Homeಮುಖಪುಟಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ...?

ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವಾರು ನಾಯಕರು ಮತ್ತು ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ಹಿಂದಿನ ಪ್ರಧಾನ ಮಂತ್ರಿಗಳಿಗೆ ಹೋಲಿಸಿದರೆ ದೇಶದಲ್ಲಿ ಗರಿಷ್ಠ ಸಂಖ್ಯೆಯ ಏಮ್ಸ್ ಸ್ಥಾಪನೆಯಾಗಿವೆ ಎಂದು ಪೋಸ್ಟ್‌ಗಳನ್ನು ಶೇರ್ ಮಾಡುತ್ತಿದ್ದಾರೆ.

ಈ ವಿಷಯದ ಆಧಾರದಲ್ಲಿ ಪಟ್ಟಿ ರಚನೆ ಮಾಡಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.  ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ ಕೇವಲ ಒಂದು ಏಮ್ಸ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ, ಪ್ರಧಾನಿ ಮೋದಿ ಕಳೆದ ಏಳು ವರ್ಷಗಳಲ್ಲಿ 15 ಏಮ್ಸ್ ಸ್ಥಾಪಿಸಿದ್ದಾರೆ ಎಂದು ಪಟ್ಟಿ ಹೇಳುತ್ತದೆ.

ಬಿಹಾರ ಸರ್ಕಾರದ ಕ್ಯಾಬಿನೆಟ್ ಸಚಿವ ನಂದ್ ಕಿಶೋರ್ ಯಾದವ್ ಕೂಡ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

 

ರಾಜಕೀಯ ವಿಶ್ಲೇಷಕ ಅಭಿನವ್ ಪ್ರಕಾಶ್ ಅವರು 14 ಏಮ್ಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ, ಅದರಲ್ಲಿ 11 ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ. ಅವರ ಪೋ 8,000 ಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ ಮತ್ತು 3,400 ಕ್ಕೂ ಹೆಚ್ಚು ರಿಟ್ವೀಟ್‌ ಆಗಿದೆ.

 

ಬಿಜೆಪಿ ಬೆಂಬಲಿಗರಾದ ಅರುಣ್ ಪುದೂರ್ ಮತ್ತು ಸೂತ್ರಾಧರ್ ಕೂಡ ಈ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. “10 ವರ್ಷಗಳ ಅಧಿಕಾರಾವಧಿಯಲ್ಲಿ ಮನಮೋಹನ್ ಸಿಂಗ್ ಅವರು 1 ಏಮ್ಸ್ ಅನ್ನು ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ ”ಎಂದಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

 

ಫೇಸ್‌ಬುಕ್‌ನಲ್ಲೂ ಹಲವು ಮಂದಿ ಇದನ್ನೂ ಶೇರ್‌ ಮಾಡಿದ್ದಾರೆ. ಆದರೆ ಇದು ಸತ್ಯಕ್ಕೆ ದೂರವಾಗಿದ್ದು, ಜನರನ್ನು ದಾರಿ ತಪ್ಪಿಸುವ ಪಟ್ಟಿಯಾಗಿದೆ.

ದೇಶದ ಮೊದಲ ಆರೋಗ್ಯ ಸಚಿವ ಅಮೃತ್ ಕೌರ್ ಅವರ ನೇತೃತ್ವದಲ್ಲಿ 1956 ರಲ್ಲಿ ದೇಶದಲ್ಲಿ ಮೊದಲ ಏಮ್ಸ್ ಸ್ಥಾಪಿಸಲಾಯಿತು. ಅಂದಿನಿಂದ, ಆರು ಹೊಸ ಏಮ್ಸ್ ಅನ್ನು ಕ್ರಿಯಾತ್ಮಕಗೊಳಿಸಲಾಗಿದೆ.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು 2003 ರಲ್ಲಿ ಪ್ರಧಾನ್ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (PMSSY) ಯನ್ನು ಘೋಷಿಸಿತು, “ದೇಶದಲ್ಲಿ ಕೈಗೆಟುಕುವ / ವಿಶ್ವಾಸಾರ್ಹ ತೃತೀಯ ಆರೋಗ್ಯ ಸೇವೆಗಳ ಲಭ್ಯತೆಯಲ್ಲಿ ಪ್ರಾದೇಶಿಕ ಅಸಮತೋಲನವನ್ನು ಸರಿಪಡಿಸುವುದು ಮತ್ತು ಗುಣಮಟ್ಟದ ವೈದ್ಯಕೀಯ ಶಿಕ್ಷಣಕ್ಕಾಗಿ ಸೌಲಭ್ಯಗಳನ್ನು ಹೆಚ್ಚಿಸುವುದು” ಇದರ ಉದ್ದೇಶವಾಗಿತ್ತು.

