Homeಮುಖಪುಟಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ...?

ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವಾರು ನಾಯಕರು ಮತ್ತು ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ಹಿಂದಿನ ಪ್ರಧಾನ ಮಂತ್ರಿಗಳಿಗೆ ಹೋಲಿಸಿದರೆ ದೇಶದಲ್ಲಿ ಗರಿಷ್ಠ ಸಂಖ್ಯೆಯ ಏಮ್ಸ್ ಸ್ಥಾಪನೆಯಾಗಿವೆ ಎಂದು ಪೋಸ್ಟ್‌ಗಳನ್ನು ಶೇರ್ ಮಾಡುತ್ತಿದ್ದಾರೆ.

ಈ ವಿಷಯದ ಆಧಾರದಲ್ಲಿ ಪಟ್ಟಿ ರಚನೆ ಮಾಡಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.  ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ ಕೇವಲ ಒಂದು ಏಮ್ಸ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ, ಪ್ರಧಾನಿ ಮೋದಿ ಕಳೆದ ಏಳು ವರ್ಷಗಳಲ್ಲಿ 15 ಏಮ್ಸ್ ಸ್ಥಾಪಿಸಿದ್ದಾರೆ ಎಂದು ಪಟ್ಟಿ ಹೇಳುತ್ತದೆ.

ಬಿಹಾರ ಸರ್ಕಾರದ ಕ್ಯಾಬಿನೆಟ್ ಸಚಿವ ನಂದ್ ಕಿಶೋರ್ ಯಾದವ್ ಕೂಡ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

 

ರಾಜಕೀಯ ವಿಶ್ಲೇಷಕ ಅಭಿನವ್ ಪ್ರಕಾಶ್ ಅವರು 14 ಏಮ್ಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ, ಅದರಲ್ಲಿ 11 ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ. ಅವರ ಪೋ 8,000 ಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ ಮತ್ತು 3,400 ಕ್ಕೂ ಹೆಚ್ಚು ರಿಟ್ವೀಟ್‌ ಆಗಿದೆ.

 

ಬಿಜೆಪಿ ಬೆಂಬಲಿಗರಾದ ಅರುಣ್ ಪುದೂರ್ ಮತ್ತು ಸೂತ್ರಾಧರ್ ಕೂಡ ಈ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. “10 ವರ್ಷಗಳ ಅಧಿಕಾರಾವಧಿಯಲ್ಲಿ ಮನಮೋಹನ್ ಸಿಂಗ್ ಅವರು 1 ಏಮ್ಸ್ ಅನ್ನು ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ ”ಎಂದಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

 

ಫೇಸ್‌ಬುಕ್‌ನಲ್ಲೂ ಹಲವು ಮಂದಿ ಇದನ್ನೂ ಶೇರ್‌ ಮಾಡಿದ್ದಾರೆ. ಆದರೆ ಇದು ಸತ್ಯಕ್ಕೆ ದೂರವಾಗಿದ್ದು, ಜನರನ್ನು ದಾರಿ ತಪ್ಪಿಸುವ ಪಟ್ಟಿಯಾಗಿದೆ.

ದೇಶದ ಮೊದಲ ಆರೋಗ್ಯ ಸಚಿವ ಅಮೃತ್ ಕೌರ್ ಅವರ ನೇತೃತ್ವದಲ್ಲಿ 1956 ರಲ್ಲಿ ದೇಶದಲ್ಲಿ ಮೊದಲ ಏಮ್ಸ್ ಸ್ಥಾಪಿಸಲಾಯಿತು. ಅಂದಿನಿಂದ, ಆರು ಹೊಸ ಏಮ್ಸ್ ಅನ್ನು ಕ್ರಿಯಾತ್ಮಕಗೊಳಿಸಲಾಗಿದೆ.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು 2003 ರಲ್ಲಿ ಪ್ರಧಾನ್ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (PMSSY) ಯನ್ನು ಘೋಷಿಸಿತು, “ದೇಶದಲ್ಲಿ ಕೈಗೆಟುಕುವ / ವಿಶ್ವಾಸಾರ್ಹ ತೃತೀಯ ಆರೋಗ್ಯ ಸೇವೆಗಳ ಲಭ್ಯತೆಯಲ್ಲಿ ಪ್ರಾದೇಶಿಕ ಅಸಮತೋಲನವನ್ನು ಸರಿಪಡಿಸುವುದು ಮತ್ತು ಗುಣಮಟ್ಟದ ವೈದ್ಯಕೀಯ ಶಿಕ್ಷಣಕ್ಕಾಗಿ ಸೌಲಭ್ಯಗಳನ್ನು ಹೆಚ್ಚಿಸುವುದು” ಇದರ ಉದ್ದೇಶವಾಗಿತ್ತು.

