Homeಮುಖಪುಟಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ...?

ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

- Advertisement -
- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವಾರು ನಾಯಕರು ಮತ್ತು ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ಹಿಂದಿನ ಪ್ರಧಾನ ಮಂತ್ರಿಗಳಿಗೆ ಹೋಲಿಸಿದರೆ ದೇಶದಲ್ಲಿ ಗರಿಷ್ಠ ಸಂಖ್ಯೆಯ ಏಮ್ಸ್ ಸ್ಥಾಪನೆಯಾಗಿವೆ ಎಂದು ಪೋಸ್ಟ್‌ಗಳನ್ನು ಶೇರ್ ಮಾಡುತ್ತಿದ್ದಾರೆ.

ಈ ವಿಷಯದ ಆಧಾರದಲ್ಲಿ ಪಟ್ಟಿ ರಚನೆ ಮಾಡಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.  ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ ಕೇವಲ ಒಂದು ಏಮ್ಸ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ, ಪ್ರಧಾನಿ ಮೋದಿ ಕಳೆದ ಏಳು ವರ್ಷಗಳಲ್ಲಿ 15 ಏಮ್ಸ್ ಸ್ಥಾಪಿಸಿದ್ದಾರೆ ಎಂದು ಪಟ್ಟಿ ಹೇಳುತ್ತದೆ.

ಬಿಹಾರ ಸರ್ಕಾರದ ಕ್ಯಾಬಿನೆಟ್ ಸಚಿವ ನಂದ್ ಕಿಶೋರ್ ಯಾದವ್ ಕೂಡ ತಮ್ಮ ಟ್ವಿಟರ್‌ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

 

ರಾಜಕೀಯ ವಿಶ್ಲೇಷಕ ಅಭಿನವ್ ಪ್ರಕಾಶ್ ಅವರು 14 ಏಮ್ಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ, ಅದರಲ್ಲಿ 11 ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ. ಅವರ ಪೋ 8,000 ಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿದೆ ಮತ್ತು 3,400 ಕ್ಕೂ ಹೆಚ್ಚು ರಿಟ್ವೀಟ್‌ ಆಗಿದೆ.

 

ಬಿಜೆಪಿ ಬೆಂಬಲಿಗರಾದ ಅರುಣ್ ಪುದೂರ್ ಮತ್ತು ಸೂತ್ರಾಧರ್ ಕೂಡ ಈ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. “10 ವರ್ಷಗಳ ಅಧಿಕಾರಾವಧಿಯಲ್ಲಿ ಮನಮೋಹನ್ ಸಿಂಗ್ ಅವರು 1 ಏಮ್ಸ್ ಅನ್ನು ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ ”ಎಂದಿದ್ದಾರೆ.

ಇದನ್ನೂ ಓದಿ: ಕೋವಿಡ್ ಉಲ್ಬಣ: ಖಾಸಗಿ ಜೆಟ್‌ಗಳ ಮೂಲಕ ವಿದೇಶಕ್ಕೆ ಹಾರುತ್ತಿರುವ ಭಾರತದ ಅತಿ ಸಿರಿವಂತರು!

 

ಫೇಸ್‌ಬುಕ್‌ನಲ್ಲೂ ಹಲವು ಮಂದಿ ಇದನ್ನೂ ಶೇರ್‌ ಮಾಡಿದ್ದಾರೆ. ಆದರೆ ಇದು ಸತ್ಯಕ್ಕೆ ದೂರವಾಗಿದ್ದು, ಜನರನ್ನು ದಾರಿ ತಪ್ಪಿಸುವ ಪಟ್ಟಿಯಾಗಿದೆ.

ದೇಶದ ಮೊದಲ ಆರೋಗ್ಯ ಸಚಿವ ಅಮೃತ್ ಕೌರ್ ಅವರ ನೇತೃತ್ವದಲ್ಲಿ 1956 ರಲ್ಲಿ ದೇಶದಲ್ಲಿ ಮೊದಲ ಏಮ್ಸ್ ಸ್ಥಾಪಿಸಲಾಯಿತು. ಅಂದಿನಿಂದ, ಆರು ಹೊಸ ಏಮ್ಸ್ ಅನ್ನು ಕ್ರಿಯಾತ್ಮಕಗೊಳಿಸಲಾಗಿದೆ.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರವು 2003 ರಲ್ಲಿ ಪ್ರಧಾನ್ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (PMSSY) ಯನ್ನು ಘೋಷಿಸಿತು, “ದೇಶದಲ್ಲಿ ಕೈಗೆಟುಕುವ / ವಿಶ್ವಾಸಾರ್ಹ ತೃತೀಯ ಆರೋಗ್ಯ ಸೇವೆಗಳ ಲಭ್ಯತೆಯಲ್ಲಿ ಪ್ರಾದೇಶಿಕ ಅಸಮತೋಲನವನ್ನು ಸರಿಪಡಿಸುವುದು ಮತ್ತು ಗುಣಮಟ್ಟದ ವೈದ್ಯಕೀಯ ಶಿಕ್ಷಣಕ್ಕಾಗಿ ಸೌಲಭ್ಯಗಳನ್ನು ಹೆಚ್ಚಿಸುವುದು” ಇದರ ಉದ್ದೇಶವಾಗಿತ್ತು.

