Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

- Advertisement -
- Advertisement -

ಪೂರ್ವ ಜೆರುಸಲೆಮ್‌ನ ಶೇಕ್ ಜರ್‍ರಾಹ್‌‌ ಪ್ರದೇಶದಲ್ಲಿ ಹಲವಾರು ಪ್ಯಾಲೇಸ್ತೀನಿ ಕುಟುಂಬಗಳನ್ನು ಗಡಿಪಾರು ಮಾಡಲು ಜೆರುಸಲೆಮ್ ಜಿಲ್ಲಾ ನ್ಯಾಯಾಲಯ ತೀರ್ಪಿತ್ತ ನಂತರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಅಲ್ಲಿ ಇಸ್ರೇಲ್‌ ಸೇನೆಗೆ ಹಿನ್ನಡೆಯಾಗಿದೆ ಎಂದು ವರದಿಯಾಗಿದ್ದು, ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಕೊಂಡಿದೆ. “ಸೋಮವಾರ (ಮೇ 10) ಗಾಝಾದಲ್ಲಿ ಕನಿಷ್ಠ 136 ಜನರು ಸಾವನ್ನಪ್ಪಿದ್ದಾರೆ. 34 ಮಕ್ಕಳು ಮತ್ತು 21 ಮಹಿಳೆಯರು ಸೇರಿದಂತೆ 950 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿ ವೈದ್ಯರು ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಭಾರತದಲ್ಲಿ ಇಸ್ರೇಲ್‌ನ ಕೃತ್ಯವನ್ನು ಬೆಂಬಲಿಸುವ ಕೆಲ ಬಲಪಂಥೀಯರು, ಮಕ್ಕಳ ಮುಖಕ್ಕೆ ಕೆಂಪು ಬಣ್ಣವನ್ನು ಹಚ್ಚುವ ವಿಡಿಯೊವೊಂದನ್ನು ವೈರಲ್‌ ಮಾಡಿದ್ದಾರೆ. ಅದರಲ್ಲಿ, “ಜಾಗತಿಕ ಸಹಾನುಭೂತಿ ಪಡೆಯಲು ಮತ್ತು ಇಸ್ರೇಲನ್ನು ಕೆಟ್ಟದಾಗಿ ಬಿಂಬಿಸಲು, ಗಾಝಾದ ಪ್ಯಾಲೆಸ್ತೀನಿಯರು ಮಕ್ಕಳ ಮುಖದ ಮೇಲೆ ನಕಲಿ ರಕ್ತವನ್ನು ಮತ್ತು ನಕಲಿ ಗಾಯಗಳನ್ನು ಮಾಡಿ ಚಿತ್ರಿಸುತ್ತಿದ್ದಾರೆ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಬಿಜೆಪಿ ಒಬಿಸಿ ಮೋರ್ಚಾ ಹರಿಯಾಣ ರಾಜ್ಯ ಉಪಾಧ್ಯಕ್ಷೆ ಎಂದು ಗುರುತಿಸಿಕೊಂಡಿರುವ ಮಾಯಾ ಯಾದವ್ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ.

PM झालावाडी (@ PMPATEl1969) ಮತ್ತು ಜನ್ಮಜಿತ್ ಸಿನ್ಹಾ (@ Impregnable007) ಸೇರಿದಂತೆ ಹಲವಾರು ಜನರು ಇದನ್ನು ಟ್ವಿಟರ್‌ನಲ್ಲಿ ಹಂಚಿದ್ದಾರೆ.

