Homeಮುಖಪುಟಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ...?

ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವಾರು ನಾಯಕರು ಮತ್ತು ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ಹಿಂದಿನ ಪ್ರಧಾನ ಮಂತ್ರಿಗಳಿಗೆ ಹೋಲಿಸಿದರೆ ದೇಶದಲ್ಲಿ ಗರಿಷ್ಠ ಸಂಖ್ಯೆಯ ಏಮ್ಸ್ ಸ್ಥಾಪನೆಯಾಗಿವೆ ಎಂದು ಪೋಸ್ಟ್‌ಗಳನ್ನು ಶೇರ್ ಮಾಡುತ್ತಿದ್ದಾರೆ.

ಈ ವಿಷಯದ ಆಧಾರದಲ್ಲಿ ಪಟ್ಟಿ ರಚನೆ ಮಾಡಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.  ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ ಕೇವಲ ಒಂದು ಏಮ್ಸ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ, ಪ್ರಧಾನಿ ಮೋದಿ ಕಳೆದ ಏಳು ವರ್ಷಗಳಲ್ಲಿ 15 ಏಮ್ಸ್ ಸ್ಥಾಪಿಸಿದ್ದಾರೆ ಎಂದು ಪಟ್ಟಿ ಹೇಳುತ್ತದೆ.

ಬಿಹಾರ ಸರ್ಕಾರದ ಕ್ಯಾಬಿನೆಟ್ ಸಚಿವ ನಂದ್ ಕಿಶೋರ್ ಯಾದವ್ ಕೂಡ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

 

ರಾಜಕೀಯ ವಿಶ್ಲೇಷಕ ಅಭಿನವ್ ಪ್ರಕಾಶ್ ಅವರು 14 ಏಮ್ಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ, ಅದರಲ್ಲಿ 11 ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ. ಅವರ ಪೋ 8,000 ಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ ಮತ್ತು 3,400 ಕ್ಕೂ ಹೆಚ್ಚು ರಿಟ್ವೀಟ್‌ ಆಗಿದೆ.

 

ಬಿಜೆಪಿ ಬೆಂಬಲಿಗರಾದ ಅರುಣ್ ಪುದೂರ್ ಮತ್ತು ಸೂತ್ರಾಧರ್ ಕೂಡ ಈ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. “10 ವರ್ಷಗಳ ಅಧಿಕಾರಾವಧಿಯಲ್ಲಿ ಮನಮೋಹನ್ ಸಿಂಗ್ ಅವರು 1 ಏಮ್ಸ್ ಅನ್ನು ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ ”ಎಂದಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

 

ಫೇಸ್‌ಬುಕ್‌ನಲ್ಲೂ ಹಲವು ಮಂದಿ ಇದನ್ನೂ ಶೇರ್‌ ಮಾಡಿದ್ದಾರೆ. ಆದರೆ ಇದು ಸತ್ಯಕ್ಕೆ ದೂರವಾಗಿದ್ದು, ಜನರನ್ನು ದಾರಿ ತಪ್ಪಿಸುವ ಪಟ್ಟಿಯಾಗಿದೆ.

ದೇಶದ ಮೊದಲ ಆರೋಗ್ಯ ಸಚಿವ ಅಮೃತ್ ಕೌರ್ ಅವರ ನೇತೃತ್ವದಲ್ಲಿ 1956 ರಲ್ಲಿ ದೇಶದಲ್ಲಿ ಮೊದಲ ಏಮ್ಸ್ ಸ್ಥಾಪಿಸಲಾಯಿತು. ಅಂದಿನಿಂದ, ಆರು ಹೊಸ ಏಮ್ಸ್ ಅನ್ನು ಕ್ರಿಯಾತ್ಮಕಗೊಳಿಸಲಾಗಿದೆ.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು 2003 ರಲ್ಲಿ ಪ್ರಧಾನ್ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (PMSSY) ಯನ್ನು ಘೋಷಿಸಿತು, “ದೇಶದಲ್ಲಿ ಕೈಗೆಟುಕುವ / ವಿಶ್ವಾಸಾರ್ಹ ತೃತೀಯ ಆರೋಗ್ಯ ಸೇವೆಗಳ ಲಭ್ಯತೆಯಲ್ಲಿ ಪ್ರಾದೇಶಿಕ ಅಸಮತೋಲನವನ್ನು ಸರಿಪಡಿಸುವುದು ಮತ್ತು ಗುಣಮಟ್ಟದ ವೈದ್ಯಕೀಯ ಶಿಕ್ಷಣಕ್ಕಾಗಿ ಸೌಲಭ್ಯಗಳನ್ನು ಹೆಚ್ಚಿಸುವುದು” ಇದರ ಉದ್ದೇಶವಾಗಿತ್ತು.

