Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...