Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

- Advertisement -
- Advertisement -

ಪೂರ್ವ ಜೆರುಸಲೆಮ್‌ನ ಶೇಕ್ ಜರ್‍ರಾಹ್‌‌ ಪ್ರದೇಶದಲ್ಲಿ ಹಲವಾರು ಪ್ಯಾಲೇಸ್ತೀನಿ ಕುಟುಂಬಗಳನ್ನು ಗಡಿಪಾರು ಮಾಡಲು ಜೆರುಸಲೆಮ್ ಜಿಲ್ಲಾ ನ್ಯಾಯಾಲಯ ತೀರ್ಪಿತ್ತ ನಂತರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಅಲ್ಲಿ ಇಸ್ರೇಲ್‌ ಸೇನೆಗೆ ಹಿನ್ನಡೆಯಾಗಿದೆ ಎಂದು ವರದಿಯಾಗಿದ್ದು, ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಕೊಂಡಿದೆ. “ಸೋಮವಾರ (ಮೇ 10) ಗಾಝಾದಲ್ಲಿ ಕನಿಷ್ಠ 136 ಜನರು ಸಾವನ್ನಪ್ಪಿದ್ದಾರೆ. 34 ಮಕ್ಕಳು ಮತ್ತು 21 ಮಹಿಳೆಯರು ಸೇರಿದಂತೆ 950 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿ ವೈದ್ಯರು ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಭಾರತದಲ್ಲಿ ಇಸ್ರೇಲ್‌ನ ಕೃತ್ಯವನ್ನು ಬೆಂಬಲಿಸುವ ಕೆಲ ಬಲಪಂಥೀಯರು, ಮಕ್ಕಳ ಮುಖಕ್ಕೆ ಕೆಂಪು ಬಣ್ಣವನ್ನು ಹಚ್ಚುವ ವಿಡಿಯೊವೊಂದನ್ನು ವೈರಲ್‌ ಮಾಡಿದ್ದಾರೆ. ಅದರಲ್ಲಿ, “ಜಾಗತಿಕ ಸಹಾನುಭೂತಿ ಪಡೆಯಲು ಮತ್ತು ಇಸ್ರೇಲನ್ನು ಕೆಟ್ಟದಾಗಿ ಬಿಂಬಿಸಲು, ಗಾಝಾದ ಪ್ಯಾಲೆಸ್ತೀನಿಯರು ಮಕ್ಕಳ ಮುಖದ ಮೇಲೆ ನಕಲಿ ರಕ್ತವನ್ನು ಮತ್ತು ನಕಲಿ ಗಾಯಗಳನ್ನು ಮಾಡಿ ಚಿತ್ರಿಸುತ್ತಿದ್ದಾರೆ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಬಿಜೆಪಿ ಒಬಿಸಿ ಮೋರ್ಚಾ ಹರಿಯಾಣ ರಾಜ್ಯ ಉಪಾಧ್ಯಕ್ಷೆ ಎಂದು ಗುರುತಿಸಿಕೊಂಡಿರುವ ಮಾಯಾ ಯಾದವ್ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ.

PM झालावाडी (@ PMPATEl1969) ಮತ್ತು ಜನ್ಮಜಿತ್ ಸಿನ್ಹಾ (@ Impregnable007) ಸೇರಿದಂತೆ ಹಲವಾರು ಜನರು ಇದನ್ನು ಟ್ವಿಟರ್‌ನಲ್ಲಿ ಹಂಚಿದ್ದಾರೆ.

