Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...