Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಫ್ಯಾಕ್ಟ್‌‌ಚೆಕ್‌: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ಮಹಾರಾಷ್ಟ್ರದಲ್ಲಿ ನಡೆದ ಈ ಲೂಟಿಯ ಹಿಂದೆ ಕೊಮುವಾದಿ ರಾಜಕಾರಣಿಗಳು ಹಾಗೂ ಪೊಲೀಸರು ಇದ್ದರು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲಾಗಿದೆ.

- Advertisement -
- Advertisement -

ಜಾನುವಾರು ಮಾರುಕಟ್ಟೆಯಲ್ಲಿ ಲೂಟಿ ಮತ್ತು ಹಿಂಸಾಚಾರವನ್ನು ತೋರಿಸುವ ವಿಡಿಯೋವೊಂದು ಮಹಾರಾಷ್ಟ್ರದ ಗಡಿಯಲ್ಲಿ ಸಂಭವಿಸಿದೆ ಎಂಬ ಶಿರ್ಷಿಕೆ ಹೊತ್ತ ವೀಡಿಯೋ‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜುಲೈ 31 ರಂದು ನಡೆದ ಈದ್ ಹಬ್ಬದ ಹಿನ್ನೆಲೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಈ ಆಡುಗಳನ್ನು ಮಹಾರಾಷ್ಟ್ರ ಗಡಿಯಲ್ಲಿ ಲೂಟಿ ಮಾಡಲಾಗಿದ್ದು, ಲೂಟಿಯ ಹಿಂದೆ ಕೋಮುವಾದಿ ರಾಜಕಾರಣಿಗಳು ಮತ್ತು ಪೊಲೀಸರು ಇದ್ದಾರೆ. ಮೇಕೆಗಳನ್ನು ಖರೀದಿಸಿ ತಂದ ಮುಸ್ಲಿಮರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ವೀಡಿಯೊದ ಕೀ-ಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ ಮೊರೊಕಾದ ದೈನಂದಿನ ಟ್ಯಾಬ್ಲಾಯ್ಡ್  ahdath.info ನ ಲೇಖನದಲ್ಲಿ ಈ ಚಿತ್ರಣವನ್ನು ಕಾಣಬಹುದಾಗಿದೆ. ಕಾಸಾಬ್ಲಾಂಕಾದ ಅಲ್-ಹಸಾನಿ ಬಳಿಯಿರುವ ಕುರಿ ಮಾರುಕಟ್ಟೆಯಲ್ಲಿ ನಡೆದ ಇತ್ತೀಚೆಗೆ ನಡೆದ ಲೂಟಿ ಮತ್ತು ಹಿಂಸಾಚಾರ ಎಂದು ಅದು ಹೇಳಿದೆ.

“ಹಿಂಸೆ”, “ಲೂಟಿ” ಮತ್ತು “ಅಲ್-ಹಸಾನಿ” ಮುಂತಾದ ಕೀವರ್ಡ್ ಬಳಸಿ ಮತ್ತಷ್ಟು ಹುಡುಕಾಡಿದಾಗ ಘಟನೆಯ ಹಲವಾರು ಸುದ್ದಿ ವರದಿಳನ್ನು ಕಂಡುಕೊಳ್ಳಬಹುದು.

ಮೊರಾಕೊ ವರ್ಲ್ಡ್ ನ್ಯೂಸ್, ಎಂಬ ಅರೇಬಿಕ್ ಮತ್ತು ಇಂಗ್ಲಿಷ್ ಭಾಷೆಯ ಇ-ಪತ್ರಿಕೆ ಜುಲೈ 31 ರಂದು ಮಾಡಿದ ವರದಿಯಲ್ಲಿ ,”ಅಜ್ಮತ್ ಎಂಬ ಜಾನುವಾರು ಮಾರುಕಟ್ಟೆ ಕುರಿ ಮತ್ತು ಮೇಕೆಗಳನ್ನು ಬಕ್ರೀದ್‌ ಗೆ ಮಾರಾಟ ಮಾಡುತ್ತಿರುವಾಗ ಹಿಂಸಾಚಾರ  ಉಂಟಾಗಿ ಅಸ್ತವ್ಯಸ್ತವಾಗಿದೆ” ಎಂದು ಹೇಳಿದೆ. ಈ ಲೇಖನದಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ ಅನ್ನು ಹೊಂದಿದೆ.

