Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

- Advertisement -
- Advertisement -

ಪೂರ್ವ ಜೆರುಸಲೆಮ್‌ನ ಶೇಕ್ ಜರ್‍ರಾಹ್‌‌ ಪ್ರದೇಶದಲ್ಲಿ ಹಲವಾರು ಪ್ಯಾಲೇಸ್ತೀನಿ ಕುಟುಂಬಗಳನ್ನು ಗಡಿಪಾರು ಮಾಡಲು ಜೆರುಸಲೆಮ್ ಜಿಲ್ಲಾ ನ್ಯಾಯಾಲಯ ತೀರ್ಪಿತ್ತ ನಂತರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಅಲ್ಲಿ ಇಸ್ರೇಲ್‌ ಸೇನೆಗೆ ಹಿನ್ನಡೆಯಾಗಿದೆ ಎಂದು ವರದಿಯಾಗಿದ್ದು, ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಕೊಂಡಿದೆ. “ಸೋಮವಾರ (ಮೇ 10) ಗಾಝಾದಲ್ಲಿ ಕನಿಷ್ಠ 136 ಜನರು ಸಾವನ್ನಪ್ಪಿದ್ದಾರೆ. 34 ಮಕ್ಕಳು ಮತ್ತು 21 ಮಹಿಳೆಯರು ಸೇರಿದಂತೆ 950 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿ ವೈದ್ಯರು ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಭಾರತದಲ್ಲಿ ಇಸ್ರೇಲ್‌ನ ಕೃತ್ಯವನ್ನು ಬೆಂಬಲಿಸುವ ಕೆಲ ಬಲಪಂಥೀಯರು, ಮಕ್ಕಳ ಮುಖಕ್ಕೆ ಕೆಂಪು ಬಣ್ಣವನ್ನು ಹಚ್ಚುವ ವಿಡಿಯೊವೊಂದನ್ನು ವೈರಲ್‌ ಮಾಡಿದ್ದಾರೆ. ಅದರಲ್ಲಿ, “ಜಾಗತಿಕ ಸಹಾನುಭೂತಿ ಪಡೆಯಲು ಮತ್ತು ಇಸ್ರೇಲನ್ನು ಕೆಟ್ಟದಾಗಿ ಬಿಂಬಿಸಲು, ಗಾಝಾದ ಪ್ಯಾಲೆಸ್ತೀನಿಯರು ಮಕ್ಕಳ ಮುಖದ ಮೇಲೆ ನಕಲಿ ರಕ್ತವನ್ನು ಮತ್ತು ನಕಲಿ ಗಾಯಗಳನ್ನು ಮಾಡಿ ಚಿತ್ರಿಸುತ್ತಿದ್ದಾರೆ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಬಿಜೆಪಿ ಒಬಿಸಿ ಮೋರ್ಚಾ ಹರಿಯಾಣ ರಾಜ್ಯ ಉಪಾಧ್ಯಕ್ಷೆ ಎಂದು ಗುರುತಿಸಿಕೊಂಡಿರುವ ಮಾಯಾ ಯಾದವ್ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ.

PM झालावाडी (@ PMPATEl1969) ಮತ್ತು ಜನ್ಮಜಿತ್ ಸಿನ್ಹಾ (@ Impregnable007) ಸೇರಿದಂತೆ ಹಲವಾರು ಜನರು ಇದನ್ನು ಟ್ವಿಟರ್‌ನಲ್ಲಿ ಹಂಚಿದ್ದಾರೆ.

