Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: 1948ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಏತಕ್ಕೆ ಗೊತ್ತೆ?

ಫ್ಯಾಕ್ಟ್‌ಚೆಕ್‌: 1948ರ ಒಲಂಪಿಕ್ಸ್‌ನಲ್ಲಿ ಭಾರತ ತಂಡ ಬರಿಗಾಲಿನಲ್ಲಿ ಫುಟ್‌ಬಾಲ್ ಆಡಿದ್ದು ಏತಕ್ಕೆ ಗೊತ್ತೆ?

‘ಈ ಚಿತ್ರವನ್ನು ನೋಡಿ ಆಲೋಚಿಸಿದ ನಂತರ ನೀವು ಗಾಂಧಿ ಮತ್ತು ನೆಹರೂ ಅವರನ್ನು ದ್ವೇಷಿಸುತ್ತೀರಿ’ ಎಂಬ ಸಂದೇಶವನ್ನು ಬಿಜೆಪಿ ಬೆಂಬಲಿತ ಬಲಪಂಥೀಯರು ಹರಡುತ್ತಿದ್ದಾರೆ

- Advertisement -
- Advertisement -

‘1948 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಫುಟ್‌ಬಾಲ್ ತಂಡವು ಶೂಗಳನ್ನು ಖರೀದಿಸಲು ಸಾಧ್ಯವಾಗದೆ ಬರಿಗಾಲಿನಲ್ಲಿ ಪಂದ್ಯಗಳನ್ನು ಆಡಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರಹವೊಂದು ವೈರಲ್ ಮಾಡಲಾಗಿದೆ. ಮುಖ್ಯವಾಗಿ ಈ ಬರಹವನ್ನು ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿದ್ದು, ಫುಟ್‌ಬಾಲ್ ಆಟಗಾರರ ಅಂದಿನ ಪರಿಸ್ಥಿತಿಗೆ ಭಾರತದ ಮೊದಲ ಪ್ರಧಾನಿ ಜವಾಹರ್‌ ಲಾಲ್ ನೆಹರೂ ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರೆ ಕಾರಣ ಎಂಬಂತೆ ಪ್ರತಿಪಾದಿಸಲಾಗಿದೆ.

ವೈರಲ್ ಪೋಸ್ಟ್‌ ಈ ಕೆಳಗಿನಂತಿದೆ.

“ಈ ಚಿತ್ರವನ್ನು ನೋಡಿದ ನಂತರ ಮತ್ತು ಆಲೋಚಿಸಿದ ನಂತರ ನೀವು ಗಾಂಧಿಯನ್ನು ದ್ವೇಷಿಸುತ್ತೀರಿ… ಮತ್ತು ಹೌದು ಈ ಚಿತ್ರವು ನೆಹರೂ ಅವರ ಬಟ್ಟೆ ಮತ್ತು ಬೂಟುಗಳು ವಿಶೇಷ ವಿಮಾನದಲ್ಲಿ ಬರುತ್ತಿದ್ದಾಗ… ಇದು ಲಂಡನ್‌ನಲ್ಲಿ ನಡೆದ 1948ರ ಒಲಿಂಪಿಕ್ಸ್‌ನ ಚಿತ್ರ”

“ನಮ್ಮ ಫುಟ್ಬಾಲ್ ತಂಡ ಫ್ರಾನ್ಸ್ ಜೊತೆಗಿನ ಪಂದ್ಯವನ್ನು 1-1 ಗೋಲುಗಳಿಂದ ಟೈ ಮಾಡಿಕೊಂಡಿತು. ನಮ್ಮ ಆಟಗಾರರಿಗೆ ಶೂ ಇಲ್ಲದ ಕಾರಣ ಗೆಲ್ಲಲು ಸಾಧ್ಯವಾಗಲಿಲ್ಲ. ಮತ್ತು ಅವರು ಇಡೀ ಪಂದ್ಯವನ್ನು ಬರಿಗಾಲಿನಲ್ಲಿ ಆಡಿದರು. ಇದರಿಂದಾಗಿ ಇತರ ತಂಡದ ಆಟಗಾರರ ಶೂಗಳು ಇಲ್ಲದೆ ಹಲವು ಆಟಗಾರರು ಗಾಯಗೊಂಡಿದ್ದಾರೆ. ಆದರೂ ಪಂದ್ಯ ಸಮಬಲವಾಗಿತ್ತು. ಶೈಲೇಂದ್ರ ನಾಥ್ ಮನ್ನಾ ಈ ತಂಡದ ನಾಯಕರಾಗಿದ್ದರು. ಅವರು ವಿಶ್ವದ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿದ್ದರು”