2003 ರಲ್ಲಿ ಅವರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಮಾಜಿ ಪ್ರಧಾನಿ PMSSY ಅಡಿಯಲ್ಲಿ “ದೆಹಲಿಯ ಏಮ್ಸ್ನಲ್ಲಿ ಲಭ್ಯವಿರುವಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಆರು ಹೊಸ ಆಸ್ಪತ್ರೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಿಂದುಳಿದ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು” ಎಂದು ಘೋಷಿಸಿದರು. ಆದರೆ ಘೋಷಣೆ ಮಾಡಿದ ಒಂಬತ್ತು ತಿಂಗಳ ನಂತರ ವಾಜಪೇಯಿ ಸರ್ಕಾರ ಅಧಿಕಾರದಿಂದ ಹೊರಬಂದಿತು. ಆರು ಆಸ್ಪತ್ರೆಗಳನ್ನು ಯುಪಿಎ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

PMSSYನ ಮೊದಲ ಹಂತದಲ್ಲಿ ಈ ಆರು ಹೊಸ ಏಮ್ಸ್ ಅನ್ನು ಭೋಪಾಲ್, ಭುವನೇಶ್ವರ, ಜೋಧ್‌ಪುರ, ಪಾಟ್ನಾ, ರಾಯ್‌ಪುರ, ಮತ್ತು ರಿಷಿಕೇಶದಲ್ಲಿ ಸ್ಥಾಪಿಸಲಾಯಿತು. 2012 ರಲ್ಲಿ ಈ ಏಮ್ಸ್‌ನಲ್ಲಿ ನಿಯಮಿತ ಎಂಬಿಬಿಎಸ್ ಬ್ಯಾಚ್‌ಗಳು ಪ್ರಾರಂಭವಾದರೆ, ನಿಯಮಿತ ನರ್ಸಿಂಗ್ ಕೋರ್ಸ್‌ಗಳು 2013 ರಲ್ಲಿ ಪ್ರಾರಂಭವಾದವು ಎಂದು PMSSY ವೆಬ್‌ಸೈಟ್ ಮಾಹಿತಿ ನೀಡುತ್ತದೆ.

ಯುಪಿಎ ಮತ್ತು ಎನ್‌ಡಿಎ ಸರ್ಕಾರಗಳ ಅಡಿಯಲ್ಲಿ ಏಮ್ಸ್ ಕೆಲಸಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗಿದೆ ಎಂಬುದು ಗಮನಾರ್ಹ. ಉದಾಹರಣೆಗೆ, ಏಮ್ಸ್ ಭೋಪಾಲ್‌ನಲ್ಲಿ 2013 ರಲ್ಲಿ ವೈದ್ಯಕೀಯ ಕಾಲೇಜು ಮತ್ತು ಹೊರ ರೋಗಿಗಳ ವಿಭಾಗ (ಒಪಿಡಿ) ಸೇವೆಗಳನ್ನು ಪ್ರಾರಂಭಿಸಲಾಗಿದ್ದರೆ, ಇನ್-ಪೇಷಂಟ್ ಡಿಪಾರ್ಟ್‌ಮೆಂಟ್ (ಐಪಿಡಿ) ಮತ್ತು ಖಾಸಗಿ ವಾರ್ಡ್‌ಗಳನ್ನು ಕ್ರಮವಾಗಿ 2014 ಮತ್ತು 2017 ರಲ್ಲಿ ಉದ್ಘಾಟಿಸಲಾಯಿತು. 2019 ರಲ್ಲಿ ಸಿಎಜಿ ವರದಿಯೊಂದು ಈ ಹೊಸ ಏಮ್ಸ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇನ್ನೂ ಬಾಕಿ ಉಳಿದಿದೆ.

ಹೀಗಾಗಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವು ವೈರಲ್ ಆಗಿರುವ ಪಟ್ಟಿಯಲ್ಲಿ ಮನ್ನಣೆ ಪಡೆಯುತ್ತಿರುವ ಎಲ್ಲಾ ಆರು ಏಮ್ಸ್‌ಗಳನ್ನು ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಗಿದೆ.

