Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...