Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಮಧ್ಯಪ್ರದೇಶದ ಜನರು ಕಾಂಗ್ರೆಸಿನ ಕಮಲ್‌ನಾಥ್‌ ಅವರ ಪರವಾಗಿದ್ದಾರೆ ಎಂದು ಈ ವೈರಲ್ ವಿಡಿಯೋ ಮೂಲಕ ಉಲ್ಲೇಖಿಸಲಾಗಿತ್ತು.

- Advertisement -
- Advertisement -

ಮಧ್ಯಪ್ರದೇಶ ಕಾಂಗ್ರೆಸ್‌, ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾನ್ ಅವರ ವಿಡಿಯೋವನ್ನು ಹಂಚಿಕೊಂಡಿದೆ. ಅದರಲ್ಲಿ ಶಿವರಾಜ್ ತಾನು ಹಾಗೂ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್,‌ ಈ ಇಬ್ಬರಲ್ಲಿ ಮುಖ್ಯಮಂತ್ರಿಯಾಗಿ ಯಾರು ಉತ್ತಮ ಎಂದು ಸಾರ್ವಜನಿಕರಲ್ಲಿ ಕೇಳಿದ್ದು, ಆಗ ಜನಸಮೂಹವು ಕಮಲ್ ನಾಥ್ ಅವರ ಹೆಸರನ್ನು ಹೇಳುತ್ತಿರುವಂತೆ ತೋರಿಸಲಾಗಿದೆ.

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯ ಹಿನ್ನಲೆಯಲ್ಲಿ ಈ ವಿಡಿಯೋವನ್ನು ಕಾಂಗ್ರೆಸ್‌ ಅಪ್ಲೋಡ್ ಮಾಡಿದ್ದು, ರಾಜ್ಯದಲ್ಲಿ ಜನರು ಕಮಲ್‌ನಾಥ್‌ ಅವರ ಪರವಾಗಿದ್ದಾರೆ ಎಂದು ಈ ವಿಡಿಯೋ ಮೂಲಕ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಮಧ್ಯಪ್ರದೇಶ ಕಾಂಗ್ರೆಸ್‌ನ ಟ್ವಿಟ್ಟರ್‌ ಹ್ಯಾಂಡಲ್ ಹಂಚಿಕೊಂಡಿರುವ ಈ ವಿಡಿಯೋ ತುಣುಕನ್ನು ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಅಲ್ಲದೆ, ವೀಡಿಯೊ ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಒಂದೇ ರೀತಿಯ ಪ್ರತಿಪಾದನೆಯೊಂದಿಗೆ ಹರಿದಾಡುತ್ತಿದೆ.

ಇದರ ಆರ್ಕೈವ್ ಇಲ್ಲಿದೆ.

ಫ್ಯಾಕ್ಟ್‌‌ಚೆಕ್

ಸೆಪ್ಟೆಂಬರ್ 20 ರಂದು ಮಾಂಡ್‌ಸೌರ್‌ನ ಸೀತಾಮೌದಲ್ಲಿ ಶಿವರಾಜ್ ಸಿಂಗ್ ಚೌಹಾನ್ ಅವರ ಭಾಷಣದ ಲೈವ್ ಸ್ಟ್ರೀಮ್‌‌ನಿಂದ ಈ ವಿಡಿಯೋವನ್ನು ಎತ್ತಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಈ ವಿಡಿಯೋದ 34:26 ನಿಮಿಷಗಳಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿಗಳಲ್ಲಿ ಯಾರು ಉತ್ತಮ ಮುಖ್ಯಮಂತ್ರಿ ಎಂದು ಶಿವರಾಜ್ ಚವಾನ್ ಕೇಳುತ್ತಾರೆ. ಆಗ ಪ್ರೇಕ್ಷಕರು “ಶಿವರಾಜ್” ಎಂದು ಹೇಳುವುದನ್ನು ಕೇಳಬಹುದು.

ಅಷ್ಟೇ ಅಲ್ಲದೆ, ಅವರು ಮತ್ತೆ ಸಾರ್ವಜನಿಕರೊಂದಿಗೆ ಹೆಸರನ್ನು ಜೋರಾಗಿ ಹೇಳುವಂತೆ ಕೇಳುತ್ತಾರೆ, ಆಗ ಕೂಡಾ ಸಭಿಕರು ಶಿವರಾಜ್ ಅವರ ಹೆಸರನ್ನೇ ಹೇಳುತ್ತಾರೆಯೆ ಹೊರತು ಕಾಂಗ್ರೆಸ್‌ನ ಟ್ವಿಟ್ಟರ್‌ ಹ್ಯಾಂಡಲ್ ಹಂಚಿದಂತೆ ಕಮಲ್‌‌ನಾಥ್‌ ಅವರ ಹೆಸರನ್ನಲ್ಲ.

ವೈರಲ್ ವೀಡಿಯೊದಲ್ಲಿ, ‘ಕಮಲ್ ನಾಥ್’ ಹೆಸರು ಸ್ಪಷ್ಟವಾಗಿ ಕೇಳಬಹುದಾದರೂ, ಬಿಜೆಪಿ ಪ್ರಸಾರ ಮಾಡಿರುವ ಲೈವ್ ಸ್ಟ್ರೀಮ್‌ನಲ್ಲಿ, ‘ಕಮಲ್ ನಾಥ್’ ಹೆಸರು ಕೇಳಿಬಂದಿಲ್ಲ.

ಈ ಬಗ್ಗೆ ಬಿಜೆಪಿಯ ಟ್ವಿಟರ್ ಹ್ಯಾಂಡಲ್‌, ರಾಜ್ಯದ ಕಾಂಗ್ರೆಸ್ ಹ್ಯಾಂಡಲ್‌ನ ವಿಡಿಯೋಗೆ ಪ್ರತಿಕ್ರಿಯಿಸಿದ್ದು, ಮೂಲ ವಿಡಿಯೋವನ್ನು ಹಂಚಿಕೊಂಡಿದೆ.

ಒಟ್ಟಿನಲ್ಲಿ, ಮಧ್ಯಪ್ರದೇಶ ಕಾಂಗ್ರೆಸ್ ಎಡಿಟ್ ಮಾಡಿರುವ ವಿಡಿಯೋವನ್ನು ತನ್ನ ಟ್ವಿಟ್ಟರ್‌ ಹ್ಯಾಂಡಲ್‌ನಲ್ಲಿ  ಹಂಚಿಕೊಂಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...