ದೇಶದ ಏಮ್ಸ್ ಸಂಸ್ಥೆಗಳ ಸ್ಥಿತಿಗತಿ ಕುರಿತು ಪ್ರಶ್ನೆಗಳಿಗೆ ಉತ್ತರಿಸಿರುವ ಕುಟುಂಬ ಕಲ್ಯಾಣ ಆರೋಗ್ಯ ಸಚಿವಾಲಯದ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕಳೆದ ವರ್ಷ ನೀಡಿರುವ ಮಾಹಿತಿಯಂತೆ, “22 ಏಮ್ಸ್ ಅನ್ನು PMSSY ಅಡಿಯಲ್ಲಿ ಸ್ಥಾಪಿಸಲು ಘೋಷಿಸಲಾಗಿದೆ. ಅದರಲ್ಲಿ, ಭೋಪಾಲ್, ಭುವನೇಶ್ವರ, ಜೋಧ್ಪುರ್, ಪಾಟ್ನಾ, ರಾಯ್‌ಪುರ ಮತ್ತು ರಿಷಿಕೇಶ್‌ನಲ್ಲಿ 06 ಏಮ್ಸ್ ಕಾರ್ಯನಿರ್ವಹಿಸುತ್ತಿವೆ. ಇತರ 16 ಏಮ್ಸ್ ನಿರ್ಮಾಣದ ವಿವಿಧ ಹಂತಗಳಲ್ಲಿವೆ” ಎಂದಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

16 ಏಮ್ಸ್ ಪೈಕಿ, ರೇ ಬರೇಲಿಯಲ್ಲಿ ಒಂದನ್ನು 2009 ರಲ್ಲಿ ಪಿಎಂಎಸ್ಎಸ್‌ವೈಯ ಎರಡನೇ ಹಂತದ ಅಡಿಯಲ್ಲಿ ಮನಮೋಹನ್ ಸಿಂಗ್ ಸರ್ಕಾರವು ಅನುಮೋದಿಸಿತು. “ಕೇಂದ್ರ ಸರ್ಕಾರದಿಂದ ಅನುಮತಿ ಪಡೆದ ಒಂದು ದಶಕದ ನಂತರ, ರೇ ಬರೇಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹೊರ ರೋಗಿಗಳ ವಿಭಾಗ (ಒಪಿಡಿ) 2018 ರ ಆಗಸ್ಟ್‌ನಲ್ಲಿ ಪ್ರಾರಂಭವಾಯಿತು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇತರ 15 ಏಮ್ಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ, ಅವುಗಳಲ್ಲಿ ಕೆಲವು ಭಾಗಶಃ ಹೊರ ರೋಗಿಗಳ ವಿಭಾಗ ಮತ್ತು ವೈದ್ಯಕೀಯ ಕಾಲೇಜುಗಳು ಸೇರಿದಂತೆ ಕೆಲವು ಸೇವೆಗಳನ್ನು ಪ್ರಾರಂಭಿಸಿವೆ.

ಒಟ್ಟಾರೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪಟ್ಟಿ ತಪ್ಪುದಾರಿಗೆಳೆಯುವ ಚಿತ್ರಣವನ್ನು ನೀಡುತ್ತದೆ. ಇಲ್ಲಿಯವರೆಗೆ, ದೆಹಲಿಯ ಏಮ್ಸ್ಅನ್ನು ಒಳಗೊಂಡು, ಏಳು ಏಮ್ಸ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ.

ಆರು ಹೊಸ ಏಮ್ಸ್‌ಗಳನ್ನು ಬಿಜೆಪಿ ಸರ್ಕಾರ ಘೋಷಿಸಿತು ಆದರೆ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಸ್ಥಾಪಿಸಲಾಯಿತು. ಏಮ್ಸ್ ರೇ ಬರೇಲಿಯನ್ನು ಕಾಂಗ್ರೆಸ್ ಆಡಳಿತದಡಿಯಲ್ಲಿ ಸ್ಥಾಪಿಸಲಾಯಿತು, ಆದರೆ, ಅದರ ಒಪಿಡಿ ಸೇವೆಗಳನ್ನು ಬಿಜೆಪಿಯ ಅಧಿಕಾರಾವಧಿಯಲ್ಲಿ ಪ್ರಾರಂಭಿಸಲಾಯಿತು. ಇತರ 15 ಏಮ್ಸ್ ಅನ್ನು ಬಿಜೆಪಿ ಸರ್ಕಾರವು ಘೋಷಿಸಿತು ಆದರೆ ಅವು ಭಾಗಶಃ ಕಾರ್ಯನಿರ್ವಹಿಸುತ್ತಿದ್ದರೇ ಕೆಲವು ನಿರ್ಮಾಣ ಹಂತದಲ್ಲಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ರೈತ ಹೋರಾಟಕ್ಕೆ 150 ದಿನ: ಬಿರು ಬೇಸಿಗೆಯಲ್ಲೂ ಬತ್ತದ ಉತ್ಸಾಹ, ಮೇ 10 ರಿಂದ ಮತ್ತಷ್ಟು ಬಿರುಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...