Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

- Advertisement -
- Advertisement -

ಪೂರ್ವ ಜೆರುಸಲೆಮ್‌ನ ಶೇಕ್ ಜರ್‍ರಾಹ್‌‌ ಪ್ರದೇಶದಲ್ಲಿ ಹಲವಾರು ಪ್ಯಾಲೇಸ್ತೀನಿ ಕುಟುಂಬಗಳನ್ನು ಗಡಿಪಾರು ಮಾಡಲು ಜೆರುಸಲೆಮ್ ಜಿಲ್ಲಾ ನ್ಯಾಯಾಲಯ ತೀರ್ಪಿತ್ತ ನಂತರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಅಲ್ಲಿ ಇಸ್ರೇಲ್‌ ಸೇನೆಗೆ ಹಿನ್ನಡೆಯಾಗಿದೆ ಎಂದು ವರದಿಯಾಗಿದ್ದು, ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಕೊಂಡಿದೆ. “ಸೋಮವಾರ (ಮೇ 10) ಗಾಝಾದಲ್ಲಿ ಕನಿಷ್ಠ 136 ಜನರು ಸಾವನ್ನಪ್ಪಿದ್ದಾರೆ. 34 ಮಕ್ಕಳು ಮತ್ತು 21 ಮಹಿಳೆಯರು ಸೇರಿದಂತೆ 950 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿ ವೈದ್ಯರು ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಭಾರತದಲ್ಲಿ ಇಸ್ರೇಲ್‌ನ ಕೃತ್ಯವನ್ನು ಬೆಂಬಲಿಸುವ ಕೆಲ ಬಲಪಂಥೀಯರು, ಮಕ್ಕಳ ಮುಖಕ್ಕೆ ಕೆಂಪು ಬಣ್ಣವನ್ನು ಹಚ್ಚುವ ವಿಡಿಯೊವೊಂದನ್ನು ವೈರಲ್‌ ಮಾಡಿದ್ದಾರೆ. ಅದರಲ್ಲಿ, “ಜಾಗತಿಕ ಸಹಾನುಭೂತಿ ಪಡೆಯಲು ಮತ್ತು ಇಸ್ರೇಲನ್ನು ಕೆಟ್ಟದಾಗಿ ಬಿಂಬಿಸಲು, ಗಾಝಾದ ಪ್ಯಾಲೆಸ್ತೀನಿಯರು ಮಕ್ಕಳ ಮುಖದ ಮೇಲೆ ನಕಲಿ ರಕ್ತವನ್ನು ಮತ್ತು ನಕಲಿ ಗಾಯಗಳನ್ನು ಮಾಡಿ ಚಿತ್ರಿಸುತ್ತಿದ್ದಾರೆ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಬಿಜೆಪಿ ಒಬಿಸಿ ಮೋರ್ಚಾ ಹರಿಯಾಣ ರಾಜ್ಯ ಉಪಾಧ್ಯಕ್ಷೆ ಎಂದು ಗುರುತಿಸಿಕೊಂಡಿರುವ ಮಾಯಾ ಯಾದವ್ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ.

PM झालावाडी (@ PMPATEl1969) ಮತ್ತು ಜನ್ಮಜಿತ್ ಸಿನ್ಹಾ (@ Impregnable007) ಸೇರಿದಂತೆ ಹಲವಾರು ಜನರು ಇದನ್ನು ಟ್ವಿಟರ್‌ನಲ್ಲಿ ಹಂಚಿದ್ದಾರೆ.

