Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...