2003 ರಲ್ಲಿ ಅವರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಮಾಜಿ ಪ್ರಧಾನಿ PMSSY ಅಡಿಯಲ್ಲಿ “ದೆಹಲಿಯ ಏಮ್ಸ್ನಲ್ಲಿ ಲಭ್ಯವಿರುವಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಆರು ಹೊಸ ಆಸ್ಪತ್ರೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಿಂದುಳಿದ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು” ಎಂದು ಘೋಷಿಸಿದರು. ಆದರೆ ಘೋಷಣೆ ಮಾಡಿದ ಒಂಬತ್ತು ತಿಂಗಳ ನಂತರ ವಾಜಪೇಯಿ ಸರ್ಕಾರ ಅಧಿಕಾರದಿಂದ ಹೊರಬಂದಿತು. ಆರು ಆಸ್ಪತ್ರೆಗಳನ್ನು ಯುಪಿಎ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

PMSSYನ ಮೊದಲ ಹಂತದಲ್ಲಿ ಈ ಆರು ಹೊಸ ಏಮ್ಸ್ ಅನ್ನು ಭೋಪಾಲ್, ಭುವನೇಶ್ವರ, ಜೋಧ್‌ಪುರ, ಪಾಟ್ನಾ, ರಾಯ್‌ಪುರ, ಮತ್ತು ರಿಷಿಕೇಶದಲ್ಲಿ ಸ್ಥಾಪಿಸಲಾಯಿತು. 2012 ರಲ್ಲಿ ಈ ಏಮ್ಸ್‌ನಲ್ಲಿ ನಿಯಮಿತ ಎಂಬಿಬಿಎಸ್ ಬ್ಯಾಚ್‌ಗಳು ಪ್ರಾರಂಭವಾದರೆ, ನಿಯಮಿತ ನರ್ಸಿಂಗ್ ಕೋರ್ಸ್‌ಗಳು 2013 ರಲ್ಲಿ ಪ್ರಾರಂಭವಾದವು ಎಂದು PMSSY ವೆಬ್‌ಸೈಟ್ ಮಾಹಿತಿ ನೀಡುತ್ತದೆ.

ಯುಪಿಎ ಮತ್ತು ಎನ್‌ಡಿಎ ಸರ್ಕಾರಗಳ ಅಡಿಯಲ್ಲಿ ಏಮ್ಸ್ ಕೆಲಸಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗಿದೆ ಎಂಬುದು ಗಮನಾರ್ಹ. ಉದಾಹರಣೆಗೆ, ಏಮ್ಸ್ ಭೋಪಾಲ್‌ನಲ್ಲಿ 2013 ರಲ್ಲಿ ವೈದ್ಯಕೀಯ ಕಾಲೇಜು ಮತ್ತು ಹೊರ ರೋಗಿಗಳ ವಿಭಾಗ (ಒಪಿಡಿ) ಸೇವೆಗಳನ್ನು ಪ್ರಾರಂಭಿಸಲಾಗಿದ್ದರೆ, ಇನ್-ಪೇಷಂಟ್ ಡಿಪಾರ್ಟ್‌ಮೆಂಟ್ (ಐಪಿಡಿ) ಮತ್ತು ಖಾಸಗಿ ವಾರ್ಡ್‌ಗಳನ್ನು ಕ್ರಮವಾಗಿ 2014 ಮತ್ತು 2017 ರಲ್ಲಿ ಉದ್ಘಾಟಿಸಲಾಯಿತು. 2019 ರಲ್ಲಿ ಸಿಎಜಿ ವರದಿಯೊಂದು ಈ ಹೊಸ ಏಮ್ಸ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇನ್ನೂ ಬಾಕಿ ಉಳಿದಿದೆ.

ಹೀಗಾಗಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವು ವೈರಲ್ ಆಗಿರುವ ಪಟ್ಟಿಯಲ್ಲಿ ಮನ್ನಣೆ ಪಡೆಯುತ್ತಿರುವ ಎಲ್ಲಾ ಆರು ಏಮ್ಸ್‌ಗಳನ್ನು ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಗಿದೆ.

