Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ಫ್ಯಾಕ್ಟ್‌ಚೆಕ್: ತನಿಷ್ಕ್ ಜಾಹೀರಾತಿನ ವಿರುದ್ಧ ದೆಹಲಿಯ ಜಾಮಾ ಮಸೀದಿ ಫತ್ವಾ ಹೊರಡಿಸಿದೆಯೇ?

ಜಾಮಾ ಮಸೀದಿಯು ತನಿಷ್ಕ್ ವಿರುದ್ಧ ಫತ್ವಾ ಹೊರಡಿಸಿದೆ. ಯಾಕೆಂದರೆ ಮುಸ್ಲಿಮರಲ್ಲಿ ಈ 'ಸೀಮಂತ' ಸಂಪ್ರದಾಯ ಇಲ್ಲ. ತನಿಷ್ಕ್, ಸದ್ದಿಲ್ಲದೇ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಜೊತೆಗೆ ಮುಸ್ಲಿಂ ಧರ್ಮವನ್ನೂ ಹಾಳುಮಾಡುತ್ತಿದೆ ಎಂದು ಫೆಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

- Advertisement -
- Advertisement -

ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದ್ದ ತನಿಷ್ಕ್ ಜಾಹಿರಾತನ್ನು ಅದರ ನಿರ್ಮಾಣದ ಆಭರಣ ಕಂಪನಿಯು ಹಿಂತೆಗೆದುಕೊಂಡಿತ್ತು. ಇದಾದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದ್ದು, ದೆಹಲಿಯ ಜಾಮಾ ಮಸೀದಿಯ ಮುಖ್ಯಸ್ಥ ಶಾಹಿ ಇಮಾಮ್ ಅಹ್ಮದ್ ಬುಖಾರಿ ಈ ಜಾಹಿರಾತಿನ ವಿರುದ್ಧ ಫತ್ವಾ ಹೊರಡಿಸಲಿದ್ದಾರೆ ಎಂದು ಕೆಲವರು ಪೋಸ್ಟ್‌ಗಳನ್ನು‌ ಹಮಚಿಕೊಂಡಿದ್ದಾರೆ.

ರಾಹುಲ್ ಶರ್ಮಾ ಎಂಬುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, “ಜಾಮಾ ಮಸೀದಿಯು ತನಿಷ್ಕ್ ವಿರುದ್ಧ ಫತ್ವಾ ಹೊರಡಿಸಿದೆ. ಯಾಕೆಂದರೆ ಈ ಜಾಹಿರಾತಿನಲ್ಲಿ ಹಿಂದೂ ಸಂಪ್ರದಾಯದ ‘ಸೀಮಂತ’ ಮಾಡುವ ಪದ್ದತಿಯನ್ನು ತೋರಿಸಲಾಗಿದೆ. ಆದರೆ ಮುಸ್ಲಿಮರಲ್ಲಿ ಈ ಸಂಪ್ರದಾಯ ಇಲ್ಲ. ತನಿಷ್ಕ್, ಸದ್ದಿಲ್ಲದೇ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಜೊತೆಗೆ ಮುಸ್ಲಿಂ ಧರ್ಮವನ್ನೂ ಹಾಳುಮಾಡುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: TMC ಕಾರ್ಯಕರ್ತರಿಂದ BJP ಸದಸ್ಯನ ಕೊಲೆ ಎಂಬ ಈ ಚಿತ್ರ 2018ರದ್ದು!

ಈ ಫೊಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೊಡಬಹುದು.

ಸಂಗೀತ ವಾರಿಯರ್ ಎಂಬುವವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, “ತನಿಷ್ಕ್ ಜಾಹೀರಾತನ್ನು ಹೊಗಳಿದ್ದ SICKulars/Libtards/Commies ಈಗ ಫೆವಿಕಾಲ್ ಹಾಕಿಕೊಂಡಿದ್ದಾರೆ. ತನಿಷ್ಕ್ ಜಾಹಿರಾತಿನ ವಿರುದ್ಧ ಜಾಮಾ ಮಸೀದಿ ಫತ್ವಾ ಹೊರಡಿಸಿದ್ದು, ಈಗ ಇವರ ಪರಿಸ್ಥಿತಿ, ಮನೆಗೂ ಸಲ್ಲುವುದಿಲ್ಲ; ಸ್ಮಶಾನಕ್ಕೂ ಸಲ್ಲುವುದಿಲ್ಲ ಎಂಬಂತಾಗಿದೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್‌ನ ಆರ್ಕೈವ್ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಯುವತಿಯ ಅಪಹರಣದ ವೀಡಿಯೋ ವೈರಲ್; ಇದು ಉತ್ತರಪ್ರದೇಶದ್ದೇ?

ಹೀಗೆ ನೂರಾರು ಜನರು ಇದೇ ಹೇಳಿಕೆಯೊಂದಿಗೆ ಈ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್:

ಇತ್ತೀಚಿನ ಯಾವುದೇ ಸುದ್ದಿ ವರದಿಗಳಲ್ಲಿ ಇದರ ಮಾಹಿತಿಯ ಯಾವುದೇ ಉಲ್ಲೇಖಗಳಿಲ್ಲ. ಅದಾಗ್ಯೂ, ದಿ ಕ್ವಿಂಟ್ ಜೊತೆ ಮಾತನಾಡಿದ ದೆಹಲಿಯ ಜಾಮಾ ಮಸೀದಿಯ ವೈಸ್ ಶಾಹಿ ಇಮಾಮ್ ಸೈಯದ್ ಶಬನ್ ಬುಖಾರಿ, ತನೀಶ್ಕ್ ಜಾಹೀರಾತಿನ ವಿರುದ್ಧ ಯಾವುದೇ ಫತ್ವಾ ನೀಡಿಲ್ಲ, ಇದು ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದರು.

ಹಾಗಾಗಿ, ದೆಹಲಿಯ ಜಾಮಾ ಮಸೀದಿ ತನಿಷ್ಕ್ ಜಾಹೀರಾತಿನ ವಿರುದ್ಧ ಫತ್ವಾ ನೀಡಲಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...