿಯ ಮೇಲೆರಗಲು ಬಂದರು. ಜೈ ಶ್ರೀರಾಮ್ ಎಂದು ಬಂದವರ ಎದುರು ತಿರುಗಿಬಿದ್ದ ಏಕಾಂಗಿ ವಿದ್ಯಾರ್ಥಿನಿಯ ವಿಡಿಯೊ ವೈರಲ್ ಆಗಿದೆ.

ಬಲಪಂಥೀಯರಿಂದ ಪ್ರೇರೇಪಿತರಾದ ಹುಡುಗರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತ ನುಗ್ಗಿದಾಗ ವಿದ್ಯಾರ್ಥಿನಿಯು ‘ಅಲ್ಲಾ-ಹು-ಅಕ್ಬರ್’ ಎಂದು ಕೂಗಿದ ವಿಡಿಯೊ ಭಾರಿ ಸಂಚಲನ ಮೂಡಿಸಿತು. ಈ ವಿದ್ಯಾರ್ಥಿನಿಯನ್ನು ಬೀಬಿ ಮುಸ್ಕಾನ್ ಖಾನ್ ಎಂದು ಗುರುತಿಸಲಾಗಿದೆ. ಮುಸ್ಕಾನ್‌ ಘೋಷಣೆಯ ವಿಡಿಯೊ ಟ್ವಿಟರ್‌ನಲ್ಲಿ #Sherni (ಸಿಂಹಿಣಿ) ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ರೆಂಡ್ ಆಗಿದೆ.

ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಅವರ ಪಕ್ಕದಲ್ಲಿ ನಿಂತಿರುವ ಮಹಿಳೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಈಕೆ “ಹಿಜಾಬ್ ಧರಿಸಿರುವ ಸಿಂಹಿಣಿ” ಎಂದು ಬಿಂಬಿಸಲಾಗಿದೆ. ಕರ್ನಾಟಕದಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳು ಕಾಂಗ್ರೆಸ್ ಪಕ್ಷದ ಯೋಜಿತ ಪಿತೂರಿ ಎಂದು ಪ್ರಕರಣವನ್ನು ತಿರುಚಲಾಗುತ್ತಿದೆ.

ಈ ಫೋಟೋ ಫೇಸ್‌ಬುಕ್‌ನಲ್ಲಿ ಹೆಚ್ಚು ವೈರಲ್ ಆಗಿದೆ. #ToolKitInAction ಎಂಬ ಹ್ಯಾಶ್‌ಟ್ಯಾಗ್‌ ಹಂಚಿಕೊಳ್ಳಲಾಗುತ್ತಿದೆ. ಆದರೆ ಈ ಫೋಟೋದ ಸತ್ಯಾಸತ್ಯತೆಯನ್ನು ಆಲ್ಟ್‌ ನ್ಯೂಸ್‌ ಬಯಲಿಗೆಳೆದಿದೆ.

ಫೋಟೋದಲ್ಲಿ ಇರುವವರು ಯಾರು?

ವೈರಲ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಮಾಡಿದಾಗ ಈ ಫೋಟೋ ಅಂಬಾ ಪ್ರಸಾದ್ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಅಪ್‌ಲೋಡ್ ಆಗಿರುವುದು ಕಂಡುಬಂದಿದೆ. ಅಂಬಾ ಪ್ರಸಾದ್ ಅವರು ಜಾರ್ಖಂಡ್‌ನ ಬರ್ಕಗಾಂವ್‌ನ ಕಾಂಗ್ರೆಸ್ ಶಾಸಕರಾಗಿದ್ದಾರೆ. ಫೆಬ್ರವರಿ 2022ರಲ್ಲಿ ಅಂಬಾ ಪ್ರಸಾದ್ ಅವರು ಜಾರ್ಖಂಡ್‌ನ ಇತರ ಕಾಂಗ್ರೆಸ್ ಶಾಸಕರೊಂದಿಗೆ ರಾಹುಲ್ ಗಾಂಧಿಯನ್ನು ಭೇಟಿಯಾದಾಗ ತೆಗೆಸಿಕೊಂಡಿರುವ ಫೋಟೋವನ್ನು ತಪ್ಪಾಗಿ ಹರಿಬಿಡಲಾಗಿದೆ. ಈ ಭೇಟಿಯ ಫೋಟೋಗಳನ್ನು ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿಯೂ ಕಾಣಬಹುದು.

ನಾವು ಅಂಬಾ ಪ್ರಸಾದ್ ಅವರ ಟ್ವಿಟರ್ ಹ್ಯಾಂಡಲ್ ಅನ್ನು ಸಹ ಪರಿಶೀಲಿಸಿದ್ದೇವೆ. ವೈರಲ್‌ ಫೋಟೋದ ಕುರಿತು ಅವರು ಫೆಬ್ರವರಿ 10ರಂದು ಸ್ಪಷ್ಟನೆಯನ್ನೂ ನೀಡಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಜಾರ್ಖಂಡ್ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಅವರ ಫೋಟೋವನ್ನು ಮುಸ್ಕಾನ್ ಖಾನ್ ಎಂದು ಬಿಂಬಿಸಿ ದಾರಿತಪ್ಪಿಸಲಾಗುತ್ತಿದೆ. ಜನತಾ ದಳ (ಜಾತ್ಯತೀತ) ಸದಸ್ಯೆ ನಜ್ಮಾ ನಜೀರ್ ಅವರ ಫೋಟೋವನ್ನು ಮುಸ್ಕಾನ್‌ ಎಂದು ತಪ್ಪಾಗಿ ಬಿಂಬಿಸಿ ವೈರಲ್ ಮಾಡಲಾಗಿತ್ತು.


ಇದನ್ನೂ ಓದಿರಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...