ದೇಶದ ಏಮ್ಸ್ ಸಂಸ್ಥೆಗಳ ಸ್ಥಿತಿಗತಿ ಕುರಿತು ಪ್ರಶ್ನೆಗಳಿಗೆ ಉತ್ತರಿಸಿರುವ ಕುಟುಂಬ ಕಲ್ಯಾಣ ಆರೋಗ್ಯ ಸಚಿವಾಲಯದ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕಳೆದ ವರ್ಷ ನೀಡಿರುವ ಮಾಹಿತಿಯಂತೆ, “22 ಏಮ್ಸ್ ಅನ್ನು PMSSY ಅಡಿಯಲ್ಲಿ ಸ್ಥಾಪಿಸಲು ಘೋಷಿಸಲಾಗಿದೆ. ಅದರಲ್ಲಿ, ಭೋಪಾಲ್, ಭುವನೇಶ್ವರ, ಜೋಧ್ಪುರ್, ಪಾಟ್ನಾ, ರಾಯ್‌ಪುರ ಮತ್ತು ರಿಷಿಕೇಶ್‌ನಲ್ಲಿ 06 ಏಮ್ಸ್ ಕಾರ್ಯನಿರ್ವಹಿಸುತ್ತಿವೆ. ಇತರ 16 ಏಮ್ಸ್ ನಿರ್ಮಾಣದ ವಿವಿಧ ಹಂತಗಳಲ್ಲಿವೆ” ಎಂದಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

16 ಏಮ್ಸ್ ಪೈಕಿ, ರೇ ಬರೇಲಿಯಲ್ಲಿ ಒಂದನ್ನು 2009 ರಲ್ಲಿ ಪಿಎಂಎಸ್ಎಸ್‌ವೈಯ ಎರಡನೇ ಹಂತದ ಅಡಿಯಲ್ಲಿ ಮನಮೋಹನ್ ಸಿಂಗ್ ಸರ್ಕಾರವು ಅನುಮೋದಿಸಿತು. “ಕೇಂದ್ರ ಸರ್ಕಾರದಿಂದ ಅನುಮತಿ ಪಡೆದ ಒಂದು ದಶಕದ ನಂತರ, ರೇ ಬರೇಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹೊರ ರೋಗಿಗಳ ವಿಭಾಗ (ಒಪಿಡಿ) 2018 ರ ಆಗಸ್ಟ್‌ನಲ್ಲಿ ಪ್ರಾರಂಭವಾಯಿತು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇತರ 15 ಏಮ್ಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ, ಅವುಗಳಲ್ಲಿ ಕೆಲವು ಭಾಗಶಃ ಹೊರ ರೋಗಿಗಳ ವಿಭಾಗ ಮತ್ತು ವೈದ್ಯಕೀಯ ಕಾಲೇಜುಗಳು ಸೇರಿದಂತೆ ಕೆಲವು ಸೇವೆಗಳನ್ನು ಪ್ರಾರಂಭಿಸಿವೆ.

ಒಟ್ಟಾರೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪಟ್ಟಿ ತಪ್ಪುದಾರಿಗೆಳೆಯುವ ಚಿತ್ರಣವನ್ನು ನೀಡುತ್ತದೆ. ಇಲ್ಲಿಯವರೆಗೆ, ದೆಹಲಿಯ ಏಮ್ಸ್ಅನ್ನು ಒಳಗೊಂಡು, ಏಳು ಏಮ್ಸ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ.

ಆರು ಹೊಸ ಏಮ್ಸ್‌ಗಳನ್ನು ಬಿಜೆಪಿ ಸರ್ಕಾರ ಘೋಷಿಸಿತು ಆದರೆ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಸ್ಥಾಪಿಸಲಾಯಿತು. ಏಮ್ಸ್ ರೇ ಬರೇಲಿಯನ್ನು ಕಾಂಗ್ರೆಸ್ ಆಡಳಿತದಡಿಯಲ್ಲಿ ಸ್ಥಾಪಿಸಲಾಯಿತು, ಆದರೆ, ಅದರ ಒಪಿಡಿ ಸೇವೆಗಳನ್ನು ಬಿಜೆಪಿಯ ಅಧಿಕಾರಾವಧಿಯಲ್ಲಿ ಪ್ರಾರಂಭಿಸಲಾಯಿತು. ಇತರ 15 ಏಮ್ಸ್ ಅನ್ನು ಬಿಜೆಪಿ ಸರ್ಕಾರವು ಘೋಷಿಸಿತು ಆದರೆ ಅವು ಭಾಗಶಃ ಕಾರ್ಯನಿರ್ವಹಿಸುತ್ತಿದ್ದರೇ ಕೆಲವು ನಿರ್ಮಾಣ ಹಂತದಲ್ಲಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ರೈತ ಹೋರಾಟಕ್ಕೆ 150 ದಿನ: ಬಿರು ಬೇಸಿಗೆಯಲ್ಲೂ ಬತ್ತದ ಉತ್ಸಾಹ, ಮೇ 10 ರಿಂದ ಮತ್ತಷ್ಟು ಬಿರುಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...