Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...