“ಸರ್ಕಾರದ ಬಳಿ ಅಷ್ಟು ಹಣವೂ ಇದ್ದರು ಸರ್ಕಾರ ಏಕೆ ಶೂ ನೀಡಲಿಲ್ಲ. ಪ್ಯಾರಿಸ್‌ನಿಂದ ನೆಹರೂ ಅವರ ಬಟ್ಟೆಗಳು ಡ್ರೈ-ಕ್ಲೀನ್ ಆಗುತ್ತಿದ್ದ ಸಮಯ ಮತ್ತು ನೆಹರು ಅವರು ತಮ್ಮ ನಾಯಿಯೊಂದಿಗೆ ಖಾಸಗಿ ಜೆಟ್‌ನಲ್ಲಿ ತಿರುಗಾಡುತ್ತಿದ್ದರು. ಇದರ ಪರಿಣಾಮವೆಂದರೆ 1950 ರ ವಿಶ್ವಕಪ್‌ನಲ್ಲಿ ಭಾರತವನ್ನು ಫಿಫಾ ನಿಷೇಧಿಸಿತು. ಏಕೆಂದರೆ ಯಾವುದೇ ತಂಡವು ಶೂಗಳಿಲ್ಲದೆ ಪಂದ್ಯವನ್ನು ಆಡುವುದಿಲ್ಲ. ಮತ್ತೆಂದೂ ಭಾರತ ತಂಡ ಫಿಫಾ ವಿಶ್ವಕಪ್‌ಗೆ ಹೋಗಲಿಲ್ಲ. ಆದರೆ ಇಂದು ದೇಶದ ಹಲವು ಕ್ರೀಡಾಂಗಣಗಳಿಗೆ ನೆಹರೂ ಗಾಂಧಿ ಕುಟುಂಬದ ಹೆಸರಿಡಲಾಗಿದೆ” 

ಲಿಂಕ್ಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ಕಟ್ಟುಕತೆಯನ್ನು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಚಿತ್ರದೊಂದಿಗೆ ಕೂಡಾ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ ನೋಡಬಹುದಾಗಿದೆ. ಇದೇ ಸಂದೇಶವನ್ನು ಸಾವಿರಾರು ಜನರು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಬರಹವನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಕೂಡ ಹರಿದಾಡುತ್ತಿದೆ. ಮಾಜಿ ಪ್ರಧಾನಿ ನೆಹರೂ ಅವರನ್ನು ನಿಂದಿಸಿ ಒಂದೇ ರೀತಿಯ ಚಿತ್ರಗಳನ್ನು ಹೊಂದಿರುವ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಆರ್ಕೈವ್‌‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಾದ್ಯಂತ ಇದೇ ರೀತಿಯ ಪ್ರತಿಪಾದನೆಯನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ಆದರೆ, 1948 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಆಡಿದ ಭಾರತೀಯ ರಾಷ್ಟ್ರೀಯ ಫುಟ್‌ಬಾಲ್ ತಂಡಕ್ಕೆ ಶೂಗಳನ್ನು ಖರೀದಿಸಲು ಯಾವುದೇ ಸಮಸ್ಯೆ ಇರಲಿಲ್ಲ. ಲಂಡನ್‌ನಲ್ಲಿ ಆಡಿದ ತಂಡದ ಸಮಸ್ಯರಿಗೆ ಶೂ ಇತ್ತಾದರೂ, ಆಟಗಾರರು ಶೂ ಇಲ್ಲದೆ ಆಡಲು ಆದ್ಯತೆ ನೀಡಿದ್ದರು. ಆಡುವ ಮೈದಾನದಲ್ಲಿ ತೇವ ಅಥವಾ ಕೆಸರು ಇದ್ದಾಗ ಮಾತ್ರ ಆಟಗಾರರು ಅಂದು ಶೂಗಳನ್ನು ಧರಿಸುತ್ತಿದ್ದರು.

