Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...