2003 ರಲ್ಲಿ ಅವರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಮಾಜಿ ಪ್ರಧಾನಿ PMSSY ಅಡಿಯಲ್ಲಿ “ದೆಹಲಿಯ ಏಮ್ಸ್ನಲ್ಲಿ ಲಭ್ಯವಿರುವಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಆರು ಹೊಸ ಆಸ್ಪತ್ರೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಿಂದುಳಿದ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು” ಎಂದು ಘೋಷಿಸಿದರು. ಆದರೆ ಘೋಷಣೆ ಮಾಡಿದ ಒಂಬತ್ತು ತಿಂಗಳ ನಂತರ ವಾಜಪೇಯಿ ಸರ್ಕಾರ ಅಧಿಕಾರದಿಂದ ಹೊರಬಂದಿತು. ಆರು ಆಸ್ಪತ್ರೆಗಳನ್ನು ಯುಪಿಎ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೊರೊನಾ ಸಮಯದಲ್ಲಿ ಕುಂಭಮೇಳಕ್ಕೆ ಆಕ್ಷೇಪ; ಪತ್ರಕರ್ತೆಯ ಇರಿದು ಕೊಲೆ ಎಂಬುದು ಸುಳ್ಳು

PMSSYನ ಮೊದಲ ಹಂತದಲ್ಲಿ ಈ ಆರು ಹೊಸ ಏಮ್ಸ್ ಅನ್ನು ಭೋಪಾಲ್, ಭುವನೇಶ್ವರ, ಜೋಧ್‌ಪುರ, ಪಾಟ್ನಾ, ರಾಯ್‌ಪುರ, ಮತ್ತು ರಿಷಿಕೇಶದಲ್ಲಿ ಸ್ಥಾಪಿಸಲಾಯಿತು. 2012 ರಲ್ಲಿ ಈ ಏಮ್ಸ್‌ನಲ್ಲಿ ನಿಯಮಿತ ಎಂಬಿಬಿಎಸ್ ಬ್ಯಾಚ್‌ಗಳು ಪ್ರಾರಂಭವಾದರೆ, ನಿಯಮಿತ ನರ್ಸಿಂಗ್ ಕೋರ್ಸ್‌ಗಳು 2013 ರಲ್ಲಿ ಪ್ರಾರಂಭವಾದವು ಎಂದು PMSSY ವೆಬ್‌ಸೈಟ್ ಮಾಹಿತಿ ನೀಡುತ್ತದೆ.

ಯುಪಿಎ ಮತ್ತು ಎನ್‌ಡಿಎ ಸರ್ಕಾರಗಳ ಅಡಿಯಲ್ಲಿ ಏಮ್ಸ್ ಕೆಲಸಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗಿದೆ ಎಂಬುದು ಗಮನಾರ್ಹ. ಉದಾಹರಣೆಗೆ, ಏಮ್ಸ್ ಭೋಪಾಲ್‌ನಲ್ಲಿ 2013 ರಲ್ಲಿ ವೈದ್ಯಕೀಯ ಕಾಲೇಜು ಮತ್ತು ಹೊರ ರೋಗಿಗಳ ವಿಭಾಗ (ಒಪಿಡಿ) ಸೇವೆಗಳನ್ನು ಪ್ರಾರಂಭಿಸಲಾಗಿದ್ದರೆ, ಇನ್-ಪೇಷಂಟ್ ಡಿಪಾರ್ಟ್‌ಮೆಂಟ್ (ಐಪಿಡಿ) ಮತ್ತು ಖಾಸಗಿ ವಾರ್ಡ್‌ಗಳನ್ನು ಕ್ರಮವಾಗಿ 2014 ಮತ್ತು 2017 ರಲ್ಲಿ ಉದ್ಘಾಟಿಸಲಾಯಿತು. 2019 ರಲ್ಲಿ ಸಿಎಜಿ ವರದಿಯೊಂದು ಈ ಹೊಸ ಏಮ್ಸ್‌ನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇನ್ನೂ ಬಾಕಿ ಉಳಿದಿದೆ.

ಹೀಗಾಗಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವು ವೈರಲ್ ಆಗಿರುವ ಪಟ್ಟಿಯಲ್ಲಿ ಮನ್ನಣೆ ಪಡೆಯುತ್ತಿರುವ ಎಲ್ಲಾ ಆರು ಏಮ್ಸ್‌ಗಳನ್ನು ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ಸ್ಥಾಪಿಸಲಾಗಿದೆ.