ಈ ವಿಡಿಯೋವನ್ನು ಬಲಪಂಥೀಯರು ಫೇಸ್‌‌ಬುಕ್‌ನಲ್ಲಿ ಕೂಡಾ ವೈರಲ್‌ ಮಾಡಿದ್ದಾರೆ. ದೀಕ್ಷಿತ್‌ ಶೆಟ್ಟಿಗಾರ್‌ ಕೊಣಾಜೆ ಎಂಬವರು ಹಾಕಿರುವ ಈ ವಿಡಿಯೊ ಇದುವರೆಗೂ 193 ಶೇರ್‌ ಆಗಿದೆ. ಅದರ ಆರ್ಕೈವ್ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಇದು ಹಳೆಯ ವೀಡಿಯೊವಾಗಿದ್ದು, ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೊವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಲ್ಟ್‌‌ ನ್ಯೂಸ್‌ ಹುಡುಕಾಡಿದೆ. ಗೂಗಲ್‌ನಲ್ಲಿ ಈ ವಿಡಿಯೊ ಬಗ್ಗೆ 2018 ರಲ್ಲಿ ಫ್ರಾನ್ಸ್ 24 ಮತ್ತು ಸ್ನೋಪ್ಸ್ ಪ್ರಕಟಿಸಿದ ಫ್ಯಾಕ್ಟ್-ಚೆಕ್ ವರದಿಗಳು ಕಂಡುಬಂದಿದೆ. ದೀರ್ಘ ವೀಡಿಯೊವನ್ನು ಕ್ಲಿಪ್‌ ಅನ್ನು ಕಟ್‌ ಮಾಡಿ ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ದೌರ್ಜನ್ಯ ಎಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಪ್ಯಾಲೇಸ್ಟಿನಿಯನ್ ವೆಬ್‌ಸೈಟ್ ‘ದಿ ಗಾಝಾ ಪೋಸ್ಟ್‌’ನ ಸುದ್ದಿ ವರದಿಯಿಂದ ಈ ವೀಡಿಯೊ ಕ್ಲಿಪ್ ಪಡೆಯಲಾಗಿದೆ. “ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಪ್ಯಾಲೇಸ್ತೀನಿಯನ್ ಸಿನೆಮಾ ಸ್ಪೆಷಲ್ ಎಫೆಕ್ಟ್ಸ್ ಉದ್ಯಮದಲ್ಲಿ ಮಾಡಿದ ಕೆಲಸಗಳ ಬಗ್ಗೆ” ಈ ವಿಡಿಯೊ ವರದಿಯನ್ನು ಮಾಡಲಾಗಿದೆ ಎಂದು ಸ್ನೋಪ್ಸ್ ವರದಿ ಮಾಡಿದೆ.

ಆದರೆ  ವೈರಲ್ ಆಗುತ್ತಿರುವ ಈ ವಿಡಿಯೊವನ್ನು ಎಡಿಟ್ ಮಾಡಿ, ಮುಖಕ್ಕೆ ಗಾಯದ ಮೇಕಪ್‌ ಮಾಡುವುದನ್ನು ಮಾತ್ರ ತೋರಿಸಲಾಗಿದೆ. ಜೊತೆಗೆ ಇತರ ವಿವರಗಳ ದೃಶ್ಯಗಳನ್ನು ಕೂಡಾ ಕತ್ತರಿಸಲಾಗಿದೆ. ಆ ವಿಡಿಯೊ ಏನೆಂದು ತಿಳಿಸುವ ಅರೇಬಿಕ್ ವಿಶ್ಲೇಷಣೆಯನ್ನು ಕೂಡಾ ಮ್ಯೂಟ್ ಮಾಡಿ, ಅದರಲ್ಲಿ ತಪ್ಪಾಗಿ ಅರ್ಥೈಸುವಂತೆ ಇಂಗ್ಲಿಷ್‌ ಸಬ್‌ಟೈಟಲ್‌ ನೀಡಲಾಗಿದೆ.

ಈ ವಿಡಿಯೊವನ್ನು ವೀಕ್ಷಿಸುವಾಗ ಸುಮಾರು 20 ಸೆಕೆಂಡುಗಳಲ್ಲಿ, ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಶರ್ಟಿನಲ್ಲಿ ‘ಸ್ಪೆಷಲ್ ಎಫೆಕ್ಟ್ ಮೇಕಪ್’ ಎಂದು ಬರೆದ ಬರಹವನ್ನು ಕೂಡಾ ಗುರುತಿಸಬಹುದು.