ಈ ವಿಡಿಯೋವನ್ನು ಬಲಪಂಥೀಯರು ಫೇಸ್‌‌ಬುಕ್‌ನಲ್ಲಿ ಕೂಡಾ ವೈರಲ್‌ ಮಾಡಿದ್ದಾರೆ. ದೀಕ್ಷಿತ್‌ ಶೆಟ್ಟಿಗಾರ್‌ ಕೊಣಾಜೆ ಎಂಬವರು ಹಾಕಿರುವ ಈ ವಿಡಿಯೊ ಇದುವರೆಗೂ 193 ಶೇರ್‌ ಆಗಿದೆ. ಅದರ ಆರ್ಕೈವ್ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಇದು ಹಳೆಯ ವೀಡಿಯೊವಾಗಿದ್ದು, ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೊವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಲ್ಟ್‌‌ ನ್ಯೂಸ್‌ ಹುಡುಕಾಡಿದೆ. ಗೂಗಲ್‌ನಲ್ಲಿ ಈ ವಿಡಿಯೊ ಬಗ್ಗೆ 2018 ರಲ್ಲಿ ಫ್ರಾನ್ಸ್ 24 ಮತ್ತು ಸ್ನೋಪ್ಸ್ ಪ್ರಕಟಿಸಿದ ಫ್ಯಾಕ್ಟ್-ಚೆಕ್ ವರದಿಗಳು ಕಂಡುಬಂದಿದೆ. ದೀರ್ಘ ವೀಡಿಯೊವನ್ನು ಕ್ಲಿಪ್‌ ಅನ್ನು ಕಟ್‌ ಮಾಡಿ ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ದೌರ್ಜನ್ಯ ಎಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಪ್ಯಾಲೇಸ್ಟಿನಿಯನ್ ವೆಬ್‌ಸೈಟ್ ‘ದಿ ಗಾಝಾ ಪೋಸ್ಟ್‌’ನ ಸುದ್ದಿ ವರದಿಯಿಂದ ಈ ವೀಡಿಯೊ ಕ್ಲಿಪ್ ಪಡೆಯಲಾಗಿದೆ. “ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಪ್ಯಾಲೇಸ್ತೀನಿಯನ್ ಸಿನೆಮಾ ಸ್ಪೆಷಲ್ ಎಫೆಕ್ಟ್ಸ್ ಉದ್ಯಮದಲ್ಲಿ ಮಾಡಿದ ಕೆಲಸಗಳ ಬಗ್ಗೆ” ಈ ವಿಡಿಯೊ ವರದಿಯನ್ನು ಮಾಡಲಾಗಿದೆ ಎಂದು ಸ್ನೋಪ್ಸ್ ವರದಿ ಮಾಡಿದೆ.

ಆದರೆ  ವೈರಲ್ ಆಗುತ್ತಿರುವ ಈ ವಿಡಿಯೊವನ್ನು ಎಡಿಟ್ ಮಾಡಿ, ಮುಖಕ್ಕೆ ಗಾಯದ ಮೇಕಪ್‌ ಮಾಡುವುದನ್ನು ಮಾತ್ರ ತೋರಿಸಲಾಗಿದೆ. ಜೊತೆಗೆ ಇತರ ವಿವರಗಳ ದೃಶ್ಯಗಳನ್ನು ಕೂಡಾ ಕತ್ತರಿಸಲಾಗಿದೆ. ಆ ವಿಡಿಯೊ ಏನೆಂದು ತಿಳಿಸುವ ಅರೇಬಿಕ್ ವಿಶ್ಲೇಷಣೆಯನ್ನು ಕೂಡಾ ಮ್ಯೂಟ್ ಮಾಡಿ, ಅದರಲ್ಲಿ ತಪ್ಪಾಗಿ ಅರ್ಥೈಸುವಂತೆ ಇಂಗ್ಲಿಷ್‌ ಸಬ್‌ಟೈಟಲ್‌ ನೀಡಲಾಗಿದೆ.

ಈ ವಿಡಿಯೊವನ್ನು ವೀಕ್ಷಿಸುವಾಗ ಸುಮಾರು 20 ಸೆಕೆಂಡುಗಳಲ್ಲಿ, ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಶರ್ಟಿನಲ್ಲಿ ‘ಸ್ಪೆಷಲ್ ಎಫೆಕ್ಟ್ ಮೇಕಪ್’ ಎಂದು ಬರೆದ ಬರಹವನ್ನು ಕೂಡಾ ಗುರುತಿಸಬಹುದು.