2003 ರಲ್ಲಿ ಅವರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಮಾಜಿ ಪ್ರಧಾನಿ PMSSY ಅಡಿಯಲ್ಲಿ “ದೆಹಲಿಯ ಏಮ್ಸ್ನಲ್ಲಿ ಲಭ್ಯವಿರುವಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಆರು ಹೊಸ ಆಸ್ಪತ್ರೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಿಂದುಳಿದ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು” ಎಂದು ಘೋಷಿಸಿದರು. ಆದರೆ ಘೋಷಣೆ ಮಾಡಿದ ಒಂಬತ್ತು ತಿಂಗಳ ನಂತರ ವಾಜಪೇಯಿ ಸರ್ಕಾರ ಅಧಿಕಾರದಿಂದ ಹೊರಬಂದಿತು. ಆರು ಆಸ್ಪತ್ರೆಗಳನ್ನು ಯುಪಿಎ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

PMSSYನ ಮೊದಲ ಹಂತದಲ್ಲಿ ಈ ಆರು ಹೊಸ ಏಮ್ಸ್ ಅನ್ನು ಭೋಪಾಲ್, ಭುವನೇಶ್ವರ, ಜೋಧ್‌ಪುರ, ಪಾಟ್ನಾ, ರಾಯ್‌ಪುರ, ಮತ್ತು ರಿಷಿಕೇಶದಲ್ಲಿ ಸ್ಥಾಪಿಸಲಾಯಿತು. 2012 ರಲ್ಲಿ ಈ ಏಮ್ಸ್‌ನಲ್ಲಿ ನಿಯಮಿತ ಎಂಬಿಬಿಎಸ್ ಬ್ಯಾಚ್‌ಗಳು ಪ್ರಾರಂಭವಾದರೆ, ನಿಯಮಿತ ನರ್ಸಿಂಗ್ ಕೋರ್ಸ್‌ಗಳು 2013 ರಲ್ಲಿ ಪ್ರಾರಂಭವಾದವು ಎಂದು PMSSY ವೆಬ್‌ಸೈಟ್ ಮಾಹಿತಿ ನೀಡುತ್ತದೆ.

ಯುಪಿಎ ಮತ್ತು ಎನ್‌ಡಿಎ ಸರ್ಕಾರಗಳ ಅಡಿಯಲ್ಲಿ ಏಮ್ಸ್ ಕೆಲಸಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗಿದೆ ಎಂಬುದು ಗಮನಾರ್ಹ. ಉದಾಹರಣೆಗೆ, ಏಮ್ಸ್ ಭೋಪಾಲ್‌ನಲ್ಲಿ 2013 ರಲ್ಲಿ ವೈದ್ಯಕೀಯ ಕಾಲೇಜು ಮತ್ತು ಹೊರ ರೋಗಿಗಳ ವಿಭಾಗ (ಒಪಿಡಿ) ಸೇವೆಗಳನ್ನು ಪ್ರಾರಂಭಿಸಲಾಗಿದ್ದರೆ, ಇನ್-ಪೇಷಂಟ್ ಡಿಪಾರ್ಟ್‌ಮೆಂಟ್ (ಐಪಿಡಿ) ಮತ್ತು ಖಾಸಗಿ ವಾರ್ಡ್‌ಗಳನ್ನು ಕ್ರಮವಾಗಿ 2014 ಮತ್ತು 2017 ರಲ್ಲಿ ಉದ್ಘಾಟಿಸಲಾಯಿತು. 2019 ರಲ್ಲಿ ಸಿಎಜಿ ವರದಿಯೊಂದು ಈ ಹೊಸ ಏಮ್ಸ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇನ್ನೂ ಬಾಕಿ ಉಳಿದಿದೆ.

ಹೀಗಾಗಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವು ವೈರಲ್ ಆಗಿರುವ ಪಟ್ಟಿಯಲ್ಲಿ ಮನ್ನಣೆ ಪಡೆಯುತ್ತಿರುವ ಎಲ್ಲಾ ಆರು ಏಮ್ಸ್‌ಗಳನ್ನು ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಗಿದೆ.