ಈ ವಿಡಿಯೋವನ್ನು ಬಲಪಂಥೀಯರು ಫೇಸ್‌‌ಬುಕ್‌ನಲ್ಲಿ ಕೂಡಾ ವೈರಲ್‌ ಮಾಡಿದ್ದಾರೆ. ದೀಕ್ಷಿತ್‌ ಶೆಟ್ಟಿಗಾರ್‌ ಕೊಣಾಜೆ ಎಂಬವರು ಹಾಕಿರುವ ಈ ವಿಡಿಯೊ ಇದುವರೆಗೂ 193 ಶೇರ್‌ ಆಗಿದೆ. ಅದರ ಆರ್ಕೈವ್ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಇದು ಹಳೆಯ ವೀಡಿಯೊವಾಗಿದ್ದು, ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೊವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಲ್ಟ್‌‌ ನ್ಯೂಸ್‌ ಹುಡುಕಾಡಿದೆ. ಗೂಗಲ್‌ನಲ್ಲಿ ಈ ವಿಡಿಯೊ ಬಗ್ಗೆ 2018 ರಲ್ಲಿ ಫ್ರಾನ್ಸ್ 24 ಮತ್ತು ಸ್ನೋಪ್ಸ್ ಪ್ರಕಟಿಸಿದ ಫ್ಯಾಕ್ಟ್-ಚೆಕ್ ವರದಿಗಳು ಕಂಡುಬಂದಿದೆ. ದೀರ್ಘ ವೀಡಿಯೊವನ್ನು ಕ್ಲಿಪ್‌ ಅನ್ನು ಕಟ್‌ ಮಾಡಿ ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ದೌರ್ಜನ್ಯ ಎಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಪ್ಯಾಲೇಸ್ಟಿನಿಯನ್ ವೆಬ್‌ಸೈಟ್ ‘ದಿ ಗಾಝಾ ಪೋಸ್ಟ್‌’ನ ಸುದ್ದಿ ವರದಿಯಿಂದ ಈ ವೀಡಿಯೊ ಕ್ಲಿಪ್ ಪಡೆಯಲಾಗಿದೆ. “ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಪ್ಯಾಲೇಸ್ತೀನಿಯನ್ ಸಿನೆಮಾ ಸ್ಪೆಷಲ್ ಎಫೆಕ್ಟ್ಸ್ ಉದ್ಯಮದಲ್ಲಿ ಮಾಡಿದ ಕೆಲಸಗಳ ಬಗ್ಗೆ” ಈ ವಿಡಿಯೊ ವರದಿಯನ್ನು ಮಾಡಲಾಗಿದೆ ಎಂದು ಸ್ನೋಪ್ಸ್ ವರದಿ ಮಾಡಿದೆ.

ಆದರೆ  ವೈರಲ್ ಆಗುತ್ತಿರುವ ಈ ವಿಡಿಯೊವನ್ನು ಎಡಿಟ್ ಮಾಡಿ, ಮುಖಕ್ಕೆ ಗಾಯದ ಮೇಕಪ್‌ ಮಾಡುವುದನ್ನು ಮಾತ್ರ ತೋರಿಸಲಾಗಿದೆ. ಜೊತೆಗೆ ಇತರ ವಿವರಗಳ ದೃಶ್ಯಗಳನ್ನು ಕೂಡಾ ಕತ್ತರಿಸಲಾಗಿದೆ. ಆ ವಿಡಿಯೊ ಏನೆಂದು ತಿಳಿಸುವ ಅರೇಬಿಕ್ ವಿಶ್ಲೇಷಣೆಯನ್ನು ಕೂಡಾ ಮ್ಯೂಟ್ ಮಾಡಿ, ಅದರಲ್ಲಿ ತಪ್ಪಾಗಿ ಅರ್ಥೈಸುವಂತೆ ಇಂಗ್ಲಿಷ್‌ ಸಬ್‌ಟೈಟಲ್‌ ನೀಡಲಾಗಿದೆ.

ಈ ವಿಡಿಯೊವನ್ನು ವೀಕ್ಷಿಸುವಾಗ ಸುಮಾರು 20 ಸೆಕೆಂಡುಗಳಲ್ಲಿ, ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಶರ್ಟಿನಲ್ಲಿ ‘ಸ್ಪೆಷಲ್ ಎಫೆಕ್ಟ್ ಮೇಕಪ್’ ಎಂದು ಬರೆದ ಬರಹವನ್ನು ಕೂಡಾ ಗುರುತಿಸಬಹುದು.