ಫ್ಯಾಕ್ಟ್‌ಚೆಕ್‌

ವೈರಲ್ ಸಂದೇಶವೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ, “ದಿ ಕ್ವಿಂಟ್” ಈ ಬಗ್ಗೆ ಫ್ಯಾಕ್ಟ್‌ಚೆಕ್ ಮಾಡಿದೆ. ಗೂಗಲ್‌ನಲ್ಲಿ ‘1948 ರ ಒಲಿಂಪಿಕ್ಸ್‌ನಲ್ಲಿ ಭಾರತೀಯ ಫುಟ್‌ಬಾಲ್ ತಂಡ’ವನ್ನು ಹುಡುಕಿ, ಪಂದ್ಯಕ್ಕೆ ಸಂಬಂಧಿಸಿದ ಸುದ್ದಿ ವರದಿಗಳನ್ನು ಕಂಡು ಹಿಡಿಯಲಾಗಿದೆ.

2014 ರಲ್ಲಿ ಪ್ರಕಟವಾದ ದಿ ಹಿಂದೂ ಪತ್ರಿಕೆಯ ಲೇಖನದಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದ್ದು, ಅಂದು ಭಾರತೀಯ ಫುಟ್‌ಬಾಲ್ ಆಟಗಾರರು ಬೂಟುಗಳಿಲ್ಲದೆ ಆಡುವುದನ್ನು “ಇಷ್ಟಪಟ್ಟಿದ್ದರು” ಎಂದು ತಂಡದ ತರಬೇತುದಾರ ಬಿಡಿ ಚಟರ್ಜಿ ಹೇಳಿದ್ದಾಗಿ ಅದು ಹೇಳಿದೆ. ಲಂಡನ್‌ನಲ್ಲಿ ಇದ್ದ ತಂಡದ ಸದಸ್ಯರ ಬಳಿ ಶೂಗಳು ಇತ್ತು ಲೇಖನವು ಹೇಳುತ್ತದೆ.

1 ಆಗಸ್ಟ್ 1948 ರ ದಿನಾಂಕದ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಕೂಡಾ ಈ ಬಗ್ಗೆ ಬರೆಯಲಾಗಿದೆ. ಈ ಲೇಖನವು ಭಾರತೀಯ ತಂಡ ಫ್ರೆಂಚ್ ಪ್ರತಿಸ್ಪರ್ಧಿಗಳ ವಿರುದ್ಧ ಸೋತಿರುವುದರ ಹೇಳಿದೆ. ಭಾರತದ ಹನ್ನೊಂದು ಆಟಗಾರರಲ್ಲಿ ಎಂಟು ಮಂದಿ ಬರಿಗಾಲಿನಲ್ಲೇ ಆಡಿದ್ದಾರೆ ಎಂದು ಈ ಲೇಖನದಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಫೀಫಾದ ಅಧಿಕೃತ ಖಾತೆ 2018 ರಲ್ಲಿ ಮಾಡಿರುವ ಟ್ವೀಟ್‌ ಕೂಡ ಇದನ್ನೇ ಉಲ್ಲೇಖಿಸಿದೆ. ಅದು ತನ್ನ ಟ್ವೀಟ್‌ನಲ್ಲಿ, “ಹೆಚ್ಚಿನ ಭಾರತೀಯ ಆಟಗಾರರು ಬರಿಗಾಲಿನಲ್ಲಿದ್ದಾರೆ’’ ಎಂದು ಹೇಳಿದೆ. ಟ್ವೀಟ್ ಜೊತೆಗೆ ಫೋಟೋವನ್ನು ಕೂಡಾ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಒಬ್ಬ ಭಾರತೀಯ ಫುಟ್ಬಾಲ್ ಆಟಗಾರ ಶೂಗಳೊಂದಿಗೆ ಇದ್ದು, ಮೂವರು ಶೂ ಇಲ್ಲದೆ ಇರುವುದು ಕಾಣುತ್ತದೆ.

ಒಲಿಂಪಿಕ್ಸ್‌ನಲ್ಲಿ ಸ್ವತಂತ್ರ ಭಾರತದ ಮೊದಲ ಫುಟ್‌ಬಾಲ್ ಪಂದ್ಯದ 73 ವರ್ಷಗಳ ನೆನಪಿಗಾಗಿ ಇದೇ ಚಿತ್ರವನ್ನು ಭಾರತೀಯ ಫುಟ್‌ಬಾಲ್ ತಂಡದ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

1948 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ಪಂದ್ಯದ ಬಗ್ಗೆ ಪತ್ರಕರ್ತ ಮತ್ತು ‘ಬೇರ್‌ಫೂಟ್ ಟು ಬೂಟ್ಸ್: ದಿ ಮೆನಿ ಲೈವ್ಸ್ ಆಫ್ ಇಂಡಿಯನ್ ಫುಟ್‌ಬಾಲ್’ ಪುಸ್ತಕದ ಲೇಖಕ ನೋವಿ ಕಪಾಡಿಯಾ ಅವರನ್ನು ದಿ ಕ್ವಿಂಟ್ ಮಾತನಾಡಿಸಿದೆ.