ಸಾಂಪ್ರದಾಯಿಕವಾಗಿ ಪುರುಷರು ನಡೆಸುತ್ತಿರುವ ಪ್ಯಾಲೇಸ್ತೀನಿಯನ್ ಚಲನಚಿತ್ರೋದ್ಯಮಕ್ಕೆ ಮರಿಯಮ್ ಸಲಾಹ್ ಪ್ರವೇಶಿಸುವ ಬಗ್ಗೆ ‘ಟಿಆರ್‌ಟಿ ವರ್ಲ್ಡ್’ ಚಾನೆಲ್‌ ಕೂಡಾ ವೀಡಿಯೊ ವರದಿಯನ್ನು ಪ್ರಸಾರ ಮಾಡಿದೆ. ಈ ವರದಿಯಲ್ಲಿ ಕೂಡಾ ವೈರಲ್‌ ಆಗಿರುವ ಅದೇ ತುಣುಕುಗಳನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಗಾಜಾ ಪಟ್ಟಿಯ ಫಿಲ್ಮ್‌ಸೆಟ್‌ನಲ್ಲಿ, ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಫ್ರೆಂಚ್ ಚಾರಿಟಿ ಡಾಕ್ಟರ್ಸ್ ಆಫ್ ದಿ ವರ್ಲ್ಡ್ ಯೋಜನೆಯ ಅಡಿಯಲ್ಲಿ ಪಾಲ್ಗೊಳ್ಳುವ ನಟರ ಮೇಲೆ ಭೀಕರವಾಗಿ ಕಾಣುವ ಗಾಯಗಳನ್ನು ಸೃಷ್ಟಿಸುತ್ತಿದ್ದಾರೆ. ಗಾಜಾ ನಿವಾಸಿಗಳು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಆಶಿಸಿದ್ದಾರೆ” ಎಂದು ಟಿಆರ್‌ಟಿ ವಲ್ಡ್‌‌ ನಿರೂಪಕಿ ಹೇಳುತ್ತಾರೆ.

ಚಲನಚಿತ್ರ ಯೋಜನೆಗಾಗಿ ನಟರ ಮೇಲೆ ಗಾಯಗಳನ್ನು ಕೃತಕವಾಗಿ ಮೇಕಪ್‌ ಮೂಲಕ ಮಾಡಿರುವ ಫ್ಯಾಲೆಸ್ತೀನಿ ಮೇಕಪ್ ಕಲಾವಿದೆಯ ಮೂರು ವರ್ಷಗಳ ಹಿಂದಿನ ವೀಡಿಯೊವನ್ನು, “ಗಾಜಾ ನಿವಾಸಿಗಳು ಜಗತ್ತಿನ ಅನುಕಂಪ ಗಿಟ್ಟಿಸಲು ಬೇಕಾಗಿ ಮತ್ತು ಇಸ್ರೇಲ್ ಅನ್ನು ಕೆಟ್ಟದಾಗಿ ಬಿಂಬಿಸಲು ಬೇಕಾಗಿ ನಕಲಿ ಗಾಯಗಳನ್ನು ಮಾಡುತ್ತಿದ್ದಾರೆ” ಎಂಬ ಸುಳ್ಳು ಹೇಳಿಕೆಯನ್ನು ಮತ್ತೆ ಹರಿಯಬಿಡಲಾಗಿದೆ.

ಗಾಜಾ ನಿವಾಸಿಗಳು ಸಹಾನುಭೂತಿ ಪಡೆಯಲು “ನಕಲಿ ಅಂತ್ಯಕ್ರಿಯೆ” ನಡೆಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದರ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಈ ಹಿಂದೆ ಬಿಡುಗಡೆ ಮಾಡಿತ್ತು.

ಕೃಪೆ: ಆಲ್ಟ್‌ನ್ಯೂಸ್‌

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿಯನ್ನು ಹಂಚಿದ ಮಾಧ್ಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...