Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...