ಸಾಂಪ್ರದಾಯಿಕವಾಗಿ ಪುರುಷರು ನಡೆಸುತ್ತಿರುವ ಪ್ಯಾಲೇಸ್ತೀನಿಯನ್ ಚಲನಚಿತ್ರೋದ್ಯಮಕ್ಕೆ ಮರಿಯಮ್ ಸಲಾಹ್ ಪ್ರವೇಶಿಸುವ ಬಗ್ಗೆ ‘ಟಿಆರ್‌ಟಿ ವರ್ಲ್ಡ್’ ಚಾನೆಲ್‌ ಕೂಡಾ ವೀಡಿಯೊ ವರದಿಯನ್ನು ಪ್ರಸಾರ ಮಾಡಿದೆ. ಈ ವರದಿಯಲ್ಲಿ ಕೂಡಾ ವೈರಲ್‌ ಆಗಿರುವ ಅದೇ ತುಣುಕುಗಳನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಗಾಜಾ ಪಟ್ಟಿಯ ಫಿಲ್ಮ್‌ಸೆಟ್‌ನಲ್ಲಿ, ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಫ್ರೆಂಚ್ ಚಾರಿಟಿ ಡಾಕ್ಟರ್ಸ್ ಆಫ್ ದಿ ವರ್ಲ್ಡ್ ಯೋಜನೆಯ ಅಡಿಯಲ್ಲಿ ಪಾಲ್ಗೊಳ್ಳುವ ನಟರ ಮೇಲೆ ಭೀಕರವಾಗಿ ಕಾಣುವ ಗಾಯಗಳನ್ನು ಸೃಷ್ಟಿಸುತ್ತಿದ್ದಾರೆ. ಗಾಜಾ ನಿವಾಸಿಗಳು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಆಶಿಸಿದ್ದಾರೆ” ಎಂದು ಟಿಆರ್‌ಟಿ ವಲ್ಡ್‌‌ ನಿರೂಪಕಿ ಹೇಳುತ್ತಾರೆ.

ಚಲನಚಿತ್ರ ಯೋಜನೆಗಾಗಿ ನಟರ ಮೇಲೆ ಗಾಯಗಳನ್ನು ಕೃತಕವಾಗಿ ಮೇಕಪ್‌ ಮೂಲಕ ಮಾಡಿರುವ ಫ್ಯಾಲೆಸ್ತೀನಿ ಮೇಕಪ್ ಕಲಾವಿದೆಯ ಮೂರು ವರ್ಷಗಳ ಹಿಂದಿನ ವೀಡಿಯೊವನ್ನು, “ಗಾಜಾ ನಿವಾಸಿಗಳು ಜಗತ್ತಿನ ಅನುಕಂಪ ಗಿಟ್ಟಿಸಲು ಬೇಕಾಗಿ ಮತ್ತು ಇಸ್ರೇಲ್ ಅನ್ನು ಕೆಟ್ಟದಾಗಿ ಬಿಂಬಿಸಲು ಬೇಕಾಗಿ ನಕಲಿ ಗಾಯಗಳನ್ನು ಮಾಡುತ್ತಿದ್ದಾರೆ” ಎಂಬ ಸುಳ್ಳು ಹೇಳಿಕೆಯನ್ನು ಮತ್ತೆ ಹರಿಯಬಿಡಲಾಗಿದೆ.

ಗಾಜಾ ನಿವಾಸಿಗಳು ಸಹಾನುಭೂತಿ ಪಡೆಯಲು “ನಕಲಿ ಅಂತ್ಯಕ್ರಿಯೆ” ನಡೆಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದರ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಈ ಹಿಂದೆ ಬಿಡುಗಡೆ ಮಾಡಿತ್ತು.

ಕೃಪೆ: ಆಲ್ಟ್‌ನ್ಯೂಸ್‌

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿಯನ್ನು ಹಂಚಿದ ಮಾಧ್ಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...