ದೇಶದ ಏಮ್ಸ್ ಸಂಸ್ಥೆಗಳ ಸ್ಥಿತಿಗತಿ ಕುರಿತು ಪ್ರಶ್ನೆಗಳಿಗೆ ಉತ್ತರಿಸಿರುವ ಕುಟುಂಬ ಕಲ್ಯಾಣ ಆರೋಗ್ಯ ಸಚಿವಾಲಯದ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕಳೆದ ವರ್ಷ ನೀಡಿರುವ ಮಾಹಿತಿಯಂತೆ, “22 ಏಮ್ಸ್ ಅನ್ನು PMSSY ಅಡಿಯಲ್ಲಿ ಸ್ಥಾಪಿಸಲು ಘೋಷಿಸಲಾಗಿದೆ. ಅದರಲ್ಲಿ, ಭೋಪಾಲ್, ಭುವನೇಶ್ವರ, ಜೋಧ್ಪುರ್, ಪಾಟ್ನಾ, ರಾಯ್‌ಪುರ ಮತ್ತು ರಿಷಿಕೇಶ್‌ನಲ್ಲಿ 06 ಏಮ್ಸ್ ಕಾರ್ಯನಿರ್ವಹಿಸುತ್ತಿವೆ. ಇತರ 16 ಏಮ್ಸ್ ನಿರ್ಮಾಣದ ವಿವಿಧ ಹಂತಗಳಲ್ಲಿವೆ” ಎಂದಿದ್ದಾರೆ.

ಇದನ್ನೂ ಓದಿ: ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

16 ಏಮ್ಸ್ ಪೈಕಿ, ರೇ ಬರೇಲಿಯಲ್ಲಿ ಒಂದನ್ನು 2009 ರಲ್ಲಿ ಪಿಎಂಎಸ್ಎಸ್‌ವೈಯ ಎರಡನೇ ಹಂತದ ಅಡಿಯಲ್ಲಿ ಮನಮೋಹನ್ ಸಿಂಗ್ ಸರ್ಕಾರವು ಅನುಮೋದಿಸಿತು. “ಕೇಂದ್ರ ಸರ್ಕಾರದಿಂದ ಅನುಮತಿ ಪಡೆದ ಒಂದು ದಶಕದ ನಂತರ, ರೇ ಬರೇಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹೊರ ರೋಗಿಗಳ ವಿಭಾಗ (ಒಪಿಡಿ) 2018 ರ ಆಗಸ್ಟ್‌ನಲ್ಲಿ ಪ್ರಾರಂಭವಾಯಿತು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇತರ 15 ಏಮ್ಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ, ಅವುಗಳಲ್ಲಿ ಕೆಲವು ಭಾಗಶಃ ಹೊರ ರೋಗಿಗಳ ವಿಭಾಗ ಮತ್ತು ವೈದ್ಯಕೀಯ ಕಾಲೇಜುಗಳು ಸೇರಿದಂತೆ ಕೆಲವು ಸೇವೆಗಳನ್ನು ಪ್ರಾರಂಭಿಸಿವೆ.

ಒಟ್ಟಾರೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪಟ್ಟಿ ತಪ್ಪುದಾರಿಗೆಳೆಯುವ ಚಿತ್ರಣವನ್ನು ನೀಡುತ್ತದೆ. ಇಲ್ಲಿಯವರೆಗೆ, ದೆಹಲಿಯ ಏಮ್ಸ್ಅನ್ನು ಒಳಗೊಂಡು, ಏಳು ಏಮ್ಸ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ.

ಆರು ಹೊಸ ಏಮ್ಸ್‌ಗಳನ್ನು ಬಿಜೆಪಿ ಸರ್ಕಾರ ಘೋಷಿಸಿತು ಆದರೆ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಸ್ಥಾಪಿಸಲಾಯಿತು. ಏಮ್ಸ್ ರೇ ಬರೇಲಿಯನ್ನು ಕಾಂಗ್ರೆಸ್ ಆಡಳಿತದಡಿಯಲ್ಲಿ ಸ್ಥಾಪಿಸಲಾಯಿತು, ಆದರೆ, ಅದರ ಒಪಿಡಿ ಸೇವೆಗಳನ್ನು ಬಿಜೆಪಿಯ ಅಧಿಕಾರಾವಧಿಯಲ್ಲಿ ಪ್ರಾರಂಭಿಸಲಾಯಿತು. ಇತರ 15 ಏಮ್ಸ್ ಅನ್ನು ಬಿಜೆಪಿ ಸರ್ಕಾರವು ಘೋಷಿಸಿತು ಆದರೆ ಅವು ಭಾಗಶಃ ಕಾರ್ಯನಿರ್ವಹಿಸುತ್ತಿದ್ದರೇ ಕೆಲವು ನಿರ್ಮಾಣ ಹಂತದಲ್ಲಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ರೈತ ಹೋರಾಟಕ್ಕೆ 150 ದಿನ: ಬಿರು ಬೇಸಿಗೆಯಲ್ಲೂ ಬತ್ತದ ಉತ್ಸಾಹ, ಮೇ 10 ರಿಂದ ಮತ್ತಷ್ಟು ಬಿರುಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...