“ವಿಶೇಷವಾಗಿ ಬೆಂಗಳೂರು ಮತ್ತು ಕಲ್ಕತ್ತಾದ ಆಟಗಾರಿಗೆ ಬರಿಗಾಲಿನಲ್ಲಿ ಆಟವಾಡಿ ಅಭ್ಯಾಸವಾಗಿತ್ತು. ಆದ್ದರಿಂದ ಅವರಿಗೆ ಶೂ ಜೊತೆಗೆ ಆಟವಾಡುವುದು ಆರಾಮದಾಯಕವಾಗಿರಲಿಲ್ಲ. ಪಂದ್ಯಾಟದಲ್ಲಿ ಶೂಗಳನ್ನು ಕಡ್ಡಾಯ ಮಾಡಿದಾಗ, ಅಹ್ಮದ್ ಖಾನ್ ಅವರಂತಹ ಅಗ್ರ ಆಟಗಾರರನ್ನು ಭಾರತ ತಂಡದಿಂದ ಕೈಬಿಡಬೇಕಾಯಿತು. ಯಾಕೆಂದರೆ ಅವರಿಗೆ ಶೂ ಧರಿಸಿ ಆಡಲು ಸಾಧ್ಯವಾಗಲಿಲ್ಲ” ಎಂದು ಲೇಖಕ ಮತ್ತು ಫುಟ್ಬಾಲ್ ತಜ್ಞ ನೋವಿ ಕಪಾಡಿಯಾ ಹೇಳಿದ್ದಾರೆ.

ಶೂ ಧರಿಸಿ ಆಟವಾಡಬೇಕೆ ಅಥವಾ ಅವುಗಳು ಇಲ್ಲದೆ ಆಟವಾಡಬೇಕೆ ಎಂಬ ಆಯ್ಕೆಯನ್ನು ತಂಡಕ್ಕೆ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.

“ಆಯ್ಕೆ ಅವರದಾಗಿತ್ತು. ಗೋಲು ಗಳಿಸಿದ ಎಸ್. ರಾಮನ್ ಅತ್ಯುತ್ತಮ ಡ್ರಿಬ್ಲರ್ ಆಗಿದ್ದರು. ಆದರೆ ಅವರು ಬರಿಗಾಲಿನಲ್ಲಿ ಮಾತ್ರ ಆಡಬಲ್ಲವರಾಗಿದ್ದರು” ಎಂದು ಕಪಾಡಿಯಾ ಹೇಳಿದ್ದಾರೆ.

“ಆಟಗಾರರಿಗೆ ಆರಾಮದಾಯಕವಾಗಿರುವುದರಿಂದ ಬರಿಗಾಲಿನಲ್ಲಿ ಆಡಿದ್ದು ಅವರ ಇಚ್ಛೆಯಿಂದಾಗಿದೆ. ಆಗಿನ ನಾಯಕ ಟಿ.ಓವೋ ಅವರು, ‘ಇದು ಫುಟ್‌ಬಾಲ್ ಆಗಿದ್ದು, ಬೂಟ್‌ಬಾಲ್ ಅಲ್ಲ’ ಎಂದು ಬಹಿರಂಗವಾಗಿ ಹೇಳಿದ್ದರು” ಎಂದು ಕಪಾಡಿಯಾ ಹೇಳಿದ್ದಾರೆ.

ಈ ಎಲ್ಲಾ ಮಾಹಿತಿಯ ಮೂಲಕ ತಿಳಿದು ಬರುವುದೇನೆಂದರೆ, 1948 ರ ಒಲಿಂಪಿಕ್ಸ್‌ನಲ್ಲಿ ಆಡಿದ ಸ್ವತಂತ್ರ ಭಾರತದ ಮೊದಲ ಫುಟ್‌ಬಾಲ್ ತಂಡವು ಹಣದ ಕೊರತೆಯಿಂದಾಗಿ ಬರಿಗಾಲಿನಲ್ಲಿ ಆಟ ಆಡುವಂತೆ ಆಗಿರಲಿಲ್ಲ. ಬದಲಿಗೆ ಅವರು ಬರಿಗಾಲಿನಲ್ಲಿ ಅವರ ಇಚ್ಛೆಯಿಂದಾಗಿಯೆ ಆಟವಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...