ದೇಶದ ಏಮ್ಸ್ ಸಂಸ್ಥೆಗಳ ಸ್ಥಿತಿಗತಿ ಕುರಿತು ಪ್ರಶ್ನೆಗಳಿಗೆ ಉತ್ತರಿಸಿರುವ ಕುಟುಂಬ ಕಲ್ಯಾಣ ಆರೋಗ್ಯ ಸಚಿವಾಲಯದ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕಳೆದ ವರ್ಷ ನೀಡಿರುವ ಮಾಹಿತಿಯಂತೆ, “22 ಏಮ್ಸ್ ಅನ್ನು PMSSY ಅಡಿಯಲ್ಲಿ ಸ್ಥಾಪಿಸಲು ಘೋಷಿಸಲಾಗಿದೆ. ಅದರಲ್ಲಿ, ಭೋಪಾಲ್, ಭುವನೇಶ್ವರ, ಜೋಧ್ಪುರ್, ಪಾಟ್ನಾ, ರಾಯ್‌ಪುರ ಮತ್ತು ರಿಷಿಕೇಶ್‌ನಲ್ಲಿ 06 ಏಮ್ಸ್ ಕಾರ್ಯನಿರ್ವಹಿಸುತ್ತಿವೆ. ಇತರ 16 ಏಮ್ಸ್ ನಿರ್ಮಾಣದ ವಿವಿಧ ಹಂತಗಳಲ್ಲಿವೆ” ಎಂದಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

16 ಏಮ್ಸ್ ಪೈಕಿ, ರೇ ಬರೇಲಿಯಲ್ಲಿ ಒಂದನ್ನು 2009 ರಲ್ಲಿ ಪಿಎಂಎಸ್ಎಸ್‌ವೈಯ ಎರಡನೇ ಹಂತದ ಅಡಿಯಲ್ಲಿ ಮನಮೋಹನ್ ಸಿಂಗ್ ಸರ್ಕಾರವು ಅನುಮೋದಿಸಿತು. “ಕೇಂದ್ರ ಸರ್ಕಾರದಿಂದ ಅನುಮತಿ ಪಡೆದ ಒಂದು ದಶಕದ ನಂತರ, ರೇ ಬರೇಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹೊರ ರೋಗಿಗಳ ವಿಭಾಗ (ಒಪಿಡಿ) 2018 ರ ಆಗಸ್ಟ್‌ನಲ್ಲಿ ಪ್ರಾರಂಭವಾಯಿತು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇತರ 15 ಏಮ್ಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ, ಅವುಗಳಲ್ಲಿ ಕೆಲವು ಭಾಗಶಃ ಹೊರ ರೋಗಿಗಳ ವಿಭಾಗ ಮತ್ತು ವೈದ್ಯಕೀಯ ಕಾಲೇಜುಗಳು ಸೇರಿದಂತೆ ಕೆಲವು ಸೇವೆಗಳನ್ನು ಪ್ರಾರಂಭಿಸಿವೆ.

ಒಟ್ಟಾರೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪಟ್ಟಿ ತಪ್ಪುದಾರಿಗೆಳೆಯುವ ಚಿತ್ರಣವನ್ನು ನೀಡುತ್ತದೆ. ಇಲ್ಲಿಯವರೆಗೆ, ದೆಹಲಿಯ ಏಮ್ಸ್ಅನ್ನು ಒಳಗೊಂಡು, ಏಳು ಏಮ್ಸ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ.

ಆರು ಹೊಸ ಏಮ್ಸ್‌ಗಳನ್ನು ಬಿಜೆಪಿ ಸರ್ಕಾರ ಘೋಷಿಸಿತು ಆದರೆ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಸ್ಥಾಪಿಸಲಾಯಿತು. ಏಮ್ಸ್ ರೇ ಬರೇಲಿಯನ್ನು ಕಾಂಗ್ರೆಸ್ ಆಡಳಿತದಡಿಯಲ್ಲಿ ಸ್ಥಾಪಿಸಲಾಯಿತು, ಆದರೆ, ಅದರ ಒಪಿಡಿ ಸೇವೆಗಳನ್ನು ಬಿಜೆಪಿಯ ಅಧಿಕಾರಾವಧಿಯಲ್ಲಿ ಪ್ರಾರಂಭಿಸಲಾಯಿತು. ಇತರ 15 ಏಮ್ಸ್ ಅನ್ನು ಬಿಜೆಪಿ ಸರ್ಕಾರವು ಘೋಷಿಸಿತು ಆದರೆ ಅವು ಭಾಗಶಃ ಕಾರ್ಯನಿರ್ವಹಿಸುತ್ತಿದ್ದರೇ ಕೆಲವು ನಿರ್ಮಾಣ ಹಂತದಲ್ಲಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ರೈತ ಹೋರಾಟಕ್ಕೆ 150 ದಿನ: ಬಿರು ಬೇಸಿಗೆಯಲ್ಲೂ ಬತ್ತದ ಉತ್ಸಾಹ, ಮೇ 10 ರಿಂದ ಮತ್ತಷ್ಟು ಬಿರುಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...