Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ಫ್ಯಾಕ್ಟ್‌ಚೆಕ್: ರಾಜಸ್ಥಾನದ ಪೋಖ್ರಾನ್‌ನಲ್ಲಿನ ಬಾಂಬ್ ಸ್ಫೋಟವನ್ನು ಮಾಧ್ಯಮಗಳು ಮರೆಮಾಡುತ್ತಿವೆಯೆ?

ರಾಜಸ್ಥಾನದ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಫೋಟಗೊಂಡಿದ್ದು, ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂಬ ಸಂದೇಶವು ವೈರಲಾಗಿದೆ.

- Advertisement -
- Advertisement -

’ರಾಜಸ್ಥಾನದ ಪರಮಾಣು ಸ್ಥಾವರವಿರುವ ಪೋಖ್ರಾನ್‌ನಲ್ಲಿ ಬಾಂಬ್‌ ಸ್ಪೋಟವಾಗಿ ಅಪಘಾತ ಸಂಭವಿಸಿದೆ ಆದರೆ ಯಾವ ಮಾಧ್ಯಮಗಳು ಪ್ರಸಾರ ಮಾಡಿಲ್ಲ’ ಎಂಬ ಹೇಳಿಕೆಯಿರುವ ಮೂರು ಚಿತ್ರಗಳ ಫೋಟೋ ಕೊಲಾಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು? 

ಜುಲೈ 7 ರಂದು ‘ಹಕೂಕ್ ಟಿವಿ’ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿಯೂ ಇದೇ ಚಿತ್ರಗಳನ್ನು ಬಳಸಲಾಗಿತ್ತು.

“ಪೋಖ್ರಾನ್ ಪರಮಾಣು ಸ್ಥಾವರದಲ್ಲಿ ಮೂರು ಬಾಂಬ್‌ಗಳನ್ನು ತಯಾರಿಸಲಾಗುತ್ತಿದ್ದು, ಅದರಲ್ಲಿ ಒಂದು ಸ್ಫೋಟಗೊಂಡಿದೆ” ಎಂದು ವೀಡಿಯೊದಲ್ಲಿನ ನಿರೂಪಣೆಯು ಹೇಳುತ್ತದೆ. ಈ ಸುದ್ದಿಯನ್ನು ಮಾಧ್ಯಮಗಳು ಮರೆಮಾಡುತ್ತಿವೆ ಎಂದು ಅದು ತಿಳಿಸಿದೆ.

ಅಲ್ಲದೆ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲನೆಯದಾಗಿ ಪೋಖ್ರಾನ್‌ನಲ್ಲಿ ಯಾವುದೇ ಪರಮಾಣು ಸ್ಥಾವರವಿಲ್ಲ. ಭಾರತ ತನ್ನ ಪರಮಾಣು ಪರೀಕ್ಷೆಗಳನ್ನು ಮೊದಲು 1974 ರಲ್ಲಿ ಮತ್ತು ನಂತರ 1998 ರಲ್ಲಿ ಪೋಖ್ರಾನ್‌ನಲ್ಲಿ ನಡೆದೆ ಅಷ್ಟೆ.

1 ನೇ ಚಿತ್ರ:

ಚಿತ್ರಗಳನ್ನು Yandex ಎಂಬ ಸರ್ಚ್ ಎಂಜಿನ್ ಬಳಸಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಈ ಚಿತ್ರವು 2017 ರದ್ದಾಗಿದ್ದು ಹಾಗೂ ಕಾಬೂಲ್‌ನದ್ದಾಗಿದೆ ಎಂದು ತಿಳಿದು ಬರುತ್ತದೆ. ‘ದಿ ಲೋಕಲ್’ ಎಂಬ ಜರ್ಮನ್ ವೆಬ್‌ಸೈಟ್‌ನ ಲೇಖನದಲ್ಲಿ ಇದೇ ಚಿತ್ರವನ್ನು ಬಳಸಲಾಗಿದೆ.

2017 ರಲ್ಲಿ ಕಾಬೂಲ್ ನಗರವನ್ನು ಬೆಚ್ಚಿಬೀಳಿಸಿದ ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ ಎಂದು ಲೇಖನವು ಉಲ್ಲೇಖಿಸಿದೆ. ಇದೇ ಚಿತ್ರವನ್ನು ಬೇರೆ ವೆಬ್‌ಸೈಟ್‌ಗಳು ಕೂಡಾ ಬಳಸಿದ್ದು ಇದೇ ಸನ್ನಿವೇಶವನ್ನು ಹೇಳಿವೆ. ಚಿತ್ರವು ‘ರಫಿಯುಲ್ಲಾ ಕಲೀಮ್ / ಡಿಪಿಎ’ ಎಂಬವರ ಕೃಪೆ ಎಂದು ಕೂಡಾ ಉಲ್ಲೇಖಿಸಲಾಗಿದೆ.