ಈ ವಿಡಿಯೋವನ್ನು ಬಲಪಂಥೀಯರು ಫೇಸ್‌‌ಬುಕ್‌ನಲ್ಲಿ ಕೂಡಾ ವೈರಲ್‌ ಮಾಡಿದ್ದಾರೆ. ದೀಕ್ಷಿತ್‌ ಶೆಟ್ಟಿಗಾರ್‌ ಕೊಣಾಜೆ ಎಂಬವರು ಹಾಕಿರುವ ಈ ವಿಡಿಯೊ ಇದುವರೆಗೂ 193 ಶೇರ್‌ ಆಗಿದೆ. ಅದರ ಆರ್ಕೈವ್ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಇದು ಹಳೆಯ ವೀಡಿಯೊವಾಗಿದ್ದು, ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೊವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಲ್ಟ್‌‌ ನ್ಯೂಸ್‌ ಹುಡುಕಾಡಿದೆ. ಗೂಗಲ್‌ನಲ್ಲಿ ಈ ವಿಡಿಯೊ ಬಗ್ಗೆ 2018 ರಲ್ಲಿ ಫ್ರಾನ್ಸ್ 24 ಮತ್ತು ಸ್ನೋಪ್ಸ್ ಪ್ರಕಟಿಸಿದ ಫ್ಯಾಕ್ಟ್-ಚೆಕ್ ವರದಿಗಳು ಕಂಡುಬಂದಿದೆ. ದೀರ್ಘ ವೀಡಿಯೊವನ್ನು ಕ್ಲಿಪ್‌ ಅನ್ನು ಕಟ್‌ ಮಾಡಿ ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ದೌರ್ಜನ್ಯ ಎಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಪ್ಯಾಲೇಸ್ಟಿನಿಯನ್ ವೆಬ್‌ಸೈಟ್ ‘ದಿ ಗಾಝಾ ಪೋಸ್ಟ್‌’ನ ಸುದ್ದಿ ವರದಿಯಿಂದ ಈ ವೀಡಿಯೊ ಕ್ಲಿಪ್ ಪಡೆಯಲಾಗಿದೆ. “ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಪ್ಯಾಲೇಸ್ತೀನಿಯನ್ ಸಿನೆಮಾ ಸ್ಪೆಷಲ್ ಎಫೆಕ್ಟ್ಸ್ ಉದ್ಯಮದಲ್ಲಿ ಮಾಡಿದ ಕೆಲಸಗಳ ಬಗ್ಗೆ” ಈ ವಿಡಿಯೊ ವರದಿಯನ್ನು ಮಾಡಲಾಗಿದೆ ಎಂದು ಸ್ನೋಪ್ಸ್ ವರದಿ ಮಾಡಿದೆ.

ಆದರೆ  ವೈರಲ್ ಆಗುತ್ತಿರುವ ಈ ವಿಡಿಯೊವನ್ನು ಎಡಿಟ್ ಮಾಡಿ, ಮುಖಕ್ಕೆ ಗಾಯದ ಮೇಕಪ್‌ ಮಾಡುವುದನ್ನು ಮಾತ್ರ ತೋರಿಸಲಾಗಿದೆ. ಜೊತೆಗೆ ಇತರ ವಿವರಗಳ ದೃಶ್ಯಗಳನ್ನು ಕೂಡಾ ಕತ್ತರಿಸಲಾಗಿದೆ. ಆ ವಿಡಿಯೊ ಏನೆಂದು ತಿಳಿಸುವ ಅರೇಬಿಕ್ ವಿಶ್ಲೇಷಣೆಯನ್ನು ಕೂಡಾ ಮ್ಯೂಟ್ ಮಾಡಿ, ಅದರಲ್ಲಿ ತಪ್ಪಾಗಿ ಅರ್ಥೈಸುವಂತೆ ಇಂಗ್ಲಿಷ್‌ ಸಬ್‌ಟೈಟಲ್‌ ನೀಡಲಾಗಿದೆ.

ಈ ವಿಡಿಯೊವನ್ನು ವೀಕ್ಷಿಸುವಾಗ ಸುಮಾರು 20 ಸೆಕೆಂಡುಗಳಲ್ಲಿ, ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಶರ್ಟಿನಲ್ಲಿ ‘ಸ್ಪೆಷಲ್ ಎಫೆಕ್ಟ್ ಮೇಕಪ್’ ಎಂದು ಬರೆದ ಬರಹವನ್ನು ಕೂಡಾ ಗುರುತಿಸಬಹುದು.