ಸಾಂಪ್ರದಾಯಿಕವಾಗಿ ಪುರುಷರು ನಡೆಸುತ್ತಿರುವ ಪ್ಯಾಲೇಸ್ತೀನಿಯನ್ ಚಲನಚಿತ್ರೋದ್ಯಮಕ್ಕೆ ಮರಿಯಮ್ ಸಲಾಹ್ ಪ್ರವೇಶಿಸುವ ಬಗ್ಗೆ ‘ಟಿಆರ್‌ಟಿ ವರ್ಲ್ಡ್’ ಚಾನೆಲ್‌ ಕೂಡಾ ವೀಡಿಯೊ ವರದಿಯನ್ನು ಪ್ರಸಾರ ಮಾಡಿದೆ. ಈ ವರದಿಯಲ್ಲಿ ಕೂಡಾ ವೈರಲ್‌ ಆಗಿರುವ ಅದೇ ತುಣುಕುಗಳನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಗಾಜಾ ಪಟ್ಟಿಯ ಫಿಲ್ಮ್‌ಸೆಟ್‌ನಲ್ಲಿ, ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಫ್ರೆಂಚ್ ಚಾರಿಟಿ ಡಾಕ್ಟರ್ಸ್ ಆಫ್ ದಿ ವರ್ಲ್ಡ್ ಯೋಜನೆಯ ಅಡಿಯಲ್ಲಿ ಪಾಲ್ಗೊಳ್ಳುವ ನಟರ ಮೇಲೆ ಭೀಕರವಾಗಿ ಕಾಣುವ ಗಾಯಗಳನ್ನು ಸೃಷ್ಟಿಸುತ್ತಿದ್ದಾರೆ. ಗಾಜಾ ನಿವಾಸಿಗಳು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಆಶಿಸಿದ್ದಾರೆ” ಎಂದು ಟಿಆರ್‌ಟಿ ವಲ್ಡ್‌‌ ನಿರೂಪಕಿ ಹೇಳುತ್ತಾರೆ.

ಚಲನಚಿತ್ರ ಯೋಜನೆಗಾಗಿ ನಟರ ಮೇಲೆ ಗಾಯಗಳನ್ನು ಕೃತಕವಾಗಿ ಮೇಕಪ್‌ ಮೂಲಕ ಮಾಡಿರುವ ಫ್ಯಾಲೆಸ್ತೀನಿ ಮೇಕಪ್ ಕಲಾವಿದೆಯ ಮೂರು ವರ್ಷಗಳ ಹಿಂದಿನ ವೀಡಿಯೊವನ್ನು, “ಗಾಜಾ ನಿವಾಸಿಗಳು ಜಗತ್ತಿನ ಅನುಕಂಪ ಗಿಟ್ಟಿಸಲು ಬೇಕಾಗಿ ಮತ್ತು ಇಸ್ರೇಲ್ ಅನ್ನು ಕೆಟ್ಟದಾಗಿ ಬಿಂಬಿಸಲು ಬೇಕಾಗಿ ನಕಲಿ ಗಾಯಗಳನ್ನು ಮಾಡುತ್ತಿದ್ದಾರೆ” ಎಂಬ ಸುಳ್ಳು ಹೇಳಿಕೆಯನ್ನು ಮತ್ತೆ ಹರಿಯಬಿಡಲಾಗಿದೆ.

ಗಾಜಾ ನಿವಾಸಿಗಳು ಸಹಾನುಭೂತಿ ಪಡೆಯಲು “ನಕಲಿ ಅಂತ್ಯಕ್ರಿಯೆ” ನಡೆಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದರ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಈ ಹಿಂದೆ ಬಿಡುಗಡೆ ಮಾಡಿತ್ತು.

ಕೃಪೆ: ಆಲ್ಟ್‌ನ್ಯೂಸ್‌

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿಯನ್ನು ಹಂಚಿದ ಮಾಧ್ಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...