2 ನೇ ಚಿತ್ರ:

ಈ ಚಿತ್ರವನ್ನು ರಿವರ್ಸ್ ಸರ್ಚ್ ನಡೆಸಿದಾಗ 2015 ರಲ್ಲಿ ಬಿಬಿಸಿಯಲ್ಲಿ ಪ್ರಕಟವಾದ ಲೇಖನ ಕಾಣಸಿಗುತ್ತದೆ. ಲೇಖನದಲ್ಲಿ ಈ ಚಿತ್ರವಿದ್ದು, ಅದನ್ನು ಕೆಂಟ್‌ ನ ಕ್ಲಿಫ್‌ ಎಂಬಲ್ಲಿ ಬ್ರಿಟಿಷ್ ಸೈನ್ಯವು ನಾಶಪಡಿಸಿದ ಬಾಂಬ್ ಎಂದು ಉಲ್ಲೇಖಿಸಿದೆ.

ನಾವು ಚಿತ್ರದ ಬಗ್ಗೆ ಮತ್ತಷ್ಟು ಹುಡುಕಿದಾಗ, ದಿ ಗಾರ್ಡಿಯನ್‌ನಲ್ಲಿ ಕೂಡಾ ಈ ಚಿತ್ರಕ್ಕೆ ‘ರಿಚರ್ಡ್ ವ್ಯಾಟ್ / ಪಿಎ’ ಎಂಬವರಿಗೆ ಕೃಪೆ ಕೊಟ್ಟು ಬ್ರಟಿಷ್‌ ಸೈನ್ಯ ಬಾಂಬನ್ನು ನಾಶಪಡಿಸಿತು ಎಂದು ಉಲ್ಲೇಖಿಸಿದೆ. ಅಲ್ಲದೆ ಈ ಚಿತ್ರವನ್ನು ಕ್ಲಿಕ್ಕಿಸಿದ ಫೋಟೋಗ್ರಾಫರ್‌ ರಿಚರ್ಡ್ ವ್ಯಾಟ್‌ ಅವರ ಟ್ವಿಟ್ಟರ್‌ ಅಕೌಂಟ್‌ನಲ್ಲಿಯೂ ಕೂಡಾ ಈ ಚಿತ್ರವನ್ನು ಕಾಣಬಹುದಾಗಿದೆ.

3 ನೇ ಚಿತ್ರ:

ಈ ಚಿತ್ರವನ್ನು ಕೂಡಾ ರಿವರ್ಸ್ ಸರ್ಚ್ ಮಾಡಿದಾಗ ’ಟೋಲೋ ನ್ಯೂಸ್‌’ನ ಮುಖ್ಯಸ್ಥರ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಚಿತ್ರವಾಗಿದೆ. ಇದು ಅಫ್ಘಾನಿಸ್ತಾನ ಮೂಲದ ಸುದ್ದಿ ಚಾನೆಲ್ ಆಗಿದ್ದು, ಈ ಚಿತ್ರಗಳು 2017 ರ ಕಾಬೂಲ್ ದಾಳಿಯ ಚಿತ್ರವಾಗಿದೆ ಟ್ವೀಟ್ ಉಲ್ಲೇಖಿಸಿದೆ.

ಈ ಚಿತ್ರವನ್ನು ಅವರ ಖಾತೆಯಲ್ಲಿ ಪರಿಶೀಲಿಸಲು ಸಾಧ್ಯವಾಗದಿದ್ದರು ಆದರೆ ಅದು 2017ರ ಚಿತ್ರವೆಂದು ಹೇಳಬಹುದು.

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿರುವಂತೆ ಚಿತ್ರವೂ ಪೋಖ್ರಾನ್‌ ಪ್ರದೇಶದ್ದಲ್ಲ ಎಂದು ಸಾಬೀತಾಗುತ್ತದೆ.


ಓದಿ: ಈ ಫೋಟೊಗಳು ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್‌ನವಲ್ಲ.. ಬದಲಿಗೆ ಬಿಹಾರದವು‌‌; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...