Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

"ಪಾಕಿಸ್ತಾನದ ಪತ್ರಕರ್ತ ಮೋದಿಯವರನ್ನು ವರ್ಣಿಸಿದ ರೀತಿ" ಎಂದು ವ್ಯಕ್ತಿಯೊಬ್ಬರು ಮೋದಿಯವರನ್ನು ಹೊಗಳುತ್ತಿರುವ ವೀಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಪಾಕಿಸ್ತಾನದ ಪತ್ರಕರ್ತರೊಬ್ಬರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

“ಪಾಕಿಸ್ತಾನದ ಪತ್ರಕರ್ತ ಮೋದಿಯವರನ್ನು ವರ್ಣಿಸಿದ ರೀತಿ” ಎಂದು ವ್ಯಕ್ತಿಯೊಬ್ಬರು ಮೋದಿಯವರನ್ನು ಹೊಗಳುತ್ತಿರುವ ವೀಡಿಯೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಪೋಸ್ಟ್‌ನ ಆರ್ಕೈವ್‌ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಫ್ಯಾಕ್ಟ್‌ಚೆಕ್:

ಈ ವಿಡಿಯೋದ ಸೋಷಿಯಲ್ ಮೀಡಿಯಾ ಸಂಪರ್ಕದ ವಾಟರ್‌ ಮಾರ್ಕ್‌ನಲ್ಲಿ  ಹರ್ಷವರ್ಧನ್ ಜೈನ್ ಎಂದು ಬರೆಯಲಾಗಿದೆ. ಅಲ್ಲಿಂದ ಕ್ಯೂ ಪಡೆದು ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಇದೇ ವಿಡಿಯೋದ ಪೂರ್ತಿ ವಿಡಿಯೋ ಆಗಸ್ಟ್ 14, 2020ರಲ್ಲಿಹರ್ಷವರ್ಧನ್ ಜೈನ್’ ಎಂಬುವವರ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಆಗಿದೆ. ಆ ಯೂಟ್ಯೂಬ್ ಚಾನೆಲ್‌ನ ‘ಪರಿಚಯ’ ವಿಭಾಗದಲ್ಲಿ ಹರ್ಷವರ್ಧನ್ ಜೈನ್ ಭಾರತೀಯ ಮೂಲದ ಪ್ರೇರಣ ನೀಡುವ ಭಾಷಣಕಾರರಾಗಿದ್ದು ತರಬೇತಿ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕ್ ಸದನದಲ್ಲಿ ’ಮೋದಿ ಮೋದಿ’ ಎಂದು ಘೋಷಣೆ ಹಾಕಲಾಗುತ್ತಿದೆಯೇ?

ಅಲ್ಲದೇ ಅವರ ಖಾಸಗಿ ವೆಬ್‌ಸೈಟ್ ಮತ್ತು ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿಯೂ ಇದೇ ರೀತಿಯ ಹಲವು ಭಾಷಣಗಳನ್ನು ಕಾಣಬಹುದು. ಅಲ್ಲಿಯು ಅವರು ಭಾರತೀಯರೆಂದು ಪರಿಚಯಿಸಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇಂಡಿಯಾ ಟುಡೇ ಫ್ಯಾಕ್ಟ್‌ಚೆಕ್ ವಿಭಾಗವು ಹರ್ಷವರ್ಧನ್ ಜೈನ್‌ರವರ ಕಚೇರಿಯನ್ನು ಸಂಪರ್ಕಿಸಿದೆ. ಜೈನ್‌ರವರು ಪಾಕಿಸ್ತಾನದ ಪತ್ರಕರ್ತರಲ್ಲ, ಅವರು ಭಾರತದವರು ಎಂದಿದ್ದು, ಮತ್ತು ಈ ಭಾಷಣವನ್ನು ಭಾರತದ ಕಾರ್ಪೊರೇಟ್ ಕಂಪನಿಯೊಂದರಲ್ಲಿ ಮಾಡಿದ್ದಾರೆ ಎಂದು ಜೈನ್ ಕಚೇರಿಯು ಸಿಬ್ಬಂದಿ ತ್ರಿಲೋಕ್ ಶರ್ಮಾ ಎಂಬುವವರು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಹರ್ಷವರ್ಧನ್ ಜೈನ್‌ರವರು ರಾಜಸ್ಥಾನದ ಜೈಪುರ ಜಿಲ್ಲೆಯವರು. ಇವರಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ. ಕಾರ್ಪೊರೇಟ್ ಕಂಪನಿಗಳ ಉದ್ಯೋಗಿಗಳಿಗೆ ನಾಯಕತ್ವ ಬಲವರ್ಧನೆ ಕುರಿತು ಪ್ರೇರಣೆಯ ಭಾಷಣ ಮತ್ತು ತರಬೇತಿ ನೀಡುತ್ತಾರೆ. ಕಾರ್ಪೊರೇಟ್ ಕಂಪನಿಯೊಂದರ ಮಾರುಕಟ್ಟೆ ವಿಭಾಗದ ಉದ್ಯೋಗಿಗಳಿಗೆ ಕೆಲದಿನಗಳ ಹಿಂದೆ ಅವರು ತರಬೇತಿ ನೀಡಿದ ವಿಡಿಯೋ ಇದು ಎಂದು ಶರ್ಮಾ ತಿಳಿಸಿದ್ದಾರೆ.

ಒಟ್ಟಿನಲ್ಲಿ ವಿಡಿಯೋದಲ್ಲಿ ಪ್ರಧಾನಿ ಮೋದಿಯವರನ್ನು ಹೊಗಳುತ್ತಿರುವ ವ್ಯಕ್ತಿ ಪಾಕಿಸ್ತಾನದ ಪತ್ರಕರ್ತರಲ್ಲ. ಅವರು ಭಾರತದ ಪ್ರೇರಣೆಯ ಭಾಷಣಕಾರರಾಗಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...