ಇದೇ ಘಟನೆಯ ಬಗ್ಗೆ ಕಾಸಾಬ್ಲಾಂಕಾ ಮೂಲದ ಡಿಜಿಟಲ್ ಮೀಡಿಯಾ ಕಂಪನಿಯಾದ ವಿ ಲವ್ ಬಝ್‌ ವರದಿಯನ್ನು ನೋಡಬಹುದಾಗಿದೆ. ಅದರಲ್ಲಿ ಮೊರಾಕೊದ ರಾಷ್ಟ್ರೀಯ ಭದ್ರತೆಯ ಸಾಮಾನ್ಯ ನಿರ್ದೇಶನಾಲಯವು “ಘಟನೆಯಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲು ಸಾಧ್ಯವಾಯಿತು” ಎಂದು ಹೇಳಿದೆ.

ಈ ಸುದ್ದಿವಾಹಿನಿಯನ್ನು ಫೇಸ್‌ಬುಕ್‌ ಪರಿಶೀಲಿಸಿದೆ. ಅಲ್ಲದೆ ವಿವರಗಳೊಂದಿಗೆ ಈ ವೈರಲ್ ವೀಡಿಯೊವನ್ನು ಅದರಲ್ಲಿ ಅಪ್‌ಲೋಡ್ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ಘಟನೆ ಬಕ್ರೀದಿನ ಹಿಂದಿನ ದಿನ ಇದು ಸಂಭವಿಸಿದೆ ಎಂದು ಹೇಳಿದೆ. ಅಲ್ಲದೆ ಈ ಸುದ್ದಿ ವಾಹಿನಿಯನ್ನು ಟ್ವಿಟರ್‌ ಕೂಡಾ ಪರಿಶೀಲಿಸಿದೆ.

ಮೊರೊಕನ್ ಪತ್ರಕರ್ತ ರಿಡೌನೆ ಎರ್ರಾಂಡಾನಿ ಎಂಬವರು ತಮ್ಮ ಅಧೀಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “ಈದ್ ಅಲ್-ಅಝಾ … ಯಾವುದೇ ಕಾಮೆಂಟ್ ಇಲ್ಲ …” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

View this post on Instagram

بدون تعليق…

A post shared by Ridouane Erramdani (@ridouane_erramdani) on

ಇದಲ್ಲದೆ, ಮೊರಾಕೊದ ರಾಷ್ಟ್ರೀಯ ಭದ್ರತಾ ನಿರ್ದೇಶನಾಲಯದ ಫೇಸ್‌ಬುಕ್ ಪುಟದಲ್ಲಿ ಕೂಡಾ ಜುಲೈ 31 ರಂದು ಘಟನೆಯ ಬಗ್ಗೆ ಒಂದು ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ್ದಾರೆ.

الدارالبيضاء: توقيف 20 شخصا للاشتباه في تورطهم في أعمال السرقة التي شهدها سوق لبيع الأغنامأسفرت العمليات الأمنية التي…

Posted by DGSN – Direction Générale de la Sûreté Nationale on Thursday, July 30, 2020

ಈ ಘಟನೆ ಕಾಸಾಬ್ಲಾಂಕಾದ ಹಸಾನಿ ಬಳಿಯಲ್ಲಿ ನಡೆದಿದೆ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ಹಿಂಸಾಚಾರ ಮತ್ತು ಕಳ್ಳತನದಲ್ಲಿ ಭಾಗಿಯಾಗಿದ್ದಕ್ಕಾಗಿ 20 ಜನರನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ ಎಂದು ಪೋಸ್ಟ್ ಹೇಳಿದೆ.

ಆದ್ದರಿಂದ ಬಕ್ರೀದ್‌ಗೆ ಮುಂಚಿತವಾಗಿ ಈ ವೀಡಿಯೊವನ್ನು ಚಿತ್ರೀಕರಿಸಲಾಗಿದೆ ಎಂಬುವುದು ನಿಜವಾಗಿದ್ದರೂ ಇದು ಮೊರಾಕೊದ ಕಾಸಾಬ್ಲಾಂಕಾ ನಗರದ ಚಿತ್ರಣವಾಗಿದೆ ಹಾಗೂ ಮಹಾರಾಷ್ಟ್ರದ ವಿಡಿಯೊ ಅಲ್ಲ ಎಂಬುದು ಸ್ಪಷ್ಟವಾಗಿದೆ.

ಕೃಪೆ: ದಿಕ್ವಿಂಟ್


ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...