ಸಾಂಪ್ರದಾಯಿಕವಾಗಿ ಪುರುಷರು ನಡೆಸುತ್ತಿರುವ ಪ್ಯಾಲೇಸ್ತೀನಿಯನ್ ಚಲನಚಿತ್ರೋದ್ಯಮಕ್ಕೆ ಮರಿಯಮ್ ಸಲಾಹ್ ಪ್ರವೇಶಿಸುವ ಬಗ್ಗೆ ‘ಟಿಆರ್‌ಟಿ ವರ್ಲ್ಡ್’ ಚಾನೆಲ್‌ ಕೂಡಾ ವೀಡಿಯೊ ವರದಿಯನ್ನು ಪ್ರಸಾರ ಮಾಡಿದೆ. ಈ ವರದಿಯಲ್ಲಿ ಕೂಡಾ ವೈರಲ್‌ ಆಗಿರುವ ಅದೇ ತುಣುಕುಗಳನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಗಾಜಾ ಪಟ್ಟಿಯ ಫಿಲ್ಮ್‌ಸೆಟ್‌ನಲ್ಲಿ, ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಫ್ರೆಂಚ್ ಚಾರಿಟಿ ಡಾಕ್ಟರ್ಸ್ ಆಫ್ ದಿ ವರ್ಲ್ಡ್ ಯೋಜನೆಯ ಅಡಿಯಲ್ಲಿ ಪಾಲ್ಗೊಳ್ಳುವ ನಟರ ಮೇಲೆ ಭೀಕರವಾಗಿ ಕಾಣುವ ಗಾಯಗಳನ್ನು ಸೃಷ್ಟಿಸುತ್ತಿದ್ದಾರೆ. ಗಾಜಾ ನಿವಾಸಿಗಳು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಆಶಿಸಿದ್ದಾರೆ” ಎಂದು ಟಿಆರ್‌ಟಿ ವಲ್ಡ್‌‌ ನಿರೂಪಕಿ ಹೇಳುತ್ತಾರೆ.

ಚಲನಚಿತ್ರ ಯೋಜನೆಗಾಗಿ ನಟರ ಮೇಲೆ ಗಾಯಗಳನ್ನು ಕೃತಕವಾಗಿ ಮೇಕಪ್‌ ಮೂಲಕ ಮಾಡಿರುವ ಫ್ಯಾಲೆಸ್ತೀನಿ ಮೇಕಪ್ ಕಲಾವಿದೆಯ ಮೂರು ವರ್ಷಗಳ ಹಿಂದಿನ ವೀಡಿಯೊವನ್ನು, “ಗಾಜಾ ನಿವಾಸಿಗಳು ಜಗತ್ತಿನ ಅನುಕಂಪ ಗಿಟ್ಟಿಸಲು ಬೇಕಾಗಿ ಮತ್ತು ಇಸ್ರೇಲ್ ಅನ್ನು ಕೆಟ್ಟದಾಗಿ ಬಿಂಬಿಸಲು ಬೇಕಾಗಿ ನಕಲಿ ಗಾಯಗಳನ್ನು ಮಾಡುತ್ತಿದ್ದಾರೆ” ಎಂಬ ಸುಳ್ಳು ಹೇಳಿಕೆಯನ್ನು ಮತ್ತೆ ಹರಿಯಬಿಡಲಾಗಿದೆ.

ಗಾಜಾ ನಿವಾಸಿಗಳು ಸಹಾನುಭೂತಿ ಪಡೆಯಲು “ನಕಲಿ ಅಂತ್ಯಕ್ರಿಯೆ” ನಡೆಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದರ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಈ ಹಿಂದೆ ಬಿಡುಗಡೆ ಮಾಡಿತ್ತು.

ಕೃಪೆ: ಆಲ್ಟ್‌ನ್ಯೂಸ್‌

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿಯನ್ನು ಹಂಚಿದ ಮಾಧ್ಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...